Advertisement
ರಾಷ್ಟ್ರೀಯ

ಅಫ್ಘಾನಿಸ್ಥಾನಕ್ಕೆ 225 ರನ್ ಗುರಿ ನೀಡಿದ ಭಾರತ

Share

ಸೌತಾಂಪ್ಟನ್: ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ತಂಡ ಅಫ್ಘಾನಿಸ್ಥಾನ ತಂಡಕ್ಕೆ 225 ರನ್ ಗಳ ಗುರಿ ನೀಡಿದೆ. ನಾಯಕ ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಬಾರಿಸಿದ ಸತತ ಮೂರನೇ ಅರ್ಧಶತಕದ ಹೊರತಾಗಿಯೂ ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್‌ ಪಂದ್ಯದಲ್ಲಿ ನಿರೀಕ್ಷಿತ ಸ್ಕೋರ್ ಬಂದಿಲ್ಲ.

ಟಾಸ್ ಜಯಿಸಿದ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಭಾರತ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 224 ರನ್ ಗಳಿಸಿತು.

ಭಾರತದ ಪರ ಕೊಹ್ಲಿ ಸರ್ವಾಧಿಕ ಸ್ಕೋರ್(67, 63 ಎಸೆತ, 5 ಬೌಂಡರಿ) ಗಳಿಸಿದರೆ, ಆಲ್‌ರೌಂಡರ್ ಕೇದಾರ್ ಜಾಧವ್(52, 68 ಎಸೆತ,3 ಬೌಂಡರಿ, 1 ಸಿಕ್ಸರ್ )ಕೆಳ ಕ್ರಮಾಂಕದಲ್ಲಿ ತಂಡವನ್ನು ಆಧರಿಸಿದರು.

ಆರಂಭಿಕ ಆಟಗಾರ ರಾಹುಲ್(30), ವಿಜಯ ಶಂಕರ್(29) ಹಾಗೂ ಎಂಎಸ್ ಧೋನಿ(28) ಎರಡಂಕೆಯ ಸ್ಕೋರ್ ಗಳಿಸಿದರು.

ರೋಹಿತ್ ಶರ್ಮಾ 4.2 ನೇ ಓವರ್‌ನಲ್ಲಿ 10 ಎಸೆತ ಎದುರಿಸಿ ಕೇವಲ 1 ರನ್ ಗಳಿಸಿ ನಿರ್ಗಮಿಸಿದರು. ಬಳಿಕ 2ನೇ ವಿಕೆಟ್‌ಗೆ ರಾಹುಲ್‌ರೊಂದಿಗೆ ಕೊಹ್ಲಿ 57 ರನ್ ಹಾಗೂ 3ನೇ ವಿಕೆಟ್‌ಗೆ ವಿಜಯ ಶಂಕರ್‌ರೊಂದಿಗೆ 58 ರನ್ ಸೇರಿಸಿ ಜವಾಬ್ದಾರಿಯಿಂದ ಆಡಿದರು.

ಕೊಹ್ಲಿ 48 ಎಸೆತಗಳಲ್ಲಿ 4 ಬೌಂಡರಿಗಳ ಸಹಿತ 52ನೇ ಅರ್ಧಶತಕ ಸಿಡಿಸಿದರು.  ಇತ್ತೀಚಿನ ವರದಿ ಬಂದಾಗ ಅಫ್ಘಾನಿಸ್ಥಾನ 23 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು 84  ರನ್ ಗಳಿಸಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

17 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

17 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

18 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago