ಗುತ್ತಿಗಾರು: ದೇವಚಳ್ಳ ಗ್ರಾಮದ ತಳೂರು ಮಿತ್ತಡ್ಕ ನಿವಾಸಿ ಸತೀಶ್ ನಾಯ್ಕ ಮತ್ತು ಗಾಯತ್ರಿ ಯವರ ಪುತ್ರಿ ಅಮೃತಾಳಿಗೆ ಯುವಸ್ಪಂದನ ಟ್ರಸ್ಟ್ ನೆರವು ನೀಡಿದೆ. ಈಕೆ ಮಾವಿನಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಐದನೇ ತರಗತಿಯ ವಿದ್ಯಾರ್ಥಿನಿ. ಈಕೆಗೆ ಸುಮಾರು 6 ತಿಂಗಳಿಂದ ಥೊರಾಸಿಕ್ ಸ್ಕೂಲ್ ಎಂಬ ರೋಗದಿಂದ ಸಂಕಟ ಪಡುತ್ತಿದ್ದಾಳೆ. ಈ ರೋಗಕ್ಕೆ ಏನೋಪೊಯಾ ಆಸ್ಪತ್ರೆಯ ವೈದ್ಯರು ಸರಿಪಡಿಸುವ ಭರವಸೆ ನೀಡಿರುತ್ತಾರೆ .
ಶಸ್ತ್ರ ಚಿಕಿತ್ಸೆಗೆ ಹಣದ ಕೊರತೆಯಿಂದ ಸಂಘ ಸಂಸ್ಥೆಗಳ ಮೊರೆ ಹೋಗಿರುವ ಯುವತಿಯ ಮನೆಯವರು ನಮ್ಮ ಸಂಸ್ಥೆಗೆ ಧನಸಹಕಾರದ ಬೇಡಿಕೆಗೆ ಸ್ಪಂದಿಸಿ ಸಂಘದ ಸದಸ್ಯರು ಮತ್ತು ಊರ ಪರವೂರ ದಾನಿಗಳಿಂದ ರೂ 6,500 (ಆರು ಸಾವಿರದ ಐನೂರು ) ಚೆಕ್ಕನ್ನು ನೀಡುವ ಮೂಲಕ ಸ್ಪಂದಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೆ ಬಿ ನವೀನ್ ಕುಮಾರ್ ,ಉಪಾಧ್ಯಕ್ಷರು ರವೀಶ್ ಮೊಟ್ಟೆ ,ಕಾರ್ಯದರ್ಶಿ ಶರತ್ ಎನ್ ಕೆ ,ನಿರ್ದೇಶಕರಾದ ರಾಜಿತ್ ಕಂದ್ರಪ್ಪಾಡಿ ,ಚರಣ್ ಸಾಯಿ ಮಧುರ ,ಪ್ರಶಾಂತ್ ಬಾಕಿಲ,ಶಿವರಾಮ್ ಮೊಟ್ಟೆ ,ಚಂದ್ರಶೇಖರ್ ಪಾರೆಪಾಡಿ ,ಶ್ರೇಯಸ್ ಮುತ್ಲಾಜೆ ,ಚೇತನ್ ಬಳ್ಳಡ್ಕ ಉಪಸ್ಥಿತರಿದ್ದರು .
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…