ಸುಳ್ಯ: ಅಬುದಾಬಿ ಲಾಟರಿಯ ಅದೃಷ್ಟ ಸುಳ್ಯದ ಯುವಕನಿಗೆ ಒಲಿದಿರುವ ಸುಳ್ಯನ್ಯೂಸ್.ಕಾಂ ವರದಿ ವೈರಲ್ ಆಗಿರುವ ಜೊತೆಗೆ ಯುವಕ ಮಹಮ್ಮದ್ ಫಯಾಜ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಈ ಸಂತಸದ ಸುದ್ದಿಯು ಸುಳ್ಯನ್ಯೂಸ್.ಕಾಂ ನಲ್ಲಿ ವರದಿಯಾದ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿತ್ತು. ಇದಾದ ಕೆಲವೇ ಹೊತ್ತಲ್ಲಿ ಓದುಗರ ಸಂಖ್ಯೆ ಒಮ್ಮೆಲೇ ಹೆಚ್ಚಾದ್ದರಿಂದ ವೆಬ್ ಸೈಟ್ ಗೆ ಟ್ರಾಫಿಕ್ ಸಮಸ್ಯೆ ಕಂಡುಬಂದಿತ್ತು. ಹೀಗಾಗಿ ಮಧ್ಯಾಹ್ನದವರೆಗೆ ಅನೇಕರಿಗೆ ನ್ಯೂಸ್ ಓದಲು ಸಾದ್ಯವಾಗಲಿಲ್ಲ. ಹೀಗಾಗಿ ಹಲವಾರು ಮಂದಿಯಿಂದ ಈ ಬಗ್ಗೆ ದೂರುಗಳು ಬಂದಿದ್ದವು. ಇದನ್ನು ಸರಿ ಪಡಿಸಲು ಪ್ರಯತ್ನಿಸಲಾಯಿತು. ಮಧ್ಯಾಹ್ನದ ಹೊತ್ತಿಗೆ ಸರಿಯಾಗಿತ್ತು. ಅದರೆ ಜೊತೆಗೆ ಸಂಜೆಯವರೆಗೆ ನ್ಯೂಸ್ ಪ್ರಕಟ ಮಾಡುವುದಕ್ಕೂ ಸಾಧ್ಯವಾಗಲಿಲ್ಲ .ನ್ಯೂಸ್ ಪ್ರಕಟಿಸಲು ಸಾಧ್ಯವಾಗದೇ ಇರುವುದಕ್ಕೆ ಕ್ಷಮೆ ಕೋರುತ್ತಾ, ಓದುಗರ ಬೆಂಬಲ ಹಾಗೂ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ. 24 ಗಂಟೆಯಲ್ಲಿ ಇಂದೊದೇ ವರದಿಯನ್ನು 30 ಸಾವಿರಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ ಎನ್ನುವ ಸಂಗತಿಯನ್ನೂ ನಿಮ್ಮ ಮುಂದೆ ಇಡುತ್ತಿದ್ದೇವೆ. ಇದೇ ರೀತಿ ಮುಂದೆಯೂ ನಿಮ್ಮ ಸಹಕಾರವನ್ನು ಯಾಚಿಸುತ್ತೇವೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…