ಮಡಿಕೇರಿ :ಐದು ಬಾರಿ ಶಾಸಕರಾಗಿ ಜಿಲ್ಲೆಯ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಾ ಜನಮೆಚ್ಚುಗೆ ಗಳಿಸಿರುವ ಮಡಿಕೇರಿ ವಿಧಾನಾಸಭಾ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್ ಅವರಿಗೆ ಸಚಿವ ಸ್ಥಾನ ನೀಡಿ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡಿದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಪೂರಕ ವಾತಾವರಣ ಸೃಷ್ಟಿಯಾಗಲಿದೆ ಎಂದು ಸೋಮವಾರಪೇಟೆ ನಗರ ಬಿಜೆಪಿ ಅಧ್ಯಕ್ಷ ಎಸ್.ಆರ್.ಸೋಮೇಶ್ ಹೇಳಿದ್ದಾರೆ.
ಹೊರ ಜಿಲ್ಲೆಯ ಸಚಿವರಿಗೆ ಉಸ್ತುವಾರಿ ಜವಾಬ್ದಾರಿ ನೀಡಿದರೆ ಕೊಡಗಿನ ಸಮಸ್ಯೆಗಳು ಸುಲಭವಾಗಿ ಅರ್ಥವಾಗುವುದಿಲ್ಲವೆಂದ ಅವರು, ಎರಡು ವರ್ಷಗಳ ಕಾಲ ಜಿಲ್ಲೆಯನ್ನು ಕಾಡಿದ ಅತಿವೃಷ್ಟಿ ಪರಿಸ್ಥಿತಿಯನ್ನು ಶಾಸಕ ಅಪ್ಪಚ್ಚುರಂಜನ್ ಅವರು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದರು. ಕಳೆದ ವರ್ಷ ವಿದೇಶದಲ್ಲಿದ್ದ ಶಾಸಕರು ಮಹಾಮಳೆಯಿಂದ ಜಿಲ್ಲೆ ಸಂಕಷ್ಟದಲ್ಲಿದೆ ಎಂದು ಮಾಹಿತಿ ದೊರೆತ ತಕ್ಷಣ ಮರಳಿ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಪಕ್ಷನಿಷ್ಠೆ ಮತ್ತು ಜನಪರ ಕಾಳಜಿ ಹೊಂದಿರುವ ಅಪ್ಪಚ್ಚುರಂಜನ್ರಿಗೆ ಮೊದಲ ಸುತ್ತಿನಲ್ಲೇ ಸಚಿವ ಸ್ಥಾನ ಸಿಗಲಿದೆ ಎನ್ನುವ ನಿರೀಕ್ಷೆಗಳಿತ್ತು. ಆದರೆ ನಿರೀಕ್ಷೆ ಹುಸಿಯಾಗಿರುವುದರಿಂದ ಬೇಸರವಾಗಿದೆ ಎಂದು ತಿಳಿಸಿದ ಸೋಮೇಶ್, ಮುಂದೆ ಸಚಿವ ಸಂಪುಟ ವಿಸ್ತರಿಸುವ ಸಂದರ್ಭ ಮುಖ್ಯಮಂತ್ರಿಗಳು ಶಾಸಕರ ಅನುಭವ ಮತ್ತು ಹಿರಿತನವನ್ನು ಗಮನಿಸಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ವರದಾ, ತಾಲೂಕು ಪ್ರಧಾನ ಕಾರ್ಯದರ್ಶಿ ಮನುರೈ, ಉಪಾಧ್ಯಕ್ಷ ಹರಗ ಉದಯ, ಯುವ ಮೋರ್ಚಾದ ತಾಲ್ಲೂಕು ಅಧ್ಯಕ್ಷ ಕಿಬ್ಬೆಟ್ಟ ಮಧು ಹಾಗೂ ಪ್ರಧಾನ ಕಾರ್ಯದರ್ಶಿ ವಿ.ಸಿ.ಶರತ್ ಉಪಸ್ಥಿತರಿದ್ದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…