Advertisement
ಸುದ್ದಿಗಳು

ಅಬುದಾಬಿ ಲಾಟರಿಯ 23 ಕೋಟಿ ರೂಪಾಯಿ ಸುಳ್ಯದ ಯುವಕನಿಗೆ !

Share

ಸುಳ್ಯ:ಅಂದಾಜು 23 ಕೋಟಿಯ ಮೌಲ್ಯದ ಅಬುದಾಬಿ ಲಾಟರಿಯ ಅದೃಷ್ಟ ಸುಳ್ಯದ ಯುವಕನಿಗೆ ಒಲಿದಿದೆ. ಗುರುವಾರ ಡ್ರಾ ಮಾಡಲಾದ 12 ಮಿಲಿಯನ್ ದಿರ್ ಹಾಂ(ಅಂದಾಜು 23 ಕೋಟಿ) ಲಾಟರಿಯ ಪ್ರಥಮ ಬಹುಮಾನ ಸುಳ್ಯ ಜಟ್ಟಿಪಳ್ಳದ ಮಹಮ್ಮದ್ ಫಯಾಜ್ ಅವರಿಗೆ ಲಭಿಸಿದೆ ಎಂದು ತಿಳಿದು ಬಂದಿದೆ. ಮುಂಬೈನಲ್ಲಿ ಉದ್ಯೋಗದಲ್ಲಿರುವ ಫಯಾಜ್ ಕಳೆದ ಆರು ತಿಂಗಳಿನಿಂದ ದೊಡ್ಡ ಮೊತ್ತದ ಅಬುದಾಬಿ ಲಾಟರಿ ಟಿಕೆಟ್ ಗಳನ್ನು ಖರೀದಿಸುತ್ತಿದ್ದರು. ಇದೀಗ ಪ್ರಥಮ ಬಹುಮಾನದ ರೂಪದಲ್ಲಿ ಅದೃಷ್ಠ ಒಲಿದು ಬಂದಿದೆ.

ಕಳೆದ ತಿಂಗಳು, ಇದೇ ಬಹುಮಾನದಲ್ಲಿ  ದುಬೈ ಮೂಲದ ಫಿಲಿಪಿನಾ ವಲಸಿಗರು 10 ಮಿಲಿಯನ್ ಡಾಲರ್ ಗೆದ್ದಿದ್ದರು. ಇದೀಗ ಸುಳ್ಯದ ಮೂಲಕ ಯುವಕ ಸುಮಾರು 23 ಕೋಟಿ ರೂಪಾಯಿ ಮೌಲ್ಯವನ್ನು ಗೆದ್ದಿದ್ದಾರೆ.  ವಿಶೇಷ ಎಂದರೆ ಯುಎಇಗೆ ಎಂದಿಗೂ ಭೇಟಿ ನೀಡದ ಭಾರತೀಯ ವ್ಯಕ್ತಿಯೊಬ್ಬರು ಗುರುವಾರ ಸಂಜೆ ಅಬುಧಾಬಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಬಿಗ್ ಟಿಕೆಟ್ ರಾಫೆಲ್ ಡ್ರಾದಲ್ಲಿ 12 ಮಿಲಿಯನ್  ಗೆದ್ದಿದ್ದಾರೆ. ಗೆಳೆಯನ ಮೂಲಕ ಈ ರೀತಿಯ ಬಿಗ್ ಟಿಕೆಟ್ ಖರೀದಿಗೆ ಮುಂದಾಗಿದ್ದರು ಪಯಾಜ್.

ಈ ಬಗ್ಗೆ ಅಬುದಾಬಿ ಮಾಧ್ಯಮದೊಂದಿಗೆ ಮಾತನಾಡಿದ ಫಯಾಜ್, ಮೂತ್ರಪಿಂಡದ ಕಾಯಿಲೆಗಳಿಂದಾಗಿ ನನ್ನ ತಂದೆ ತಾಯಿ ಇಬ್ಬರೂ ತೀರಿಕೊಂಡರು. ನನ್ನ ತಂದೆ ಸೌದಿ ಅರೇಬಿಯಾದಲ್ಲಿ ದೀರ್ಘಕಾಲ ಕೆಲಸ ಮಾಡಿದ್ದರು. ಅವರು 12 ವರ್ಷಗಳಿಗಿಂತ ಹೆಚ್ಚು ಕಾಲ ಮೂತ್ರಪಿಂಡ ವೈಫಲ್ಯದ ವಿರುದ್ಧ ಹೋರಾಡಿದರು. ನನ್ನ ಹೆತ್ತವರು ಇಬ್ಬರೂ ನೋವಿನಿಂದ ನೋಡಿದ್ದೇವೆ. ನಾವು ಮಕ್ಕಳು ಇನ್ನೂ ಚೇತರಿಸಿಕೊಳ್ಳುತ್ತಿದ್ದೇವೆ ನಮ್ಮ ಹೆತ್ತವರು ನಮ್ಮೊಂದಿಗೆ ಇಲ್ಲದಿರುವುದು ಆಘಾತ. ನನಗೆ ತಂಗಿ ಇದ್ದಾರೆ. ನನ್ನ ಅಕ್ಕ ಮದುವೆಯಾಗಿದ್ದಾರೆ. ಮನೆ ನಿರ್ಮಿಸಲು ನಾವು ನಮ್ಮ ಜಮೀನಿನ ಒಂದು ಭಾಗವನ್ನು ಮಾರಿದೆವು. ಆದರೆ ಅದು ಈಗ ಬಾಕಿ ಉಳಿದಿದೆ. ಒಂದು ವರ್ಷದ ಹಿಂದೆ ನನ್ನ ಕುಟುಂಬದ ಉದ್ದೇಶದಿಂದ ಮುಂಬೈಗೆ ಬಂದಿದ್ದೇವೆ ಎಂದು ಹೇಳಿದ್ದಾರೆ.

ಮೊದಲು ಡ್ರಾ ಗೆದ್ದಿರುವ ಬಗ್ಗೆ ಕರೆ ಬಂದಾಗ ನಂಬಲು ಆಗಲಿಲ್ಲ. ಬಳಿಕ ಆನ್ ಲೈನ್ ನಲ್ಲಿ  ಪರಿಶೀಲನೆ ಮಾಡಿದಾಗ ಖಚಿತವಾಯಿತು. ಮುಂದೆ ಒಂದಷ್ಟು ಕನಸುಗಳು ಇವೆ. ಅದನ್ನು ಪೂರೈಸಬೇಕಿದೆ ಎಂದು ಮಾಧ್ಯಮದೊಂದಿಗೆ ಫಯಾಜ್ ಹೇಳಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

17 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

24 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago