ಅಭಿವೃದ್ಧಿಯ ಪಥದಲ್ಲಿ “ನಿಂತಿಕಲ್ಲು ಸಾನ್ನಿಧ್ಯ”

May 17, 2019
11:06 AM

ನಿಂತಿಕಲ್ಲು: ನಿಂತಿಕಲ್ಲು  ಶ್ರೀ ವನದುರ್ಗಾ ದೇವಿ ಸಾನ್ನಿಧ್ಯ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದ್ದು ಮೇ.25 ಹಾಗೂ 26 ರಂದು ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ.

ನಿಂತಿಕಲ್ಲು ಪ್ರದೇಶದಲ್ಲಿ ಇರುವ ಶ್ರೀ ವನದುರ್ಗಾ ದೇವಿ ಸಾನ್ನಿಧ್ಯಕ್ಕೆ ಸುಮಾರು 800 ವರ್ಷಗಳ ಇತಿಹಾಸ ಇರುವುದು ಅಷ್ಟಮಂಗಲ ಚಿಂತನೆಯ ಮೂಲಕ ತಿಳಿದಿದೆ.  ಸತ್ಯದ ನೆಲೆ ಎಂಬ ಪ್ರಸಿದ್ಧಿ ಹೊಂದಿರುವ ಈ ಕ್ಷೇತ್ರದಲ್ಲಿ ಹಿಂದೆ ಪ್ರಾರ್ಥನೆ ಮಾಡಿ ಚಿನ್ನವನ್ನು  ಪಡೆದು ಹಿಂತಿರುಗಿಸುವ ಸಂಪ್ರದಾಯವೂ ಇತ್ತು.  ಇಲ್ಲಿನ ದೇವರು ಶಿಲಾರೂಪದಲ್ಲಿದ್ದರು. ಈ ದೇವರ ಶಕ್ತಿಯ ಕಲ್ಲನ್ನು ಆನೆಯಿಂದ ಕಟ್ಟಿ ಎಳೆಯಲು ಹಿಂದಿನ ರಾಜನೊಬ್ಬ  ಆದೇಶಿಸಿದಾಗ ದುಂಬಿಯ ರೂಪದಲ್ಲಿ ಬಂದ ದೇವರು ಆನೆಯ ಮೇಲೆ ದಾಳಿ ಮಾಡಿ ನಂತರ ಆನೆಯ ದೇಹ ಛಿದ್ರವಾಗಿ ಒಂದೊಂದು ದೇಹದ ಭಾಗ  ಬಿದ್ದ  ಭಾಗ ಒಂದೊಂದು ಪ್ರದೇಶವನ್ನು ಅದೇ ಹೆಸರಿನಿಂದ ಕರೆಯಲಾಯಿತು. ಬಾಲ ಬಿದ್ದ ಜಾಗ ಬೀರಾಳ, ಕಿವಿ ಬಿದ ಜಾಗ ಕೆರೆಕ್ಕೊಡಿ, ಹೊಟ್ಟೆ ಬಿದ್ದ ಭಾಗ ಅಂಬೋಜಿಕೆರೆ ಆಗಿದೆ ಎಂಬುದು ಇತಿಹಾಸ ಹಾಗೂ ನಂಬಿಕೆ.

 

ಇದೀಗ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಜನರ ಕಷ್ಟ ದೂರವಾಗಿಸುವ ಈ ಕ್ಷೇತ್ರ ನಿಂತಿಕಲ್ಲು ಸಾನಿಧ್ಯದಲ್ಲಿ ಭಕ್ತರು ತಮ್ಮ ವ್ಯವಹಾರ, ಉದ್ಯೋಗ, ಆರೋಗ್ಯ ಸೇರಿದಂತೆ ವಿವಿಧ  ಪ್ರಾರ್ಥನೆ ಮಾಡಿದರೆ ಫಲ ದೊರೆತಿದೆ.

ಇದೀಗ ಮೇ.25 ಹಾಗೂ 26 ರಂದು ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ. ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳು ಹಾಗೂ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ
August 1, 2026
7:39 PM
by: ದ ರೂರಲ್ ಮಿರರ್.ಕಾಂ
ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ
July 31, 2026
9:21 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror