Advertisement
ಸುದ್ದಿಗಳು

ಅಪ್ಪಚ್ಚುರಂಜನ್‍ ಅವರಿಗೆ ಸಚಿವ ಸ್ಥಾನ ನೀಡಲು ಸೋಮವಾರಪೇಟೆ ಬಿಜೆಪಿ ಆಗ್ರಹ

Share

ಮಡಿಕೇರಿ :ಐದು ಬಾರಿ ಶಾಸಕರಾಗಿ ಜಿಲ್ಲೆಯ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಾ ಜನಮೆಚ್ಚುಗೆ ಗಳಿಸಿರುವ ಮಡಿಕೇರಿ ವಿಧಾನಾಸಭಾ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್ ಅವರಿಗೆ ಸಚಿವ ಸ್ಥಾನ ನೀಡಿ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡಿದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಪೂರಕ ವಾತಾವರಣ ಸೃಷ್ಟಿಯಾಗಲಿದೆ ಎಂದು ಸೋಮವಾರಪೇಟೆ ನಗರ ಬಿಜೆಪಿ ಅಧ್ಯಕ್ಷ ಎಸ್.ಆರ್.ಸೋಮೇಶ್ ಹೇಳಿದ್ದಾರೆ.

Advertisement

ಹೊರ ಜಿಲ್ಲೆಯ ಸಚಿವರಿಗೆ ಉಸ್ತುವಾರಿ ಜವಾಬ್ದಾರಿ ನೀಡಿದರೆ ಕೊಡಗಿನ ಸಮಸ್ಯೆಗಳು ಸುಲಭವಾಗಿ ಅರ್ಥವಾಗುವುದಿಲ್ಲವೆಂದ ಅವರು, ಎರಡು ವರ್ಷಗಳ ಕಾಲ ಜಿಲ್ಲೆಯನ್ನು ಕಾಡಿದ ಅತಿವೃಷ್ಟಿ ಪರಿಸ್ಥಿತಿಯನ್ನು ಶಾಸಕ ಅಪ್ಪಚ್ಚುರಂಜನ್ ಅವರು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದರು. ಕಳೆದ ವರ್ಷ ವಿದೇಶದಲ್ಲಿದ್ದ ಶಾಸಕರು ಮಹಾಮಳೆಯಿಂದ ಜಿಲ್ಲೆ ಸಂಕಷ್ಟದಲ್ಲಿದೆ ಎಂದು ಮಾಹಿತಿ ದೊರೆತ ತಕ್ಷಣ ಮರಳಿ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಪಕ್ಷನಿಷ್ಠೆ ಮತ್ತು ಜನಪರ ಕಾಳಜಿ ಹೊಂದಿರುವ ಅಪ್ಪಚ್ಚುರಂಜನ್‍ರಿಗೆ ಮೊದಲ ಸುತ್ತಿನಲ್ಲೇ ಸಚಿವ ಸ್ಥಾನ ಸಿಗಲಿದೆ ಎನ್ನುವ ನಿರೀಕ್ಷೆಗಳಿತ್ತು. ಆದರೆ ನಿರೀಕ್ಷೆ ಹುಸಿಯಾಗಿರುವುದರಿಂದ ಬೇಸರವಾಗಿದೆ ಎಂದು ತಿಳಿಸಿದ ಸೋಮೇಶ್, ಮುಂದೆ ಸಚಿವ ಸಂಪುಟ ವಿಸ್ತರಿಸುವ ಸಂದರ್ಭ ಮುಖ್ಯಮಂತ್ರಿಗಳು ಶಾಸಕರ ಅನುಭವ ಮತ್ತು ಹಿರಿತನವನ್ನು ಗಮನಿಸಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ವರದಾ, ತಾಲೂಕು ಪ್ರಧಾನ ಕಾರ್ಯದರ್ಶಿ ಮನುರೈ, ಉಪಾಧ್ಯಕ್ಷ ಹರಗ ಉದಯ, ಯುವ ಮೋರ್ಚಾದ ತಾಲ್ಲೂಕು ಅಧ್ಯಕ್ಷ ಕಿಬ್ಬೆಟ್ಟ ಮಧು ಹಾಗೂ ಪ್ರಧಾನ ಕಾರ್ಯದರ್ಶಿ ವಿ.ಸಿ.ಶರತ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

15 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago