ಗುತ್ತಿಗಾರು: ದೇವಚಳ್ಳ ಗ್ರಾಮದ ತಳೂರು ಮಿತ್ತಡ್ಕ ನಿವಾಸಿ ಸತೀಶ್ ನಾಯ್ಕ ಮತ್ತು ಗಾಯತ್ರಿ ಯವರ ಪುತ್ರಿ ಅಮೃತಾಳಿಗೆ ಯುವಸ್ಪಂದನ ಟ್ರಸ್ಟ್ ನೆರವು ನೀಡಿದೆ. ಈಕೆ ಮಾವಿನಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಐದನೇ ತರಗತಿಯ ವಿದ್ಯಾರ್ಥಿನಿ. ಈಕೆಗೆ ಸುಮಾರು 6 ತಿಂಗಳಿಂದ ಥೊರಾಸಿಕ್ ಸ್ಕೂಲ್ ಎಂಬ ರೋಗದಿಂದ ಸಂಕಟ ಪಡುತ್ತಿದ್ದಾಳೆ. ಈ ರೋಗಕ್ಕೆ ಏನೋಪೊಯಾ ಆಸ್ಪತ್ರೆಯ ವೈದ್ಯರು ಸರಿಪಡಿಸುವ ಭರವಸೆ ನೀಡಿರುತ್ತಾರೆ .
ಶಸ್ತ್ರ ಚಿಕಿತ್ಸೆಗೆ ಹಣದ ಕೊರತೆಯಿಂದ ಸಂಘ ಸಂಸ್ಥೆಗಳ ಮೊರೆ ಹೋಗಿರುವ ಯುವತಿಯ ಮನೆಯವರು ನಮ್ಮ ಸಂಸ್ಥೆಗೆ ಧನಸಹಕಾರದ ಬೇಡಿಕೆಗೆ ಸ್ಪಂದಿಸಿ ಸಂಘದ ಸದಸ್ಯರು ಮತ್ತು ಊರ ಪರವೂರ ದಾನಿಗಳಿಂದ ರೂ 6,500 (ಆರು ಸಾವಿರದ ಐನೂರು ) ಚೆಕ್ಕನ್ನು ನೀಡುವ ಮೂಲಕ ಸ್ಪಂದಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೆ ಬಿ ನವೀನ್ ಕುಮಾರ್ ,ಉಪಾಧ್ಯಕ್ಷರು ರವೀಶ್ ಮೊಟ್ಟೆ ,ಕಾರ್ಯದರ್ಶಿ ಶರತ್ ಎನ್ ಕೆ ,ನಿರ್ದೇಶಕರಾದ ರಾಜಿತ್ ಕಂದ್ರಪ್ಪಾಡಿ ,ಚರಣ್ ಸಾಯಿ ಮಧುರ ,ಪ್ರಶಾಂತ್ ಬಾಕಿಲ,ಶಿವರಾಮ್ ಮೊಟ್ಟೆ ,ಚಂದ್ರಶೇಖರ್ ಪಾರೆಪಾಡಿ ,ಶ್ರೇಯಸ್ ಮುತ್ಲಾಜೆ ,ಚೇತನ್ ಬಳ್ಳಡ್ಕ ಉಪಸ್ಥಿತರಿದ್ದರು .
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…