Advertisement
ಸುದ್ದಿಗಳು

ಅಪ್ಪಚ್ಚುರಂಜನ್‍ ಅವರಿಗೆ ಸಚಿವ ಸ್ಥಾನ ನೀಡಲು ಸೋಮವಾರಪೇಟೆ ಬಿಜೆಪಿ ಆಗ್ರಹ

Share

ಮಡಿಕೇರಿ :ಐದು ಬಾರಿ ಶಾಸಕರಾಗಿ ಜಿಲ್ಲೆಯ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಾ ಜನಮೆಚ್ಚುಗೆ ಗಳಿಸಿರುವ ಮಡಿಕೇರಿ ವಿಧಾನಾಸಭಾ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್ ಅವರಿಗೆ ಸಚಿವ ಸ್ಥಾನ ನೀಡಿ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡಿದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಪೂರಕ ವಾತಾವರಣ ಸೃಷ್ಟಿಯಾಗಲಿದೆ ಎಂದು ಸೋಮವಾರಪೇಟೆ ನಗರ ಬಿಜೆಪಿ ಅಧ್ಯಕ್ಷ ಎಸ್.ಆರ್.ಸೋಮೇಶ್ ಹೇಳಿದ್ದಾರೆ.

ಹೊರ ಜಿಲ್ಲೆಯ ಸಚಿವರಿಗೆ ಉಸ್ತುವಾರಿ ಜವಾಬ್ದಾರಿ ನೀಡಿದರೆ ಕೊಡಗಿನ ಸಮಸ್ಯೆಗಳು ಸುಲಭವಾಗಿ ಅರ್ಥವಾಗುವುದಿಲ್ಲವೆಂದ ಅವರು, ಎರಡು ವರ್ಷಗಳ ಕಾಲ ಜಿಲ್ಲೆಯನ್ನು ಕಾಡಿದ ಅತಿವೃಷ್ಟಿ ಪರಿಸ್ಥಿತಿಯನ್ನು ಶಾಸಕ ಅಪ್ಪಚ್ಚುರಂಜನ್ ಅವರು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದರು. ಕಳೆದ ವರ್ಷ ವಿದೇಶದಲ್ಲಿದ್ದ ಶಾಸಕರು ಮಹಾಮಳೆಯಿಂದ ಜಿಲ್ಲೆ ಸಂಕಷ್ಟದಲ್ಲಿದೆ ಎಂದು ಮಾಹಿತಿ ದೊರೆತ ತಕ್ಷಣ ಮರಳಿ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಪಕ್ಷನಿಷ್ಠೆ ಮತ್ತು ಜನಪರ ಕಾಳಜಿ ಹೊಂದಿರುವ ಅಪ್ಪಚ್ಚುರಂಜನ್‍ರಿಗೆ ಮೊದಲ ಸುತ್ತಿನಲ್ಲೇ ಸಚಿವ ಸ್ಥಾನ ಸಿಗಲಿದೆ ಎನ್ನುವ ನಿರೀಕ್ಷೆಗಳಿತ್ತು. ಆದರೆ ನಿರೀಕ್ಷೆ ಹುಸಿಯಾಗಿರುವುದರಿಂದ ಬೇಸರವಾಗಿದೆ ಎಂದು ತಿಳಿಸಿದ ಸೋಮೇಶ್, ಮುಂದೆ ಸಚಿವ ಸಂಪುಟ ವಿಸ್ತರಿಸುವ ಸಂದರ್ಭ ಮುಖ್ಯಮಂತ್ರಿಗಳು ಶಾಸಕರ ಅನುಭವ ಮತ್ತು ಹಿರಿತನವನ್ನು ಗಮನಿಸಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ವರದಾ, ತಾಲೂಕು ಪ್ರಧಾನ ಕಾರ್ಯದರ್ಶಿ ಮನುರೈ, ಉಪಾಧ್ಯಕ್ಷ ಹರಗ ಉದಯ, ಯುವ ಮೋರ್ಚಾದ ತಾಲ್ಲೂಕು ಅಧ್ಯಕ್ಷ ಕಿಬ್ಬೆಟ್ಟ ಮಧು ಹಾಗೂ ಪ್ರಧಾನ ಕಾರ್ಯದರ್ಶಿ ವಿ.ಸಿ.ಶರತ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

1 hour ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

2 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

3 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

4 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

16 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

16 hours ago