Advertisement
ಸುದ್ದಿಗಳು

ಅಬುದಾಬಿ ಲಾಟರಿಯ 23 ಕೋಟಿ ರೂಪಾಯಿ ಸುಳ್ಯದ ಯುವಕನಿಗೆ !

Share

ಸುಳ್ಯ:ಅಂದಾಜು 23 ಕೋಟಿಯ ಮೌಲ್ಯದ ಅಬುದಾಬಿ ಲಾಟರಿಯ ಅದೃಷ್ಟ ಸುಳ್ಯದ ಯುವಕನಿಗೆ ಒಲಿದಿದೆ. ಗುರುವಾರ ಡ್ರಾ ಮಾಡಲಾದ 12 ಮಿಲಿಯನ್ ದಿರ್ ಹಾಂ(ಅಂದಾಜು 23 ಕೋಟಿ) ಲಾಟರಿಯ ಪ್ರಥಮ ಬಹುಮಾನ ಸುಳ್ಯ ಜಟ್ಟಿಪಳ್ಳದ ಮಹಮ್ಮದ್ ಫಯಾಜ್ ಅವರಿಗೆ ಲಭಿಸಿದೆ ಎಂದು ತಿಳಿದು ಬಂದಿದೆ. ಮುಂಬೈನಲ್ಲಿ ಉದ್ಯೋಗದಲ್ಲಿರುವ ಫಯಾಜ್ ಕಳೆದ ಆರು ತಿಂಗಳಿನಿಂದ ದೊಡ್ಡ ಮೊತ್ತದ ಅಬುದಾಬಿ ಲಾಟರಿ ಟಿಕೆಟ್ ಗಳನ್ನು ಖರೀದಿಸುತ್ತಿದ್ದರು. ಇದೀಗ ಪ್ರಥಮ ಬಹುಮಾನದ ರೂಪದಲ್ಲಿ ಅದೃಷ್ಠ ಒಲಿದು ಬಂದಿದೆ.

Advertisement

ಕಳೆದ ತಿಂಗಳು, ಇದೇ ಬಹುಮಾನದಲ್ಲಿ  ದುಬೈ ಮೂಲದ ಫಿಲಿಪಿನಾ ವಲಸಿಗರು 10 ಮಿಲಿಯನ್ ಡಾಲರ್ ಗೆದ್ದಿದ್ದರು. ಇದೀಗ ಸುಳ್ಯದ ಮೂಲಕ ಯುವಕ ಸುಮಾರು 23 ಕೋಟಿ ರೂಪಾಯಿ ಮೌಲ್ಯವನ್ನು ಗೆದ್ದಿದ್ದಾರೆ.  ವಿಶೇಷ ಎಂದರೆ ಯುಎಇಗೆ ಎಂದಿಗೂ ಭೇಟಿ ನೀಡದ ಭಾರತೀಯ ವ್ಯಕ್ತಿಯೊಬ್ಬರು ಗುರುವಾರ ಸಂಜೆ ಅಬುಧಾಬಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಬಿಗ್ ಟಿಕೆಟ್ ರಾಫೆಲ್ ಡ್ರಾದಲ್ಲಿ 12 ಮಿಲಿಯನ್  ಗೆದ್ದಿದ್ದಾರೆ. ಗೆಳೆಯನ ಮೂಲಕ ಈ ರೀತಿಯ ಬಿಗ್ ಟಿಕೆಟ್ ಖರೀದಿಗೆ ಮುಂದಾಗಿದ್ದರು ಪಯಾಜ್.

ಈ ಬಗ್ಗೆ ಅಬುದಾಬಿ ಮಾಧ್ಯಮದೊಂದಿಗೆ ಮಾತನಾಡಿದ ಫಯಾಜ್, ಮೂತ್ರಪಿಂಡದ ಕಾಯಿಲೆಗಳಿಂದಾಗಿ ನನ್ನ ತಂದೆ ತಾಯಿ ಇಬ್ಬರೂ ತೀರಿಕೊಂಡರು. ನನ್ನ ತಂದೆ ಸೌದಿ ಅರೇಬಿಯಾದಲ್ಲಿ ದೀರ್ಘಕಾಲ ಕೆಲಸ ಮಾಡಿದ್ದರು. ಅವರು 12 ವರ್ಷಗಳಿಗಿಂತ ಹೆಚ್ಚು ಕಾಲ ಮೂತ್ರಪಿಂಡ ವೈಫಲ್ಯದ ವಿರುದ್ಧ ಹೋರಾಡಿದರು. ನನ್ನ ಹೆತ್ತವರು ಇಬ್ಬರೂ ನೋವಿನಿಂದ ನೋಡಿದ್ದೇವೆ. ನಾವು ಮಕ್ಕಳು ಇನ್ನೂ ಚೇತರಿಸಿಕೊಳ್ಳುತ್ತಿದ್ದೇವೆ ನಮ್ಮ ಹೆತ್ತವರು ನಮ್ಮೊಂದಿಗೆ ಇಲ್ಲದಿರುವುದು ಆಘಾತ. ನನಗೆ ತಂಗಿ ಇದ್ದಾರೆ. ನನ್ನ ಅಕ್ಕ ಮದುವೆಯಾಗಿದ್ದಾರೆ. ಮನೆ ನಿರ್ಮಿಸಲು ನಾವು ನಮ್ಮ ಜಮೀನಿನ ಒಂದು ಭಾಗವನ್ನು ಮಾರಿದೆವು. ಆದರೆ ಅದು ಈಗ ಬಾಕಿ ಉಳಿದಿದೆ. ಒಂದು ವರ್ಷದ ಹಿಂದೆ ನನ್ನ ಕುಟುಂಬದ ಉದ್ದೇಶದಿಂದ ಮುಂಬೈಗೆ ಬಂದಿದ್ದೇವೆ ಎಂದು ಹೇಳಿದ್ದಾರೆ.

ಮೊದಲು ಡ್ರಾ ಗೆದ್ದಿರುವ ಬಗ್ಗೆ ಕರೆ ಬಂದಾಗ ನಂಬಲು ಆಗಲಿಲ್ಲ. ಬಳಿಕ ಆನ್ ಲೈನ್ ನಲ್ಲಿ  ಪರಿಶೀಲನೆ ಮಾಡಿದಾಗ ಖಚಿತವಾಯಿತು. ಮುಂದೆ ಒಂದಷ್ಟು ಕನಸುಗಳು ಇವೆ. ಅದನ್ನು ಪೂರೈಸಬೇಕಿದೆ ಎಂದು ಮಾಧ್ಯಮದೊಂದಿಗೆ ಫಯಾಜ್ ಹೇಳಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

20 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago