Advertisement
ರಾಷ್ಟ್ರೀಯ

ಅಫ್ಘಾನಿಸ್ಥಾನಕ್ಕೆ 225 ರನ್ ಗುರಿ ನೀಡಿದ ಭಾರತ

Share

ಸೌತಾಂಪ್ಟನ್: ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ತಂಡ ಅಫ್ಘಾನಿಸ್ಥಾನ ತಂಡಕ್ಕೆ 225 ರನ್ ಗಳ ಗುರಿ ನೀಡಿದೆ. ನಾಯಕ ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಬಾರಿಸಿದ ಸತತ ಮೂರನೇ ಅರ್ಧಶತಕದ ಹೊರತಾಗಿಯೂ ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್‌ ಪಂದ್ಯದಲ್ಲಿ ನಿರೀಕ್ಷಿತ ಸ್ಕೋರ್ ಬಂದಿಲ್ಲ.

ಟಾಸ್ ಜಯಿಸಿದ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಭಾರತ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 224 ರನ್ ಗಳಿಸಿತು.

ಭಾರತದ ಪರ ಕೊಹ್ಲಿ ಸರ್ವಾಧಿಕ ಸ್ಕೋರ್(67, 63 ಎಸೆತ, 5 ಬೌಂಡರಿ) ಗಳಿಸಿದರೆ, ಆಲ್‌ರೌಂಡರ್ ಕೇದಾರ್ ಜಾಧವ್(52, 68 ಎಸೆತ,3 ಬೌಂಡರಿ, 1 ಸಿಕ್ಸರ್ )ಕೆಳ ಕ್ರಮಾಂಕದಲ್ಲಿ ತಂಡವನ್ನು ಆಧರಿಸಿದರು.

ಆರಂಭಿಕ ಆಟಗಾರ ರಾಹುಲ್(30), ವಿಜಯ ಶಂಕರ್(29) ಹಾಗೂ ಎಂಎಸ್ ಧೋನಿ(28) ಎರಡಂಕೆಯ ಸ್ಕೋರ್ ಗಳಿಸಿದರು.

ರೋಹಿತ್ ಶರ್ಮಾ 4.2 ನೇ ಓವರ್‌ನಲ್ಲಿ 10 ಎಸೆತ ಎದುರಿಸಿ ಕೇವಲ 1 ರನ್ ಗಳಿಸಿ ನಿರ್ಗಮಿಸಿದರು. ಬಳಿಕ 2ನೇ ವಿಕೆಟ್‌ಗೆ ರಾಹುಲ್‌ರೊಂದಿಗೆ ಕೊಹ್ಲಿ 57 ರನ್ ಹಾಗೂ 3ನೇ ವಿಕೆಟ್‌ಗೆ ವಿಜಯ ಶಂಕರ್‌ರೊಂದಿಗೆ 58 ರನ್ ಸೇರಿಸಿ ಜವಾಬ್ದಾರಿಯಿಂದ ಆಡಿದರು.

ಕೊಹ್ಲಿ 48 ಎಸೆತಗಳಲ್ಲಿ 4 ಬೌಂಡರಿಗಳ ಸಹಿತ 52ನೇ ಅರ್ಧಶತಕ ಸಿಡಿಸಿದರು.  ಇತ್ತೀಚಿನ ವರದಿ ಬಂದಾಗ ಅಫ್ಘಾನಿಸ್ಥಾನ 23 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು 84  ರನ್ ಗಳಿಸಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 hour ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago