ರಾಷ್ಟ್ರೀಯ

ಅಫ್ಘಾನಿಸ್ಥಾನಕ್ಕೆ 225 ರನ್ ಗುರಿ ನೀಡಿದ ಭಾರತ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸೌತಾಂಪ್ಟನ್: ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ತಂಡ ಅಫ್ಘಾನಿಸ್ಥಾನ ತಂಡಕ್ಕೆ 225 ರನ್ ಗಳ ಗುರಿ ನೀಡಿದೆ. ನಾಯಕ ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಬಾರಿಸಿದ ಸತತ ಮೂರನೇ ಅರ್ಧಶತಕದ ಹೊರತಾಗಿಯೂ ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್‌ ಪಂದ್ಯದಲ್ಲಿ ನಿರೀಕ್ಷಿತ ಸ್ಕೋರ್ ಬಂದಿಲ್ಲ.

Advertisement
Advertisement

ಟಾಸ್ ಜಯಿಸಿದ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಭಾರತ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 224 ರನ್ ಗಳಿಸಿತು.

ಭಾರತದ ಪರ ಕೊಹ್ಲಿ ಸರ್ವಾಧಿಕ ಸ್ಕೋರ್(67, 63 ಎಸೆತ, 5 ಬೌಂಡರಿ) ಗಳಿಸಿದರೆ, ಆಲ್‌ರೌಂಡರ್ ಕೇದಾರ್ ಜಾಧವ್(52, 68 ಎಸೆತ,3 ಬೌಂಡರಿ, 1 ಸಿಕ್ಸರ್ )ಕೆಳ ಕ್ರಮಾಂಕದಲ್ಲಿ ತಂಡವನ್ನು ಆಧರಿಸಿದರು.

ಆರಂಭಿಕ ಆಟಗಾರ ರಾಹುಲ್(30), ವಿಜಯ ಶಂಕರ್(29) ಹಾಗೂ ಎಂಎಸ್ ಧೋನಿ(28) ಎರಡಂಕೆಯ ಸ್ಕೋರ್ ಗಳಿಸಿದರು.

ರೋಹಿತ್ ಶರ್ಮಾ 4.2 ನೇ ಓವರ್‌ನಲ್ಲಿ 10 ಎಸೆತ ಎದುರಿಸಿ ಕೇವಲ 1 ರನ್ ಗಳಿಸಿ ನಿರ್ಗಮಿಸಿದರು. ಬಳಿಕ 2ನೇ ವಿಕೆಟ್‌ಗೆ ರಾಹುಲ್‌ರೊಂದಿಗೆ ಕೊಹ್ಲಿ 57 ರನ್ ಹಾಗೂ 3ನೇ ವಿಕೆಟ್‌ಗೆ ವಿಜಯ ಶಂಕರ್‌ರೊಂದಿಗೆ 58 ರನ್ ಸೇರಿಸಿ ಜವಾಬ್ದಾರಿಯಿಂದ ಆಡಿದರು.

Advertisement

ಕೊಹ್ಲಿ 48 ಎಸೆತಗಳಲ್ಲಿ 4 ಬೌಂಡರಿಗಳ ಸಹಿತ 52ನೇ ಅರ್ಧಶತಕ ಸಿಡಿಸಿದರು.  ಇತ್ತೀಚಿನ ವರದಿ ಬಂದಾಗ ಅಫ್ಘಾನಿಸ್ಥಾನ 23 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು 84  ರನ್ ಗಳಿಸಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

38 minutes ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

1 hour ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

1 hour ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

2 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

2 hours ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

3 hours ago