Advertisement
ಸುದ್ದಿಗಳು

ಅಪ್ಪಚ್ಚುರಂಜನ್‍ ಅವರಿಗೆ ಸಚಿವ ಸ್ಥಾನ ನೀಡಲು ಸೋಮವಾರಪೇಟೆ ಬಿಜೆಪಿ ಆಗ್ರಹ

Share

ಮಡಿಕೇರಿ :ಐದು ಬಾರಿ ಶಾಸಕರಾಗಿ ಜಿಲ್ಲೆಯ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಾ ಜನಮೆಚ್ಚುಗೆ ಗಳಿಸಿರುವ ಮಡಿಕೇರಿ ವಿಧಾನಾಸಭಾ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್ ಅವರಿಗೆ ಸಚಿವ ಸ್ಥಾನ ನೀಡಿ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡಿದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಪೂರಕ ವಾತಾವರಣ ಸೃಷ್ಟಿಯಾಗಲಿದೆ ಎಂದು ಸೋಮವಾರಪೇಟೆ ನಗರ ಬಿಜೆಪಿ ಅಧ್ಯಕ್ಷ ಎಸ್.ಆರ್.ಸೋಮೇಶ್ ಹೇಳಿದ್ದಾರೆ.

ಹೊರ ಜಿಲ್ಲೆಯ ಸಚಿವರಿಗೆ ಉಸ್ತುವಾರಿ ಜವಾಬ್ದಾರಿ ನೀಡಿದರೆ ಕೊಡಗಿನ ಸಮಸ್ಯೆಗಳು ಸುಲಭವಾಗಿ ಅರ್ಥವಾಗುವುದಿಲ್ಲವೆಂದ ಅವರು, ಎರಡು ವರ್ಷಗಳ ಕಾಲ ಜಿಲ್ಲೆಯನ್ನು ಕಾಡಿದ ಅತಿವೃಷ್ಟಿ ಪರಿಸ್ಥಿತಿಯನ್ನು ಶಾಸಕ ಅಪ್ಪಚ್ಚುರಂಜನ್ ಅವರು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದರು. ಕಳೆದ ವರ್ಷ ವಿದೇಶದಲ್ಲಿದ್ದ ಶಾಸಕರು ಮಹಾಮಳೆಯಿಂದ ಜಿಲ್ಲೆ ಸಂಕಷ್ಟದಲ್ಲಿದೆ ಎಂದು ಮಾಹಿತಿ ದೊರೆತ ತಕ್ಷಣ ಮರಳಿ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಪಕ್ಷನಿಷ್ಠೆ ಮತ್ತು ಜನಪರ ಕಾಳಜಿ ಹೊಂದಿರುವ ಅಪ್ಪಚ್ಚುರಂಜನ್‍ರಿಗೆ ಮೊದಲ ಸುತ್ತಿನಲ್ಲೇ ಸಚಿವ ಸ್ಥಾನ ಸಿಗಲಿದೆ ಎನ್ನುವ ನಿರೀಕ್ಷೆಗಳಿತ್ತು. ಆದರೆ ನಿರೀಕ್ಷೆ ಹುಸಿಯಾಗಿರುವುದರಿಂದ ಬೇಸರವಾಗಿದೆ ಎಂದು ತಿಳಿಸಿದ ಸೋಮೇಶ್, ಮುಂದೆ ಸಚಿವ ಸಂಪುಟ ವಿಸ್ತರಿಸುವ ಸಂದರ್ಭ ಮುಖ್ಯಮಂತ್ರಿಗಳು ಶಾಸಕರ ಅನುಭವ ಮತ್ತು ಹಿರಿತನವನ್ನು ಗಮನಿಸಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ವರದಾ, ತಾಲೂಕು ಪ್ರಧಾನ ಕಾರ್ಯದರ್ಶಿ ಮನುರೈ, ಉಪಾಧ್ಯಕ್ಷ ಹರಗ ಉದಯ, ಯುವ ಮೋರ್ಚಾದ ತಾಲ್ಲೂಕು ಅಧ್ಯಕ್ಷ ಕಿಬ್ಬೆಟ್ಟ ಮಧು ಹಾಗೂ ಪ್ರಧಾನ ಕಾರ್ಯದರ್ಶಿ ವಿ.ಸಿ.ಶರತ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

12 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

13 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

22 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

2 days ago