Advertisement
ಸುದ್ದಿಗಳು

ಅಬ್ಬಾಸ್ ಹಾಜಿ ಕಟ್ಟೆಕ್ಕಾರ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Share

ಸುಳ್ಯ: ಕಟ್ಟೆಕ್ಕಾರ್ ಅಬ್ಬಾಸ್ ಹಾಜಿಯವರು ಸರ್ವರಿಗೂ ಆದರ್ಶಪ್ರಾಯರಾಗಿದ್ದವರು. ಅವರ ಅಗಲಿಕೆ ಸುಳ್ಯಕ್ಕೆ ತುಂಬಲಾರದ ನಷ್ಟ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಹೇಳಿದ್ದಾರೆ.

ಸುಳ್ಯದ ವಿವಿಧ ಸಂಘ ಸಂಸ್ಥೆಗಳ ಹಾಗು ನಾಗರಿಕರ ಸಹಭಾಗಿತ್ವದಲ್ಲಿ ಇತ್ತೀಚೆಗೆ ನಿಧನರಾದ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್ ಸ್ಮರಣಾರ್ಥ ನಡೆದ ಸಾರ್ವಜನಿಕ ಸಂತಾಪ ಸಭೆಯಲ್ಲಿ ಅವರು ಮಾತನಾಡಿದರು.
ಶಿಕ್ಷಣಕ್ಕೆ ಅತ್ಯಂತ ಹೆಚ್ಚು ಮಹತ್ವ ನೀಡುತ್ತಿದ್ದ ಅಬ್ಬಾಸ್ ಹಾಜಿಯವರು ಎಲ್ಲಾ ಸಂಘ ಸಂಸ್ಥೆಗಳಿಗೂ ಪ್ರೋತ್ಸಾಹ ನೀಡುತ್ತಿದ್ಸರು.
ಅಬ್ಬಾಸ್ ಹಾಜಿಯವರ ಉಪಸ್ಥಿತಿಯೇ ನಮಗೆಲ್ಲ ದೊಡ್ಡ ಶಕ್ತಿ ನೀಡುತ್ತಿತ್ತು. ಅವರ ಹೆಸರು ಅಜರಾಮರಾಗಿರಲಿ ಎಂದು ಡಾ.ಚಿದಾನಂದ ನುಡಿನಮನ ಸಲ್ಲಿಸಿದರು.
ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ರೋಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ, ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ಭಾನುಪ್ರಕಾಶ್, ಸುಳ್ಯ ರೋಟರಿ ಕ್ಲಬ್ ಕಾರ್ಯದರ್ಶಿ ಸನತ್, ಪಯಸ್ವಿನಿ ಜೇಸೀಸ್ ಅಧ್ಯಕ್ಷ ತೀರ್ಥವರ್ಣ, ಎಪಿಎಂಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿ, ನ.ಪಂ.ಮಾಜಿ ಸದಸ್ಯ ಕೆ.ಎಂ,ಮುಸ್ತಫಾ, ಲಯನ್ಸ್ ಕ್ಲಬ್ ಅಧ್ಯಕ್ಷ ಗಂಗಾಧರ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ, ಎನ್.ಎ.ಜಿತೇಂದ್ರ, ಮಾಜಿ ಕಾರ್ಯದರ್ಶಿ ಗಿರಿಜಾಶಂಕರ ತುದಿಯಡ್ಕ, ಅನ್ಸಾರ್ ಅಧ್ಯಕ್ಷ ಅಬ್ದುಲ್ ಶುಕ್ಕೂರ್, ಅನ್ಸಾರಿಯಾ ಅನಾಥಾಲಯದ ಅಧ್ಯಕ್ಷ ಅಬ್ದುಲ್ ಮಜೀದ್, ವರ್ತಕರ ಸಂಘದ ಕಾರ್ಯದರ್ಶಿ ಡಿ.ಎಸ್‌.ಗಿರೀಶ್, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎ‌‌.ಜ್ಞಾನೇಶ್ ಮತ್ತಿತರರು ನುಡಿನಮನ ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

10 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

21 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

21 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

21 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago