ಗುತ್ತಿಗಾರು: ದೇವಚಳ್ಳ ಗ್ರಾಮದ ತಳೂರು ಮಿತ್ತಡ್ಕ ನಿವಾಸಿ ಸತೀಶ್ ನಾಯ್ಕ ಮತ್ತು ಗಾಯತ್ರಿ ಯವರ ಪುತ್ರಿ ಅಮೃತಾಳಿಗೆ ಯುವಸ್ಪಂದನ ಟ್ರಸ್ಟ್ ನೆರವು ನೀಡಿದೆ. ಈಕೆ ಮಾವಿನಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಐದನೇ ತರಗತಿಯ ವಿದ್ಯಾರ್ಥಿನಿ. ಈಕೆಗೆ ಸುಮಾರು 6 ತಿಂಗಳಿಂದ ಥೊರಾಸಿಕ್ ಸ್ಕೂಲ್ ಎಂಬ ರೋಗದಿಂದ ಸಂಕಟ ಪಡುತ್ತಿದ್ದಾಳೆ. ಈ ರೋಗಕ್ಕೆ ಏನೋಪೊಯಾ ಆಸ್ಪತ್ರೆಯ ವೈದ್ಯರು ಸರಿಪಡಿಸುವ ಭರವಸೆ ನೀಡಿರುತ್ತಾರೆ .
ಶಸ್ತ್ರ ಚಿಕಿತ್ಸೆಗೆ ಹಣದ ಕೊರತೆಯಿಂದ ಸಂಘ ಸಂಸ್ಥೆಗಳ ಮೊರೆ ಹೋಗಿರುವ ಯುವತಿಯ ಮನೆಯವರು ನಮ್ಮ ಸಂಸ್ಥೆಗೆ ಧನಸಹಕಾರದ ಬೇಡಿಕೆಗೆ ಸ್ಪಂದಿಸಿ ಸಂಘದ ಸದಸ್ಯರು ಮತ್ತು ಊರ ಪರವೂರ ದಾನಿಗಳಿಂದ ರೂ 6,500 (ಆರು ಸಾವಿರದ ಐನೂರು ) ಚೆಕ್ಕನ್ನು ನೀಡುವ ಮೂಲಕ ಸ್ಪಂದಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೆ ಬಿ ನವೀನ್ ಕುಮಾರ್ ,ಉಪಾಧ್ಯಕ್ಷರು ರವೀಶ್ ಮೊಟ್ಟೆ ,ಕಾರ್ಯದರ್ಶಿ ಶರತ್ ಎನ್ ಕೆ ,ನಿರ್ದೇಶಕರಾದ ರಾಜಿತ್ ಕಂದ್ರಪ್ಪಾಡಿ ,ಚರಣ್ ಸಾಯಿ ಮಧುರ ,ಪ್ರಶಾಂತ್ ಬಾಕಿಲ,ಶಿವರಾಮ್ ಮೊಟ್ಟೆ ,ಚಂದ್ರಶೇಖರ್ ಪಾರೆಪಾಡಿ ,ಶ್ರೇಯಸ್ ಮುತ್ಲಾಜೆ ,ಚೇತನ್ ಬಳ್ಳಡ್ಕ ಉಪಸ್ಥಿತರಿದ್ದರು .
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"