Advertisement
ಅನುಕ್ರಮ

ಅಪ್ಪನೆಂದರೆ ಅಪ್ಪ ಅಷ್ಟೇ!!!!

Share
ಮಕ್ಕಳು ಆ ದಿನ  ಖುಷಿಯಿಂದಲೇ ಒಳ ಬಂದವು, ಅಪ್ಪ, ಅಪ್ಪ ಎಂದು ಕರೆಯುತ್ತಲೇ ಮನೆ ತುಂಬಾ ಓಡಾಡಿದರು. ಬಾಯಾರಿಕೆ ಕುಡಿಯುತ್ತಿದ್ದ ಅಪ್ಪನ ನ್ನು ನೋಡಿ ಬಹಳ ಹರ್ಷಿಸಿದರು. ಯಾವತ್ತೂ ಅಪ್ಪ ಕೆಲಸ ಮುಗಿಸಿ ಬರುವಾಗ ಮಲಗಿರುತ್ತಿದ್ದ ಮಕ್ಕಳು ಇಂದು ಶಾಲೆಯಿಂದ ಬರುವಾಗಲೇ ಮನೆಯ ಹೊರಗಿದ್ದ ಚಪ್ಪಲುಗಳನ್ನು ನೋಡಿ ಸಂತೋಷ ಪಟ್ಟವು. ಈ ದಿನ ಅಪ್ಪನೊಂದಿಗೆ ಸಂತೋಷವಾಗಿ ಕಳೆಯಬಹುದಲ್ಲಾ ಎಂದು ಕುಣಿದಾಡಿದವು. ಮನೆಗೆ ಬಂದ ಮಕ್ಕಳನ್ನು ಕರೆದುಕೊಂಡು ಪೇಟೆಗೆ ಹೋದ ಅಪ್ಪ ಬೇಕೆನಿಸಿದೆಲ್ಲವನ್ನು ತೆಗೆಸಿ ಕೊಟ್ಟು ಕಣ್ಣಿನಲ್ಲಿ ಪ್ರೀತಿಯ  ಸೂಸಿದಾಗ ಅಪ್ಪನ ಬಗೆಗಿನ ಕೋಪ ವೆಲ್ಲಾ ತಣ್ಣಗೆ ದೂರವಾಯ್ತು. ಅಪ್ಪ ಜೊತೆಗಿದ್ದರೆ ಜಗತ್ತೇ ನಮ್ಮದು ಎಂಬ ಖುಷಿಯ ಮುಂದೆ ಉಳಿದೆಲ್ಲಾ ಭಾವನೆಗಳು ಗೌಣ.
ಗೆಳೆಯರ ಅಪ್ಪಂದಿರು ವಾಕಿಂಗ್, ಔಟಿಂಗ್ ಅಂತ ಕರೆದುಕೊಂಡು ಹೋಗುತ್ತಿದ್ದರೆ ನಮ್ಮ ಅಪ್ಪನನ್ಬು ಕಾಣುವುದೇ ಅಪರೂಪ ಎಂಬಂತ ಪರಿಸ್ಥಿತಿ ಮನೆಯಲ್ಲಿ.ಬೆಳಗಿನ ಹೊತ್ತು ಎಳುವಾಗಲೇ ಅಪ್ಪ ಕೆಲಸಕ್ಕೆ ಹೋಗಿಯಾಗಿರುತ್ತಿತ್ತು.  ಮನೆ ವಾರ್ತೆ ಗಳಲ್ಲಿ  ನಿರತಳಾಗಿರುವ ಅಮ್ಮನನ್ನು  ನೋಡುತ್ತಾ ಬೆಳೆವ ಮಕ್ಕಳಿಗೆ ಅಪ್ಪನ ಭಾವನೆಗಳು ಅರ್ಥವೇ ಆಗದು.
ದಿನದಿಂದ ದಿನಕ್ಕೆ ಏರುತ್ತಿರುವ ದಿನಬಳಕೆಯ ಸಾಮಾನುಗಳ ಖರ್ಚು, ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ, ಸ್ವಂತದ್ದು ಅಂತ ಒಂದು ಪುಟ್ಟ ಎರಡು ಬೆಡ್ ರೂಮ್ ಗಳ ಮನೆಯ  ಕನಸು ,ಇದರ ನಡುವೆ ಹೆಚ್ಚುತ್ತಿರುವ ಪ್ರಾಯ, ಅದರೊಂದಿಗೆ ಕಾಯಿಲೆ ಕಸಾಲೆಗಳು. ಓಹ್ ಒಂದೇ ಎರಡೇ ಅಪ್ಪಂದಿರ ಸಮಸ್ಯೆಗಳು. ಕೆಲವರು  ವಟವಟ ಮಾತನಾಡುವವರು ಹಂಚಿಕೊಳ್ಳುತ್ತಾರೆ ಮೌನ ದಲ್ಲಿರುವವರು ಮನಸಲ್ಲೇ ಕೊರಗುತ್ತಾರೆ. ಒಟ್ಟಾರೆ ಯಾಗಿ ತಮ್ಮ ಸುಖವನ್ನು ಬದಿಗೊತ್ತಿ  , ತನ್ನವರು, ಮನೆ ಮಕ್ಕಳು ಅಂತ ದುಡಿಯುವುದು ಅಪ್ಪ ಅಮ್ಮಂದಿರಿಗೆ ಮಾತ್ರ ಸಾಧ್ಯ. ಅಮ್ಮಂದಿರು ಕಷ್ಟ ಸುಖ ಹಂಚಿಕೊಳ್ಳುತ್ತಾರೆ, ಅಪ್ಪಂದಿರು ಭಾವನೆಗಳನ್ನು ವ್ಯಕ್ತಪಡಿಸುವುದನ್ನು ಇಷ್ಟಪಡಲಾ ರರು.  ಒಂದು ನಿರ್ದಿಷ್ಟ ವೇತನ ಪಡೆಯು ವ ಉದ್ಯೋಗವಿದ್ದಾಗ  ಮಕ್ಕಳ ಆವಶ್ಯಕತೆ ಗಳಿಗೆ ಸ್ಪಂದಿಸುವ ದೈರ್ಯವಿರುತ್ತದೆ ಆದರೆ  ಎಲ್ಲಾ ಅಪ್ಪಂದಿರಿಗೂ ಆ ಭಾಗ್ಯವಿರುವುದಿಲ್ಲ ತಾನೇ..‌?ದಿನ ನಿತ್ಯದ ಅಗತ್ಯ ಗಳನ್ನು ಪೂರೈಸಲೇ ಹೆಣಗುವ  ಹೆತ್ತವರಿರುತ್ತಾರೆ. ಒಂದು ಹೊತ್ತಿನ ಊಟಕ್ಕಾಗಿ ಪರದಾಡುವ ಎಷ್ಟೋ ಸಂಸಾರಗಳಿವೆ. ಅಲ್ಲಿ ಯಾವ ಭಾವನೆಗಳಿಗೂ ಬೆಲೆಯಿಲ್ಲ. ಆಯಾ ಹೊತ್ತಿನ ಅಗತ್ಯ ಗಳು ಪೂರೈಕೆ ಯಾದರೆ ಸಾಕು ಎಂಬ ಭಾವ ಮಾತ್ರ.
ಅಪ್ಪನೆಂದರೆ ತನ್ನೆಷ್ಟೋ ಕನಸುಗಳನ್ನು ಮನಸಿನಲ್ಲೇ ಕಟ್ಟಿ ಹಾಕಿ ಮಕ್ಕಳಲ್ಲಿ ಹೊಸ ಬದುಕಿನ,ಒಳ್ಳೆಯ ಭವಿಷ್ಯಕ್ಕೆ ಗಟ್ಟಿಯಾದ ಅಡಿಪಾಯ ಹಾಕಲು ಅಗತ್ಯವಾದುದನ್ನು ಒದಗಿಸುವುದರಲ್ಲೇ ತನ್ನ ಸಂತೋಷ ಕಾಣುವವನು.
ಬದುಕಿನ ಹಲವು ಮುಖಗಳ ಅನಾವರಣ ನಮಗಾಗದಂತೆ ಬೆಳೆಸುವುದು ಅಪ್ಪಂದಿರಿಂದ ಮಾತ್ರವೇ ಸಾಧ್ಯ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…

6 hours ago

ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ

ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…

7 hours ago

ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?

ಹವಾಮಾನ ಬದಲಾವಣೆಯಿಂದ ಎಲ್‌ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…

10 hours ago

ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ

ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…

10 hours ago

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

1 day ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

2 days ago