Advertisement
ಅನುಕ್ರಮ

ಅಪ್ಪನೆಂದರೆ ಅಪ್ಪ ಅಷ್ಟೇ!!!!

Share
ಮಕ್ಕಳು ಆ ದಿನ  ಖುಷಿಯಿಂದಲೇ ಒಳ ಬಂದವು, ಅಪ್ಪ, ಅಪ್ಪ ಎಂದು ಕರೆಯುತ್ತಲೇ ಮನೆ ತುಂಬಾ ಓಡಾಡಿದರು. ಬಾಯಾರಿಕೆ ಕುಡಿಯುತ್ತಿದ್ದ ಅಪ್ಪನ ನ್ನು ನೋಡಿ ಬಹಳ ಹರ್ಷಿಸಿದರು. ಯಾವತ್ತೂ ಅಪ್ಪ ಕೆಲಸ ಮುಗಿಸಿ ಬರುವಾಗ ಮಲಗಿರುತ್ತಿದ್ದ ಮಕ್ಕಳು ಇಂದು ಶಾಲೆಯಿಂದ ಬರುವಾಗಲೇ ಮನೆಯ ಹೊರಗಿದ್ದ ಚಪ್ಪಲುಗಳನ್ನು ನೋಡಿ ಸಂತೋಷ ಪಟ್ಟವು. ಈ ದಿನ ಅಪ್ಪನೊಂದಿಗೆ ಸಂತೋಷವಾಗಿ ಕಳೆಯಬಹುದಲ್ಲಾ ಎಂದು ಕುಣಿದಾಡಿದವು. ಮನೆಗೆ ಬಂದ ಮಕ್ಕಳನ್ನು ಕರೆದುಕೊಂಡು ಪೇಟೆಗೆ ಹೋದ ಅಪ್ಪ ಬೇಕೆನಿಸಿದೆಲ್ಲವನ್ನು ತೆಗೆಸಿ ಕೊಟ್ಟು ಕಣ್ಣಿನಲ್ಲಿ ಪ್ರೀತಿಯ  ಸೂಸಿದಾಗ ಅಪ್ಪನ ಬಗೆಗಿನ ಕೋಪ ವೆಲ್ಲಾ ತಣ್ಣಗೆ ದೂರವಾಯ್ತು. ಅಪ್ಪ ಜೊತೆಗಿದ್ದರೆ ಜಗತ್ತೇ ನಮ್ಮದು ಎಂಬ ಖುಷಿಯ ಮುಂದೆ ಉಳಿದೆಲ್ಲಾ ಭಾವನೆಗಳು ಗೌಣ.
ಗೆಳೆಯರ ಅಪ್ಪಂದಿರು ವಾಕಿಂಗ್, ಔಟಿಂಗ್ ಅಂತ ಕರೆದುಕೊಂಡು ಹೋಗುತ್ತಿದ್ದರೆ ನಮ್ಮ ಅಪ್ಪನನ್ಬು ಕಾಣುವುದೇ ಅಪರೂಪ ಎಂಬಂತ ಪರಿಸ್ಥಿತಿ ಮನೆಯಲ್ಲಿ.ಬೆಳಗಿನ ಹೊತ್ತು ಎಳುವಾಗಲೇ ಅಪ್ಪ ಕೆಲಸಕ್ಕೆ ಹೋಗಿಯಾಗಿರುತ್ತಿತ್ತು.  ಮನೆ ವಾರ್ತೆ ಗಳಲ್ಲಿ  ನಿರತಳಾಗಿರುವ ಅಮ್ಮನನ್ನು  ನೋಡುತ್ತಾ ಬೆಳೆವ ಮಕ್ಕಳಿಗೆ ಅಪ್ಪನ ಭಾವನೆಗಳು ಅರ್ಥವೇ ಆಗದು.
ದಿನದಿಂದ ದಿನಕ್ಕೆ ಏರುತ್ತಿರುವ ದಿನಬಳಕೆಯ ಸಾಮಾನುಗಳ ಖರ್ಚು, ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ, ಸ್ವಂತದ್ದು ಅಂತ ಒಂದು ಪುಟ್ಟ ಎರಡು ಬೆಡ್ ರೂಮ್ ಗಳ ಮನೆಯ  ಕನಸು ,ಇದರ ನಡುವೆ ಹೆಚ್ಚುತ್ತಿರುವ ಪ್ರಾಯ, ಅದರೊಂದಿಗೆ ಕಾಯಿಲೆ ಕಸಾಲೆಗಳು. ಓಹ್ ಒಂದೇ ಎರಡೇ ಅಪ್ಪಂದಿರ ಸಮಸ್ಯೆಗಳು. ಕೆಲವರು  ವಟವಟ ಮಾತನಾಡುವವರು ಹಂಚಿಕೊಳ್ಳುತ್ತಾರೆ ಮೌನ ದಲ್ಲಿರುವವರು ಮನಸಲ್ಲೇ ಕೊರಗುತ್ತಾರೆ. ಒಟ್ಟಾರೆ ಯಾಗಿ ತಮ್ಮ ಸುಖವನ್ನು ಬದಿಗೊತ್ತಿ  , ತನ್ನವರು, ಮನೆ ಮಕ್ಕಳು ಅಂತ ದುಡಿಯುವುದು ಅಪ್ಪ ಅಮ್ಮಂದಿರಿಗೆ ಮಾತ್ರ ಸಾಧ್ಯ. ಅಮ್ಮಂದಿರು ಕಷ್ಟ ಸುಖ ಹಂಚಿಕೊಳ್ಳುತ್ತಾರೆ, ಅಪ್ಪಂದಿರು ಭಾವನೆಗಳನ್ನು ವ್ಯಕ್ತಪಡಿಸುವುದನ್ನು ಇಷ್ಟಪಡಲಾ ರರು.  ಒಂದು ನಿರ್ದಿಷ್ಟ ವೇತನ ಪಡೆಯು ವ ಉದ್ಯೋಗವಿದ್ದಾಗ  ಮಕ್ಕಳ ಆವಶ್ಯಕತೆ ಗಳಿಗೆ ಸ್ಪಂದಿಸುವ ದೈರ್ಯವಿರುತ್ತದೆ ಆದರೆ  ಎಲ್ಲಾ ಅಪ್ಪಂದಿರಿಗೂ ಆ ಭಾಗ್ಯವಿರುವುದಿಲ್ಲ ತಾನೇ..‌?ದಿನ ನಿತ್ಯದ ಅಗತ್ಯ ಗಳನ್ನು ಪೂರೈಸಲೇ ಹೆಣಗುವ  ಹೆತ್ತವರಿರುತ್ತಾರೆ. ಒಂದು ಹೊತ್ತಿನ ಊಟಕ್ಕಾಗಿ ಪರದಾಡುವ ಎಷ್ಟೋ ಸಂಸಾರಗಳಿವೆ. ಅಲ್ಲಿ ಯಾವ ಭಾವನೆಗಳಿಗೂ ಬೆಲೆಯಿಲ್ಲ. ಆಯಾ ಹೊತ್ತಿನ ಅಗತ್ಯ ಗಳು ಪೂರೈಕೆ ಯಾದರೆ ಸಾಕು ಎಂಬ ಭಾವ ಮಾತ್ರ.
ಅಪ್ಪನೆಂದರೆ ತನ್ನೆಷ್ಟೋ ಕನಸುಗಳನ್ನು ಮನಸಿನಲ್ಲೇ ಕಟ್ಟಿ ಹಾಕಿ ಮಕ್ಕಳಲ್ಲಿ ಹೊಸ ಬದುಕಿನ,ಒಳ್ಳೆಯ ಭವಿಷ್ಯಕ್ಕೆ ಗಟ್ಟಿಯಾದ ಅಡಿಪಾಯ ಹಾಕಲು ಅಗತ್ಯವಾದುದನ್ನು ಒದಗಿಸುವುದರಲ್ಲೇ ತನ್ನ ಸಂತೋಷ ಕಾಣುವವನು.
ಬದುಕಿನ ಹಲವು ಮುಖಗಳ ಅನಾವರಣ ನಮಗಾಗದಂತೆ ಬೆಳೆಸುವುದು ಅಪ್ಪಂದಿರಿಂದ ಮಾತ್ರವೇ ಸಾಧ್ಯ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

42 minutes ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

48 minutes ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

1 hour ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

1 hour ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

18 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago