Advertisement
ಸುದ್ದಿಗಳು

ಅಮಾಯಕನ ಮೇಲೆ ಅರಣ್ಯ ಇಲಾಖಾ ಸಿಬಂದಿಗಳಿಂದ ಹಲ್ಲೆ ಆರೋಪ : ಇಲಾಖೆಯಿಂದ ಆರೋಪ ನಿರಾಕರಣೆ

Share

ಸುಬ್ರಹ್ಮಣ್ಯ: ಅರಣ್ಯದಿಂದ ಮರ ಕಳವು ಆಗಿರುವ ಬಗ್ಗೆ ಅಮಾಯಕ ವ್ಯಕ್ತಿಯ ಮೇಲೆ ಅರಣ್ಯ ಇಲಾಖಾ ಅಧಿಕಾರಿಗಳು ಹಾಗೂ ಸಿಬಂದಿಗಳು ಹಲ್ಲೆ ನಡೆಸಿರುವ ಬಗ್ಗೆ ಇದೀಗ ತೀವ್ರ ಚರ್ಚೆಯಾಗುತ್ತಿದೆ. ಹಲ್ಲೆಯಿಂದ ಗಾಯಗೊಳಗಾಗಿರುವ ವ್ಯಕ್ತಿ ಇದೀಗ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ನೀತಿ ತಂಡವು ಈ ಘಟನೆಯನ್ನು  ಖಂಡಿಸಿದ್ದು ಮಾನವಹಕ್ಕುಗಳ ಆಯೋಗಕ್ಕೆ ದೂರು ನೀಡಲು ನಿರ್ಧರಿಸಿದೆ.

 

 

 

ಸುಬ್ರಹ್ಮಣ್ಯ ಅರಣ್ಯ ವಿಭಾಗದ ಭಾಗಿಮಲೆ ಮೀಸಲು ಅರಣ್ಯದಿಂದ ಹೆಬ್ಬಲಸು ಮರ ಕಳವಾಗಿತ್ತು. ಈ  ಪ್ರಕರಣಕ್ಕೆ ಸಂಬಂಧಿಸಿ ಲೋಕೇಶ್ ಎಂಬವರನ್ನು  ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು 25 ಸಾವಿರ ರಶೀದಿ ಸಹಿತ ದಂಡ ಪಡೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಲೋಕೇಶ್ ಅಮಾಯಕನಾಗಿದ್ದು ಈ ಪ್ರಕರಣದಲ್ಲಿ ಮರ ಕಳ್ಳತನದಲ್ಲಿ ಭಾಗಿಯಾಗಿರಲಿಲ್ಲ ಎಂದು ಈಗ ಹೇಳಲಾಗಿದೆ. ಅರಣ್ಯದಲ್ಲಿ ಯಾರೋ ಕದ್ದುಕೊಂಡು ಹೋದ ಪ್ರಕರಣದಲ್ಲಿ ಲೋಕೇಶ ಅವರೇ ಕದ್ದಿದ್ದಾರೆ ಎಂದು ಹೇಳುವುದ ಸರಿಯಲ್ಲ ಎಂಬ ವಾದವಾದರೆ ಅರಣ್ಯ ಇಲಾಖೆಯ ಸಿಬಂದಿಗಳು ಹಲ್ಲೆ ನಡೆಸಿದ್ದೂ ಅಲ್ಲದೆ ಖಾಲಿ ಪೇಪರಿಗೆ ಸಹಿ ಹಾಕಿಸಿಕೊಂಡಿದ್ದಾರೆ ಎಂದು ದೂರಲಾಗಿದೆ. ಇದೂ ಅಲ್ಲದೆ ಯಾವುದೇ ಪ್ರಕರಣ ದಾಖಲಿಸದೆ 25 ಸಾವಿರ ದಂಡ ಯಾವ ಕಾರಣಕ್ಕೆ ಎಂಬುದು ಪ್ರಶ್ನೆಯಾಗಿದೆ. ಇದೀಗ ಹಲ್ಲೆಗೊಳಗಾಗಿರುವ ಲೋಕೇಶ್ ಅವರಿಗೆ ಗಾಯವಾಗಿದ್ದು ಮೂತ್ರ ಕೋಶದ ಮೇಲೆ ಸಮಸ್ಯೆಯಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.ನೀತಿ ತಂಡವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಮಾನವಹಕ್ಕುಗಳ ಆಯೋಗಕ್ಕೆ ದೂರು ನೀಡಲು ನಿರ್ಧರಿಸಿದ್ದಾರೆ.

ಇದೇ ವೇಳೆ ಅರಣ್ಯ ಇಲಾಖೆಯು ಹಲ್ಲೆ ಆರೋಪವನ್ನು ತಳ್ಳಿ ಹಾಕಿದೆ. ಸಾಕ್ಷಿ ಆಧರಿಸಿಯೇ ಲೋಕೇಶ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದೇವೆ , ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ ಎಂದು  ಅರಣ್ಯ ಇಲಾಖೆ ಸ್ಪಷ್ಟನೆ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

24 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago