ಗುತ್ತಿಗಾರು: ದೇವಚಳ್ಳ ಗ್ರಾಮದ ತಳೂರು ಮಿತ್ತಡ್ಕ ನಿವಾಸಿ ಸತೀಶ್ ನಾಯ್ಕ ಮತ್ತು ಗಾಯತ್ರಿ ಯವರ ಪುತ್ರಿ ಅಮೃತಾಳಿಗೆ ಯುವಸ್ಪಂದನ ಟ್ರಸ್ಟ್ ನೆರವು ನೀಡಿದೆ. ಈಕೆ ಮಾವಿನಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಐದನೇ ತರಗತಿಯ ವಿದ್ಯಾರ್ಥಿನಿ. ಈಕೆಗೆ ಸುಮಾರು 6 ತಿಂಗಳಿಂದ ಥೊರಾಸಿಕ್ ಸ್ಕೂಲ್ ಎಂಬ ರೋಗದಿಂದ ಸಂಕಟ ಪಡುತ್ತಿದ್ದಾಳೆ. ಈ ರೋಗಕ್ಕೆ ಏನೋಪೊಯಾ ಆಸ್ಪತ್ರೆಯ ವೈದ್ಯರು ಸರಿಪಡಿಸುವ ಭರವಸೆ ನೀಡಿರುತ್ತಾರೆ .
ಶಸ್ತ್ರ ಚಿಕಿತ್ಸೆಗೆ ಹಣದ ಕೊರತೆಯಿಂದ ಸಂಘ ಸಂಸ್ಥೆಗಳ ಮೊರೆ ಹೋಗಿರುವ ಯುವತಿಯ ಮನೆಯವರು ನಮ್ಮ ಸಂಸ್ಥೆಗೆ ಧನಸಹಕಾರದ ಬೇಡಿಕೆಗೆ ಸ್ಪಂದಿಸಿ ಸಂಘದ ಸದಸ್ಯರು ಮತ್ತು ಊರ ಪರವೂರ ದಾನಿಗಳಿಂದ ರೂ 6,500 (ಆರು ಸಾವಿರದ ಐನೂರು ) ಚೆಕ್ಕನ್ನು ನೀಡುವ ಮೂಲಕ ಸ್ಪಂದಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೆ ಬಿ ನವೀನ್ ಕುಮಾರ್ ,ಉಪಾಧ್ಯಕ್ಷರು ರವೀಶ್ ಮೊಟ್ಟೆ ,ಕಾರ್ಯದರ್ಶಿ ಶರತ್ ಎನ್ ಕೆ ,ನಿರ್ದೇಶಕರಾದ ರಾಜಿತ್ ಕಂದ್ರಪ್ಪಾಡಿ ,ಚರಣ್ ಸಾಯಿ ಮಧುರ ,ಪ್ರಶಾಂತ್ ಬಾಕಿಲ,ಶಿವರಾಮ್ ಮೊಟ್ಟೆ ,ಚಂದ್ರಶೇಖರ್ ಪಾರೆಪಾಡಿ ,ಶ್ರೇಯಸ್ ಮುತ್ಲಾಜೆ ,ಚೇತನ್ ಬಳ್ಳಡ್ಕ ಉಪಸ್ಥಿತರಿದ್ದರು .
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…