Advertisement
ರಾಷ್ಟ್ರೀಯ

ಅಫ್ಘಾನಿಸ್ಥಾನಕ್ಕೆ 225 ರನ್ ಗುರಿ ನೀಡಿದ ಭಾರತ

Share

ಸೌತಾಂಪ್ಟನ್: ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ತಂಡ ಅಫ್ಘಾನಿಸ್ಥಾನ ತಂಡಕ್ಕೆ 225 ರನ್ ಗಳ ಗುರಿ ನೀಡಿದೆ. ನಾಯಕ ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಬಾರಿಸಿದ ಸತತ ಮೂರನೇ ಅರ್ಧಶತಕದ ಹೊರತಾಗಿಯೂ ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್‌ ಪಂದ್ಯದಲ್ಲಿ ನಿರೀಕ್ಷಿತ ಸ್ಕೋರ್ ಬಂದಿಲ್ಲ.

ಟಾಸ್ ಜಯಿಸಿದ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಭಾರತ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 224 ರನ್ ಗಳಿಸಿತು.

ಭಾರತದ ಪರ ಕೊಹ್ಲಿ ಸರ್ವಾಧಿಕ ಸ್ಕೋರ್(67, 63 ಎಸೆತ, 5 ಬೌಂಡರಿ) ಗಳಿಸಿದರೆ, ಆಲ್‌ರೌಂಡರ್ ಕೇದಾರ್ ಜಾಧವ್(52, 68 ಎಸೆತ,3 ಬೌಂಡರಿ, 1 ಸಿಕ್ಸರ್ )ಕೆಳ ಕ್ರಮಾಂಕದಲ್ಲಿ ತಂಡವನ್ನು ಆಧರಿಸಿದರು.

ಆರಂಭಿಕ ಆಟಗಾರ ರಾಹುಲ್(30), ವಿಜಯ ಶಂಕರ್(29) ಹಾಗೂ ಎಂಎಸ್ ಧೋನಿ(28) ಎರಡಂಕೆಯ ಸ್ಕೋರ್ ಗಳಿಸಿದರು.

ರೋಹಿತ್ ಶರ್ಮಾ 4.2 ನೇ ಓವರ್‌ನಲ್ಲಿ 10 ಎಸೆತ ಎದುರಿಸಿ ಕೇವಲ 1 ರನ್ ಗಳಿಸಿ ನಿರ್ಗಮಿಸಿದರು. ಬಳಿಕ 2ನೇ ವಿಕೆಟ್‌ಗೆ ರಾಹುಲ್‌ರೊಂದಿಗೆ ಕೊಹ್ಲಿ 57 ರನ್ ಹಾಗೂ 3ನೇ ವಿಕೆಟ್‌ಗೆ ವಿಜಯ ಶಂಕರ್‌ರೊಂದಿಗೆ 58 ರನ್ ಸೇರಿಸಿ ಜವಾಬ್ದಾರಿಯಿಂದ ಆಡಿದರು.

ಕೊಹ್ಲಿ 48 ಎಸೆತಗಳಲ್ಲಿ 4 ಬೌಂಡರಿಗಳ ಸಹಿತ 52ನೇ ಅರ್ಧಶತಕ ಸಿಡಿಸಿದರು.  ಇತ್ತೀಚಿನ ವರದಿ ಬಂದಾಗ ಅಫ್ಘಾನಿಸ್ಥಾನ 23 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು 84  ರನ್ ಗಳಿಸಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

14 minutes ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

6 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

12 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

13 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

21 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

23 hours ago