Advertisement
ರಾಷ್ಟ್ರೀಯ

ಅಫ್ಘಾನಿಸ್ಥಾನಕ್ಕೆ 225 ರನ್ ಗುರಿ ನೀಡಿದ ಭಾರತ

Share

ಸೌತಾಂಪ್ಟನ್: ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ತಂಡ ಅಫ್ಘಾನಿಸ್ಥಾನ ತಂಡಕ್ಕೆ 225 ರನ್ ಗಳ ಗುರಿ ನೀಡಿದೆ. ನಾಯಕ ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಬಾರಿಸಿದ ಸತತ ಮೂರನೇ ಅರ್ಧಶತಕದ ಹೊರತಾಗಿಯೂ ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್‌ ಪಂದ್ಯದಲ್ಲಿ ನಿರೀಕ್ಷಿತ ಸ್ಕೋರ್ ಬಂದಿಲ್ಲ.

Advertisement

ಟಾಸ್ ಜಯಿಸಿದ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಭಾರತ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 224 ರನ್ ಗಳಿಸಿತು.

ಭಾರತದ ಪರ ಕೊಹ್ಲಿ ಸರ್ವಾಧಿಕ ಸ್ಕೋರ್(67, 63 ಎಸೆತ, 5 ಬೌಂಡರಿ) ಗಳಿಸಿದರೆ, ಆಲ್‌ರೌಂಡರ್ ಕೇದಾರ್ ಜಾಧವ್(52, 68 ಎಸೆತ,3 ಬೌಂಡರಿ, 1 ಸಿಕ್ಸರ್ )ಕೆಳ ಕ್ರಮಾಂಕದಲ್ಲಿ ತಂಡವನ್ನು ಆಧರಿಸಿದರು.

ಆರಂಭಿಕ ಆಟಗಾರ ರಾಹುಲ್(30), ವಿಜಯ ಶಂಕರ್(29) ಹಾಗೂ ಎಂಎಸ್ ಧೋನಿ(28) ಎರಡಂಕೆಯ ಸ್ಕೋರ್ ಗಳಿಸಿದರು.

ರೋಹಿತ್ ಶರ್ಮಾ 4.2 ನೇ ಓವರ್‌ನಲ್ಲಿ 10 ಎಸೆತ ಎದುರಿಸಿ ಕೇವಲ 1 ರನ್ ಗಳಿಸಿ ನಿರ್ಗಮಿಸಿದರು. ಬಳಿಕ 2ನೇ ವಿಕೆಟ್‌ಗೆ ರಾಹುಲ್‌ರೊಂದಿಗೆ ಕೊಹ್ಲಿ 57 ರನ್ ಹಾಗೂ 3ನೇ ವಿಕೆಟ್‌ಗೆ ವಿಜಯ ಶಂಕರ್‌ರೊಂದಿಗೆ 58 ರನ್ ಸೇರಿಸಿ ಜವಾಬ್ದಾರಿಯಿಂದ ಆಡಿದರು.

ಕೊಹ್ಲಿ 48 ಎಸೆತಗಳಲ್ಲಿ 4 ಬೌಂಡರಿಗಳ ಸಹಿತ 52ನೇ ಅರ್ಧಶತಕ ಸಿಡಿಸಿದರು.  ಇತ್ತೀಚಿನ ವರದಿ ಬಂದಾಗ ಅಫ್ಘಾನಿಸ್ಥಾನ 23 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು 84  ರನ್ ಗಳಿಸಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

5 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

11 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

15 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

16 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

16 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago