Advertisement
ಅಂಕಣ

ಅಪ್ಪನೆಂದರೆ ಅಪ್ಪ ಅಷ್ಟೇ!!!!

Share
ಮಕ್ಕಳು ಆ ದಿನ  ಖುಷಿಯಿಂದಲೇ ಒಳ ಬಂದವು, ಅಪ್ಪ, ಅಪ್ಪ ಎಂದು ಕರೆಯುತ್ತಲೇ ಮನೆ ತುಂಬಾ ಓಡಾಡಿದರು. ಬಾಯಾರಿಕೆ ಕುಡಿಯುತ್ತಿದ್ದ ಅಪ್ಪನ ನ್ನು ನೋಡಿ ಬಹಳ ಹರ್ಷಿಸಿದರು. ಯಾವತ್ತೂ ಅಪ್ಪ ಕೆಲಸ ಮುಗಿಸಿ ಬರುವಾಗ ಮಲಗಿರುತ್ತಿದ್ದ ಮಕ್ಕಳು ಇಂದು ಶಾಲೆಯಿಂದ ಬರುವಾಗಲೇ ಮನೆಯ ಹೊರಗಿದ್ದ ಚಪ್ಪಲುಗಳನ್ನು ನೋಡಿ ಸಂತೋಷ ಪಟ್ಟವು. ಈ ದಿನ ಅಪ್ಪನೊಂದಿಗೆ ಸಂತೋಷವಾಗಿ ಕಳೆಯಬಹುದಲ್ಲಾ ಎಂದು ಕುಣಿದಾಡಿದವು. ಮನೆಗೆ ಬಂದ ಮಕ್ಕಳನ್ನು ಕರೆದುಕೊಂಡು ಪೇಟೆಗೆ ಹೋದ ಅಪ್ಪ ಬೇಕೆನಿಸಿದೆಲ್ಲವನ್ನು ತೆಗೆಸಿ ಕೊಟ್ಟು ಕಣ್ಣಿನಲ್ಲಿ ಪ್ರೀತಿಯ  ಸೂಸಿದಾಗ ಅಪ್ಪನ ಬಗೆಗಿನ ಕೋಪ ವೆಲ್ಲಾ ತಣ್ಣಗೆ ದೂರವಾಯ್ತು. ಅಪ್ಪ ಜೊತೆಗಿದ್ದರೆ ಜಗತ್ತೇ ನಮ್ಮದು ಎಂಬ ಖುಷಿಯ ಮುಂದೆ ಉಳಿದೆಲ್ಲಾ ಭಾವನೆಗಳು ಗೌಣ.
ಗೆಳೆಯರ ಅಪ್ಪಂದಿರು ವಾಕಿಂಗ್, ಔಟಿಂಗ್ ಅಂತ ಕರೆದುಕೊಂಡು ಹೋಗುತ್ತಿದ್ದರೆ ನಮ್ಮ ಅಪ್ಪನನ್ಬು ಕಾಣುವುದೇ ಅಪರೂಪ ಎಂಬಂತ ಪರಿಸ್ಥಿತಿ ಮನೆಯಲ್ಲಿ.ಬೆಳಗಿನ ಹೊತ್ತು ಎಳುವಾಗಲೇ ಅಪ್ಪ ಕೆಲಸಕ್ಕೆ ಹೋಗಿಯಾಗಿರುತ್ತಿತ್ತು.  ಮನೆ ವಾರ್ತೆ ಗಳಲ್ಲಿ  ನಿರತಳಾಗಿರುವ ಅಮ್ಮನನ್ನು  ನೋಡುತ್ತಾ ಬೆಳೆವ ಮಕ್ಕಳಿಗೆ ಅಪ್ಪನ ಭಾವನೆಗಳು ಅರ್ಥವೇ ಆಗದು.
ದಿನದಿಂದ ದಿನಕ್ಕೆ ಏರುತ್ತಿರುವ ದಿನಬಳಕೆಯ ಸಾಮಾನುಗಳ ಖರ್ಚು, ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ, ಸ್ವಂತದ್ದು ಅಂತ ಒಂದು ಪುಟ್ಟ ಎರಡು ಬೆಡ್ ರೂಮ್ ಗಳ ಮನೆಯ  ಕನಸು ,ಇದರ ನಡುವೆ ಹೆಚ್ಚುತ್ತಿರುವ ಪ್ರಾಯ, ಅದರೊಂದಿಗೆ ಕಾಯಿಲೆ ಕಸಾಲೆಗಳು. ಓಹ್ ಒಂದೇ ಎರಡೇ ಅಪ್ಪಂದಿರ ಸಮಸ್ಯೆಗಳು. ಕೆಲವರು  ವಟವಟ ಮಾತನಾಡುವವರು ಹಂಚಿಕೊಳ್ಳುತ್ತಾರೆ ಮೌನ ದಲ್ಲಿರುವವರು ಮನಸಲ್ಲೇ ಕೊರಗುತ್ತಾರೆ. ಒಟ್ಟಾರೆ ಯಾಗಿ ತಮ್ಮ ಸುಖವನ್ನು ಬದಿಗೊತ್ತಿ  , ತನ್ನವರು, ಮನೆ ಮಕ್ಕಳು ಅಂತ ದುಡಿಯುವುದು ಅಪ್ಪ ಅಮ್ಮಂದಿರಿಗೆ ಮಾತ್ರ ಸಾಧ್ಯ. ಅಮ್ಮಂದಿರು ಕಷ್ಟ ಸುಖ ಹಂಚಿಕೊಳ್ಳುತ್ತಾರೆ, ಅಪ್ಪಂದಿರು ಭಾವನೆಗಳನ್ನು ವ್ಯಕ್ತಪಡಿಸುವುದನ್ನು ಇಷ್ಟಪಡಲಾ ರರು.  ಒಂದು ನಿರ್ದಿಷ್ಟ ವೇತನ ಪಡೆಯು ವ ಉದ್ಯೋಗವಿದ್ದಾಗ  ಮಕ್ಕಳ ಆವಶ್ಯಕತೆ ಗಳಿಗೆ ಸ್ಪಂದಿಸುವ ದೈರ್ಯವಿರುತ್ತದೆ ಆದರೆ  ಎಲ್ಲಾ ಅಪ್ಪಂದಿರಿಗೂ ಆ ಭಾಗ್ಯವಿರುವುದಿಲ್ಲ ತಾನೇ..‌?ದಿನ ನಿತ್ಯದ ಅಗತ್ಯ ಗಳನ್ನು ಪೂರೈಸಲೇ ಹೆಣಗುವ  ಹೆತ್ತವರಿರುತ್ತಾರೆ. ಒಂದು ಹೊತ್ತಿನ ಊಟಕ್ಕಾಗಿ ಪರದಾಡುವ ಎಷ್ಟೋ ಸಂಸಾರಗಳಿವೆ. ಅಲ್ಲಿ ಯಾವ ಭಾವನೆಗಳಿಗೂ ಬೆಲೆಯಿಲ್ಲ. ಆಯಾ ಹೊತ್ತಿನ ಅಗತ್ಯ ಗಳು ಪೂರೈಕೆ ಯಾದರೆ ಸಾಕು ಎಂಬ ಭಾವ ಮಾತ್ರ.
ಅಪ್ಪನೆಂದರೆ ತನ್ನೆಷ್ಟೋ ಕನಸುಗಳನ್ನು ಮನಸಿನಲ್ಲೇ ಕಟ್ಟಿ ಹಾಕಿ ಮಕ್ಕಳಲ್ಲಿ ಹೊಸ ಬದುಕಿನ,ಒಳ್ಳೆಯ ಭವಿಷ್ಯಕ್ಕೆ ಗಟ್ಟಿಯಾದ ಅಡಿಪಾಯ ಹಾಕಲು ಅಗತ್ಯವಾದುದನ್ನು ಒದಗಿಸುವುದರಲ್ಲೇ ತನ್ನ ಸಂತೋಷ ಕಾಣುವವನು.
ಬದುಕಿನ ಹಲವು ಮುಖಗಳ ಅನಾವರಣ ನಮಗಾಗದಂತೆ ಬೆಳೆಸುವುದು ಅಪ್ಪಂದಿರಿಂದ ಮಾತ್ರವೇ ಸಾಧ್ಯ.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

5 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

5 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

5 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago