Advertisement
ಸುದ್ದಿಗಳು

ಅಬುದಾಬಿ ಲಾಟರಿಯ 23 ಕೋಟಿ ರೂಪಾಯಿ ಸುಳ್ಯದ ಯುವಕನಿಗೆ !

Share

ಸುಳ್ಯ:ಅಂದಾಜು 23 ಕೋಟಿಯ ಮೌಲ್ಯದ ಅಬುದಾಬಿ ಲಾಟರಿಯ ಅದೃಷ್ಟ ಸುಳ್ಯದ ಯುವಕನಿಗೆ ಒಲಿದಿದೆ. ಗುರುವಾರ ಡ್ರಾ ಮಾಡಲಾದ 12 ಮಿಲಿಯನ್ ದಿರ್ ಹಾಂ(ಅಂದಾಜು 23 ಕೋಟಿ) ಲಾಟರಿಯ ಪ್ರಥಮ ಬಹುಮಾನ ಸುಳ್ಯ ಜಟ್ಟಿಪಳ್ಳದ ಮಹಮ್ಮದ್ ಫಯಾಜ್ ಅವರಿಗೆ ಲಭಿಸಿದೆ ಎಂದು ತಿಳಿದು ಬಂದಿದೆ. ಮುಂಬೈನಲ್ಲಿ ಉದ್ಯೋಗದಲ್ಲಿರುವ ಫಯಾಜ್ ಕಳೆದ ಆರು ತಿಂಗಳಿನಿಂದ ದೊಡ್ಡ ಮೊತ್ತದ ಅಬುದಾಬಿ ಲಾಟರಿ ಟಿಕೆಟ್ ಗಳನ್ನು ಖರೀದಿಸುತ್ತಿದ್ದರು. ಇದೀಗ ಪ್ರಥಮ ಬಹುಮಾನದ ರೂಪದಲ್ಲಿ ಅದೃಷ್ಠ ಒಲಿದು ಬಂದಿದೆ.

ಕಳೆದ ತಿಂಗಳು, ಇದೇ ಬಹುಮಾನದಲ್ಲಿ  ದುಬೈ ಮೂಲದ ಫಿಲಿಪಿನಾ ವಲಸಿಗರು 10 ಮಿಲಿಯನ್ ಡಾಲರ್ ಗೆದ್ದಿದ್ದರು. ಇದೀಗ ಸುಳ್ಯದ ಮೂಲಕ ಯುವಕ ಸುಮಾರು 23 ಕೋಟಿ ರೂಪಾಯಿ ಮೌಲ್ಯವನ್ನು ಗೆದ್ದಿದ್ದಾರೆ.  ವಿಶೇಷ ಎಂದರೆ ಯುಎಇಗೆ ಎಂದಿಗೂ ಭೇಟಿ ನೀಡದ ಭಾರತೀಯ ವ್ಯಕ್ತಿಯೊಬ್ಬರು ಗುರುವಾರ ಸಂಜೆ ಅಬುಧಾಬಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಬಿಗ್ ಟಿಕೆಟ್ ರಾಫೆಲ್ ಡ್ರಾದಲ್ಲಿ 12 ಮಿಲಿಯನ್  ಗೆದ್ದಿದ್ದಾರೆ. ಗೆಳೆಯನ ಮೂಲಕ ಈ ರೀತಿಯ ಬಿಗ್ ಟಿಕೆಟ್ ಖರೀದಿಗೆ ಮುಂದಾಗಿದ್ದರು ಪಯಾಜ್.

ಈ ಬಗ್ಗೆ ಅಬುದಾಬಿ ಮಾಧ್ಯಮದೊಂದಿಗೆ ಮಾತನಾಡಿದ ಫಯಾಜ್, ಮೂತ್ರಪಿಂಡದ ಕಾಯಿಲೆಗಳಿಂದಾಗಿ ನನ್ನ ತಂದೆ ತಾಯಿ ಇಬ್ಬರೂ ತೀರಿಕೊಂಡರು. ನನ್ನ ತಂದೆ ಸೌದಿ ಅರೇಬಿಯಾದಲ್ಲಿ ದೀರ್ಘಕಾಲ ಕೆಲಸ ಮಾಡಿದ್ದರು. ಅವರು 12 ವರ್ಷಗಳಿಗಿಂತ ಹೆಚ್ಚು ಕಾಲ ಮೂತ್ರಪಿಂಡ ವೈಫಲ್ಯದ ವಿರುದ್ಧ ಹೋರಾಡಿದರು. ನನ್ನ ಹೆತ್ತವರು ಇಬ್ಬರೂ ನೋವಿನಿಂದ ನೋಡಿದ್ದೇವೆ. ನಾವು ಮಕ್ಕಳು ಇನ್ನೂ ಚೇತರಿಸಿಕೊಳ್ಳುತ್ತಿದ್ದೇವೆ ನಮ್ಮ ಹೆತ್ತವರು ನಮ್ಮೊಂದಿಗೆ ಇಲ್ಲದಿರುವುದು ಆಘಾತ. ನನಗೆ ತಂಗಿ ಇದ್ದಾರೆ. ನನ್ನ ಅಕ್ಕ ಮದುವೆಯಾಗಿದ್ದಾರೆ. ಮನೆ ನಿರ್ಮಿಸಲು ನಾವು ನಮ್ಮ ಜಮೀನಿನ ಒಂದು ಭಾಗವನ್ನು ಮಾರಿದೆವು. ಆದರೆ ಅದು ಈಗ ಬಾಕಿ ಉಳಿದಿದೆ. ಒಂದು ವರ್ಷದ ಹಿಂದೆ ನನ್ನ ಕುಟುಂಬದ ಉದ್ದೇಶದಿಂದ ಮುಂಬೈಗೆ ಬಂದಿದ್ದೇವೆ ಎಂದು ಹೇಳಿದ್ದಾರೆ.

ಮೊದಲು ಡ್ರಾ ಗೆದ್ದಿರುವ ಬಗ್ಗೆ ಕರೆ ಬಂದಾಗ ನಂಬಲು ಆಗಲಿಲ್ಲ. ಬಳಿಕ ಆನ್ ಲೈನ್ ನಲ್ಲಿ  ಪರಿಶೀಲನೆ ಮಾಡಿದಾಗ ಖಚಿತವಾಯಿತು. ಮುಂದೆ ಒಂದಷ್ಟು ಕನಸುಗಳು ಇವೆ. ಅದನ್ನು ಪೂರೈಸಬೇಕಿದೆ ಎಂದು ಮಾಧ್ಯಮದೊಂದಿಗೆ ಫಯಾಜ್ ಹೇಳಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

17 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

2 days ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

4 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 days ago