ಸುಳ್ಯ: ಅಬುದಾಬಿ ಲಾಟರಿಯ ಅದೃಷ್ಟ ಸುಳ್ಯದ ಯುವಕನಿಗೆ ಒಲಿದಿರುವ ಸುಳ್ಯನ್ಯೂಸ್.ಕಾಂ ವರದಿ ವೈರಲ್ ಆಗಿರುವ ಜೊತೆಗೆ ಯುವಕ ಮಹಮ್ಮದ್ ಫಯಾಜ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಈ ಸಂತಸದ ಸುದ್ದಿಯು ಸುಳ್ಯನ್ಯೂಸ್.ಕಾಂ ನಲ್ಲಿ ವರದಿಯಾದ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿತ್ತು. ಇದಾದ ಕೆಲವೇ ಹೊತ್ತಲ್ಲಿ ಓದುಗರ ಸಂಖ್ಯೆ ಒಮ್ಮೆಲೇ ಹೆಚ್ಚಾದ್ದರಿಂದ ವೆಬ್ ಸೈಟ್ ಗೆ ಟ್ರಾಫಿಕ್ ಸಮಸ್ಯೆ ಕಂಡುಬಂದಿತ್ತು. ಹೀಗಾಗಿ ಮಧ್ಯಾಹ್ನದವರೆಗೆ ಅನೇಕರಿಗೆ ನ್ಯೂಸ್ ಓದಲು ಸಾದ್ಯವಾಗಲಿಲ್ಲ. ಹೀಗಾಗಿ ಹಲವಾರು ಮಂದಿಯಿಂದ ಈ ಬಗ್ಗೆ ದೂರುಗಳು ಬಂದಿದ್ದವು. ಇದನ್ನು ಸರಿ ಪಡಿಸಲು ಪ್ರಯತ್ನಿಸಲಾಯಿತು. ಮಧ್ಯಾಹ್ನದ ಹೊತ್ತಿಗೆ ಸರಿಯಾಗಿತ್ತು. ಅದರೆ ಜೊತೆಗೆ ಸಂಜೆಯವರೆಗೆ ನ್ಯೂಸ್ ಪ್ರಕಟ ಮಾಡುವುದಕ್ಕೂ ಸಾಧ್ಯವಾಗಲಿಲ್ಲ .ನ್ಯೂಸ್ ಪ್ರಕಟಿಸಲು ಸಾಧ್ಯವಾಗದೇ ಇರುವುದಕ್ಕೆ ಕ್ಷಮೆ ಕೋರುತ್ತಾ, ಓದುಗರ ಬೆಂಬಲ ಹಾಗೂ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ. 24 ಗಂಟೆಯಲ್ಲಿ ಇಂದೊದೇ ವರದಿಯನ್ನು 30 ಸಾವಿರಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ ಎನ್ನುವ ಸಂಗತಿಯನ್ನೂ ನಿಮ್ಮ ಮುಂದೆ ಇಡುತ್ತಿದ್ದೇವೆ. ಇದೇ ರೀತಿ ಮುಂದೆಯೂ ನಿಮ್ಮ ಸಹಕಾರವನ್ನು ಯಾಚಿಸುತ್ತೇವೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…