Advertisement
ಧಾರ್ಮಿಕ

ಅಭಿವೃದ್ಧಿಯ ಪಥದಲ್ಲಿ “ನಿಂತಿಕಲ್ಲು ಸಾನ್ನಿಧ್ಯ”

Share

ನಿಂತಿಕಲ್ಲು: ನಿಂತಿಕಲ್ಲು  ಶ್ರೀ ವನದುರ್ಗಾ ದೇವಿ ಸಾನ್ನಿಧ್ಯ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದ್ದು ಮೇ.25 ಹಾಗೂ 26 ರಂದು ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ.

ನಿಂತಿಕಲ್ಲು ಪ್ರದೇಶದಲ್ಲಿ ಇರುವ ಶ್ರೀ ವನದುರ್ಗಾ ದೇವಿ ಸಾನ್ನಿಧ್ಯಕ್ಕೆ ಸುಮಾರು 800 ವರ್ಷಗಳ ಇತಿಹಾಸ ಇರುವುದು ಅಷ್ಟಮಂಗಲ ಚಿಂತನೆಯ ಮೂಲಕ ತಿಳಿದಿದೆ.  ಸತ್ಯದ ನೆಲೆ ಎಂಬ ಪ್ರಸಿದ್ಧಿ ಹೊಂದಿರುವ ಈ ಕ್ಷೇತ್ರದಲ್ಲಿ ಹಿಂದೆ ಪ್ರಾರ್ಥನೆ ಮಾಡಿ ಚಿನ್ನವನ್ನು  ಪಡೆದು ಹಿಂತಿರುಗಿಸುವ ಸಂಪ್ರದಾಯವೂ ಇತ್ತು.  ಇಲ್ಲಿನ ದೇವರು ಶಿಲಾರೂಪದಲ್ಲಿದ್ದರು. ಈ ದೇವರ ಶಕ್ತಿಯ ಕಲ್ಲನ್ನು ಆನೆಯಿಂದ ಕಟ್ಟಿ ಎಳೆಯಲು ಹಿಂದಿನ ರಾಜನೊಬ್ಬ  ಆದೇಶಿಸಿದಾಗ ದುಂಬಿಯ ರೂಪದಲ್ಲಿ ಬಂದ ದೇವರು ಆನೆಯ ಮೇಲೆ ದಾಳಿ ಮಾಡಿ ನಂತರ ಆನೆಯ ದೇಹ ಛಿದ್ರವಾಗಿ ಒಂದೊಂದು ದೇಹದ ಭಾಗ  ಬಿದ್ದ  ಭಾಗ ಒಂದೊಂದು ಪ್ರದೇಶವನ್ನು ಅದೇ ಹೆಸರಿನಿಂದ ಕರೆಯಲಾಯಿತು. ಬಾಲ ಬಿದ್ದ ಜಾಗ ಬೀರಾಳ, ಕಿವಿ ಬಿದ ಜಾಗ ಕೆರೆಕ್ಕೊಡಿ, ಹೊಟ್ಟೆ ಬಿದ್ದ ಭಾಗ ಅಂಬೋಜಿಕೆರೆ ಆಗಿದೆ ಎಂಬುದು ಇತಿಹಾಸ ಹಾಗೂ ನಂಬಿಕೆ.

 

ಇದೀಗ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಜನರ ಕಷ್ಟ ದೂರವಾಗಿಸುವ ಈ ಕ್ಷೇತ್ರ ನಿಂತಿಕಲ್ಲು ಸಾನಿಧ್ಯದಲ್ಲಿ ಭಕ್ತರು ತಮ್ಮ ವ್ಯವಹಾರ, ಉದ್ಯೋಗ, ಆರೋಗ್ಯ ಸೇರಿದಂತೆ ವಿವಿಧ  ಪ್ರಾರ್ಥನೆ ಮಾಡಿದರೆ ಫಲ ದೊರೆತಿದೆ.

ಇದೀಗ ಮೇ.25 ಹಾಗೂ 26 ರಂದು ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ. ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳು ಹಾಗೂ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

3 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

4 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

4 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

14 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

15 hours ago