ನವದೆಹಲಿ: ಕಳೆದ 20 ವರ್ಷಗಳಲ್ಲಿ ಕಾಣಿಸಿಕೊಂಡ ಚಂಡಮಾರುತಗಳಲ್ಲೇ ಅತ್ಯಂತ ಪ್ರಬಲವಾದ ಚಂಡಮಾರುತ ‘ಅಂಫಾನ್’ ಬಾಂಗ್ಲಾದೇಶ ಹಾಗೂ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ್ದು, ಬಾಂಗ್ಲಾದಲ್ಲಿ ಚಂಡಮಾರುತವು ಮೊದಲ ಬಲಿ ಪಡೆದಿದೆ. ಈ ನಡುವೆ ಭಾರೀ ಗಾಳಿ ಮಳೆಗೆ ಒಡಿಶಾದಲ್ಲಿ 2 ಮಂದಿ ಬಲಿಯಾಗಿದ್ದಾರೆ. ನೂರಾರು ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದೆ ಎಂದು ವರದಿಯಾಗಿದೆ.
ಪ್ರಬಲವಾಗಿ ಕಾಣಿಸಿಕೊಂಡ ಚಂಡಮಾರುತ ಸಂಜೆ 7 ಗಂಟೆಯ ಹೊತ್ತಿಗೆ ಕರಾವಳಿ ಹಾಗೂ ಪಶ್ಚಿಮ ಬಂಗಾಳ-ಬಾಂಗ್ಲಾದೇಶದ ಕರಾವಳಿ ಪ್ರದೇಶವನ್ನು ಪಶ್ಚಿಮ ಬಂಗಾಳದ ಕಡೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿತ್ತು. ಅದಕ್ಕಿಂತಲೂ ಮುನ್ನವೇ ಕರಾವಳಿ ತೀರಕ್ಕೆ ಚಂಡಮಾರುತ ಅಪ್ಪಳಿಸಿದೆ. ಚಂಡಮಾರುತವು ಮೊದಲು ಪಶ್ವಿಮ ಬಂಗಾಳದ ದಿಗಾ ಮತ್ತು ಹತಿಯಾ ನಡುವೆ ಇರುವ ಸುಂದರ್ಬನ್ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿ ಬಳಿಕ ಬೇರೆ ಕಡೆಗೆ ಪಸರಿಸಿಲಿದೆ ಎಂಬ ಕಾರಣದಿಂದ ಜನರನ್ನು ಸ್ಥಳಾಂತರಿಸುತ್ತಿದ್ದ ಸಂದರ್ಭದಲ್ಲಿ ಹಡಗು ಪಲ್ಟಿಯಾಗಿ ರೆಡ್ ಕ್ರಸೆಂಡ್ ಕಾರ್ಯಕರ್ತನೊಬ್ಬ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಅಂಫಾನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮತ್ತು ಒರಿಸ್ಸಾ ಕರಾವಳಿಯಲ್ಲಿ 5 ಲಕ್ಷಕ್ಕೂ ಹೆಚ್ಚು ಜನರನ್ನು ಸಮುದ್ರ ತೀರದಿಂದ ಸ್ಥಳಾಂತರ ಮಾಡಲಾಗಿದೆ.
ಅಂಫಾನ್ ಚಂಡಮಾರುತವು ಗಂಟೆಗೆ 155-165 ಕಿ.ಮೀ ಗಳಷ್ಟಿರಲಿದ್ದು, 185 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಈಗಾಗಲೇ ವಿಪರೀತ ಬಿರುಗಾಳಿ ಕಂಡಿದೆ. ಬೆಳಿಗ್ಗೆಯಿಂದಲೇ ಒಡಿಶಾದ ಭದ್ರಕ್, ಪಾರಾದೀಪ್, ಬಾಲಾಸೋರ್, ಚಂಡೀಪುರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು ನಿರಂತರವಾಗಿ ಮಳೆ ಸುರಿಯುತ್ತಿದೆ. ಸದ್ಯ ಚಂಡಮಾರುತ ಭೀಕರ ರೂಪವನ್ನು ತಳೆದಿದೆ.
20 ವರ್ಷಗಳಲ್ಲೇ ಕಂಡಿರದ ಚಂಡಮಾರುತ ಇದಾಗಿದ್ದು 1999ರ ಒಡಿಶಾ ಚಂಡಮಾರುತದ ಬಳಿಕ ಎರಡನೇ ಗಂಭೀರ ಮತ್ತು ಅತಿ ದೊಡ್ಡ ಸೂಪರ್ ಸೈಕ್ಲೋನ್ ಆಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…