ಅನುಕ್ರಮ

ಅಪ್ಪನೆಂದರೆ ಅಪ್ಪ ಅಷ್ಟೇ!!!!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಮಕ್ಕಳು ಆ ದಿನ  ಖುಷಿಯಿಂದಲೇ ಒಳ ಬಂದವು, ಅಪ್ಪ, ಅಪ್ಪ ಎಂದು ಕರೆಯುತ್ತಲೇ ಮನೆ ತುಂಬಾ ಓಡಾಡಿದರು. ಬಾಯಾರಿಕೆ ಕುಡಿಯುತ್ತಿದ್ದ ಅಪ್ಪನ ನ್ನು ನೋಡಿ ಬಹಳ ಹರ್ಷಿಸಿದರು. ಯಾವತ್ತೂ ಅಪ್ಪ ಕೆಲಸ ಮುಗಿಸಿ ಬರುವಾಗ ಮಲಗಿರುತ್ತಿದ್ದ ಮಕ್ಕಳು ಇಂದು ಶಾಲೆಯಿಂದ ಬರುವಾಗಲೇ ಮನೆಯ ಹೊರಗಿದ್ದ ಚಪ್ಪಲುಗಳನ್ನು ನೋಡಿ ಸಂತೋಷ ಪಟ್ಟವು. ಈ ದಿನ ಅಪ್ಪನೊಂದಿಗೆ ಸಂತೋಷವಾಗಿ ಕಳೆಯಬಹುದಲ್ಲಾ ಎಂದು ಕುಣಿದಾಡಿದವು. ಮನೆಗೆ ಬಂದ ಮಕ್ಕಳನ್ನು ಕರೆದುಕೊಂಡು ಪೇಟೆಗೆ ಹೋದ ಅಪ್ಪ ಬೇಕೆನಿಸಿದೆಲ್ಲವನ್ನು ತೆಗೆಸಿ ಕೊಟ್ಟು ಕಣ್ಣಿನಲ್ಲಿ ಪ್ರೀತಿಯ  ಸೂಸಿದಾಗ ಅಪ್ಪನ ಬಗೆಗಿನ ಕೋಪ ವೆಲ್ಲಾ ತಣ್ಣಗೆ ದೂರವಾಯ್ತು. ಅಪ್ಪ ಜೊತೆಗಿದ್ದರೆ ಜಗತ್ತೇ ನಮ್ಮದು ಎಂಬ ಖುಷಿಯ ಮುಂದೆ ಉಳಿದೆಲ್ಲಾ ಭಾವನೆಗಳು ಗೌಣ.
ಗೆಳೆಯರ ಅಪ್ಪಂದಿರು ವಾಕಿಂಗ್, ಔಟಿಂಗ್ ಅಂತ ಕರೆದುಕೊಂಡು ಹೋಗುತ್ತಿದ್ದರೆ ನಮ್ಮ ಅಪ್ಪನನ್ಬು ಕಾಣುವುದೇ ಅಪರೂಪ ಎಂಬಂತ ಪರಿಸ್ಥಿತಿ ಮನೆಯಲ್ಲಿ.ಬೆಳಗಿನ ಹೊತ್ತು ಎಳುವಾಗಲೇ ಅಪ್ಪ ಕೆಲಸಕ್ಕೆ ಹೋಗಿಯಾಗಿರುತ್ತಿತ್ತು.  ಮನೆ ವಾರ್ತೆ ಗಳಲ್ಲಿ  ನಿರತಳಾಗಿರುವ ಅಮ್ಮನನ್ನು  ನೋಡುತ್ತಾ ಬೆಳೆವ ಮಕ್ಕಳಿಗೆ ಅಪ್ಪನ ಭಾವನೆಗಳು ಅರ್ಥವೇ ಆಗದು.
ದಿನದಿಂದ ದಿನಕ್ಕೆ ಏರುತ್ತಿರುವ ದಿನಬಳಕೆಯ ಸಾಮಾನುಗಳ ಖರ್ಚು, ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ, ಸ್ವಂತದ್ದು ಅಂತ ಒಂದು ಪುಟ್ಟ ಎರಡು ಬೆಡ್ ರೂಮ್ ಗಳ ಮನೆಯ  ಕನಸು ,ಇದರ ನಡುವೆ ಹೆಚ್ಚುತ್ತಿರುವ ಪ್ರಾಯ, ಅದರೊಂದಿಗೆ ಕಾಯಿಲೆ ಕಸಾಲೆಗಳು. ಓಹ್ ಒಂದೇ ಎರಡೇ ಅಪ್ಪಂದಿರ ಸಮಸ್ಯೆಗಳು. ಕೆಲವರು  ವಟವಟ ಮಾತನಾಡುವವರು ಹಂಚಿಕೊಳ್ಳುತ್ತಾರೆ ಮೌನ ದಲ್ಲಿರುವವರು ಮನಸಲ್ಲೇ ಕೊರಗುತ್ತಾರೆ. ಒಟ್ಟಾರೆ ಯಾಗಿ ತಮ್ಮ ಸುಖವನ್ನು ಬದಿಗೊತ್ತಿ  , ತನ್ನವರು, ಮನೆ ಮಕ್ಕಳು ಅಂತ ದುಡಿಯುವುದು ಅಪ್ಪ ಅಮ್ಮಂದಿರಿಗೆ ಮಾತ್ರ ಸಾಧ್ಯ. ಅಮ್ಮಂದಿರು ಕಷ್ಟ ಸುಖ ಹಂಚಿಕೊಳ್ಳುತ್ತಾರೆ, ಅಪ್ಪಂದಿರು ಭಾವನೆಗಳನ್ನು ವ್ಯಕ್ತಪಡಿಸುವುದನ್ನು ಇಷ್ಟಪಡಲಾ ರರು.  ಒಂದು ನಿರ್ದಿಷ್ಟ ವೇತನ ಪಡೆಯು ವ ಉದ್ಯೋಗವಿದ್ದಾಗ  ಮಕ್ಕಳ ಆವಶ್ಯಕತೆ ಗಳಿಗೆ ಸ್ಪಂದಿಸುವ ದೈರ್ಯವಿರುತ್ತದೆ ಆದರೆ  ಎಲ್ಲಾ ಅಪ್ಪಂದಿರಿಗೂ ಆ ಭಾಗ್ಯವಿರುವುದಿಲ್ಲ ತಾನೇ..‌?ದಿನ ನಿತ್ಯದ ಅಗತ್ಯ ಗಳನ್ನು ಪೂರೈಸಲೇ ಹೆಣಗುವ  ಹೆತ್ತವರಿರುತ್ತಾರೆ. ಒಂದು ಹೊತ್ತಿನ ಊಟಕ್ಕಾಗಿ ಪರದಾಡುವ ಎಷ್ಟೋ ಸಂಸಾರಗಳಿವೆ. ಅಲ್ಲಿ ಯಾವ ಭಾವನೆಗಳಿಗೂ ಬೆಲೆಯಿಲ್ಲ. ಆಯಾ ಹೊತ್ತಿನ ಅಗತ್ಯ ಗಳು ಪೂರೈಕೆ ಯಾದರೆ ಸಾಕು ಎಂಬ ಭಾವ ಮಾತ್ರ.
ಅಪ್ಪನೆಂದರೆ ತನ್ನೆಷ್ಟೋ ಕನಸುಗಳನ್ನು ಮನಸಿನಲ್ಲೇ ಕಟ್ಟಿ ಹಾಕಿ ಮಕ್ಕಳಲ್ಲಿ ಹೊಸ ಬದುಕಿನ,ಒಳ್ಳೆಯ ಭವಿಷ್ಯಕ್ಕೆ ಗಟ್ಟಿಯಾದ ಅಡಿಪಾಯ ಹಾಕಲು ಅಗತ್ಯವಾದುದನ್ನು ಒದಗಿಸುವುದರಲ್ಲೇ ತನ್ನ ಸಂತೋಷ ಕಾಣುವವನು.
ಬದುಕಿನ ಹಲವು ಮುಖಗಳ ಅನಾವರಣ ನಮಗಾಗದಂತೆ ಬೆಳೆಸುವುದು ಅಪ್ಪಂದಿರಿಂದ ಮಾತ್ರವೇ ಸಾಧ್ಯ.
Advertisement
/**/
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…

10 hours ago

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…

10 hours ago

ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?

ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…

14 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…

15 hours ago

ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…

15 hours ago

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…

20 hours ago