Advertisement
ರಾಷ್ಟ್ರೀಯ

ಅಫ್ಘಾನಿಸ್ಥಾನಕ್ಕೆ 225 ರನ್ ಗುರಿ ನೀಡಿದ ಭಾರತ

Share

ಸೌತಾಂಪ್ಟನ್: ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ತಂಡ ಅಫ್ಘಾನಿಸ್ಥಾನ ತಂಡಕ್ಕೆ 225 ರನ್ ಗಳ ಗುರಿ ನೀಡಿದೆ. ನಾಯಕ ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಬಾರಿಸಿದ ಸತತ ಮೂರನೇ ಅರ್ಧಶತಕದ ಹೊರತಾಗಿಯೂ ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್‌ ಪಂದ್ಯದಲ್ಲಿ ನಿರೀಕ್ಷಿತ ಸ್ಕೋರ್ ಬಂದಿಲ್ಲ.

ಟಾಸ್ ಜಯಿಸಿದ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಭಾರತ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 224 ರನ್ ಗಳಿಸಿತು.

ಭಾರತದ ಪರ ಕೊಹ್ಲಿ ಸರ್ವಾಧಿಕ ಸ್ಕೋರ್(67, 63 ಎಸೆತ, 5 ಬೌಂಡರಿ) ಗಳಿಸಿದರೆ, ಆಲ್‌ರೌಂಡರ್ ಕೇದಾರ್ ಜಾಧವ್(52, 68 ಎಸೆತ,3 ಬೌಂಡರಿ, 1 ಸಿಕ್ಸರ್ )ಕೆಳ ಕ್ರಮಾಂಕದಲ್ಲಿ ತಂಡವನ್ನು ಆಧರಿಸಿದರು.

ಆರಂಭಿಕ ಆಟಗಾರ ರಾಹುಲ್(30), ವಿಜಯ ಶಂಕರ್(29) ಹಾಗೂ ಎಂಎಸ್ ಧೋನಿ(28) ಎರಡಂಕೆಯ ಸ್ಕೋರ್ ಗಳಿಸಿದರು.

ರೋಹಿತ್ ಶರ್ಮಾ 4.2 ನೇ ಓವರ್‌ನಲ್ಲಿ 10 ಎಸೆತ ಎದುರಿಸಿ ಕೇವಲ 1 ರನ್ ಗಳಿಸಿ ನಿರ್ಗಮಿಸಿದರು. ಬಳಿಕ 2ನೇ ವಿಕೆಟ್‌ಗೆ ರಾಹುಲ್‌ರೊಂದಿಗೆ ಕೊಹ್ಲಿ 57 ರನ್ ಹಾಗೂ 3ನೇ ವಿಕೆಟ್‌ಗೆ ವಿಜಯ ಶಂಕರ್‌ರೊಂದಿಗೆ 58 ರನ್ ಸೇರಿಸಿ ಜವಾಬ್ದಾರಿಯಿಂದ ಆಡಿದರು.

ಕೊಹ್ಲಿ 48 ಎಸೆತಗಳಲ್ಲಿ 4 ಬೌಂಡರಿಗಳ ಸಹಿತ 52ನೇ ಅರ್ಧಶತಕ ಸಿಡಿಸಿದರು.  ಇತ್ತೀಚಿನ ವರದಿ ಬಂದಾಗ ಅಫ್ಘಾನಿಸ್ಥಾನ 23 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು 84  ರನ್ ಗಳಿಸಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

5 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

7 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

8 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

11 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

12 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

15 hours ago