ಅಮೃತಾಳ ಬಾಳಿಗೆ ನೀವು ಬೆಳಕಾಗುವಿರಾ…!

June 16, 2019
1:00 PM

ಸುಳ್ಯ: ಎಲ್ಲರಂತೆ ಆಟವಾಡಿ ಬೆಳೆಯಬೇಕಾಗಿದ್ದ ಅಮೃತಾಳ ಬಾಳಿಗೆ ಬಲ ಥೋರಾಸಿಕ್ ಸ್ಕೋಲಿಯೋಸಿಸ್ ಭಾದಿಸಿ ಕೆಲ ಸಮಯದಿಂದ ಸಂಕಟ ಪಡುತ್ತಿದ್ದಾಳೆ. ಈಕೆ ಮಾವಿನಕಟ್ಟೆ ಹಿ.ಪ್ರಾ.ಶಾಲೆಯ 5ನೇ ತರಗತಿ ವಿದ್ಯಾರ್ಥಿ.

ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕ ನಿವಾಸಿ ಸತೀಶ್ ನಾಯ್ಕ ಮತ್ತು ಗಾಯತ್ರಿ ಯವರ ಮೂವರು ಪುತ್ರಿಯರಲ್ಲಿ ಎರಡನೆಯವಳು. ಕಳೆದ 6 ತಿಂಗಳಿಂದ ಬೆನ್ನು ನೋವು ಆರಂಭವಾಗಿ ಕ್ರಮೇಣ ಬೆನ್ನು ಸಂಪೂರ್ಣ ಬಾಗಿದೆ. ಎಲ್ಲ ಮಕ್ಕಳಂತೆ ಬೆಳೆಯಬೇಕಾಗಿದ್ದ ಅಮೃತಾಳ ಬಾಳಲ್ಲಿ ಕತ್ತಲು ಆವರಿಸಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿಲ್ಲ. ಇದನ್ನು ಪರೀಕ್ಷಿಸಿದ ಮಂಗಳೂರಿನ ಯೇನಪೋಯ ಆಸ್ಪತ್ರೆಯ ವೈಧ್ಯರು ಸರಿಪಡಿಸುವ ಭರವಸೆ ನೀಡಿದ್ದಾರೆ. ಇದಕ್ಕೆ ಸುಮಾರು 4 ಲಕ್ಷಕ್ಕೂ ಅಧಿಕ ಖರ್ಚು ತಗಲಬಹುದು ಎಂದು ವೈದ್ಯರು ತಿಳಿಸಿರುತ್ತಾರೆ. ಆದರೆ ತೀರ ಬಡತನದಲ್ಲಿರುವ ಇವರ ಪೋಷಕರಿಗೆ ಚಿಕಿತ್ಸೆಗೆ ಬೇಕಾದ ವೆಚ್ಚ ಭರಿಸುವುದು ಅಸಾಧ್ಯವಾಗಿದೆ. ಇದೀಗ ಅಜ್ಜಿ ಜಾನಕಿ ಯವರು ಅಮೃತಾಳ ಬಾಳನ್ನು ಬೆಳಗಲು ತನ್ನಿಂದ ಆದ ಪ್ರಯತ್ನ ಆರಂಭಿಸಿದ್ದಾರೆ. ಇವರ ಜೊತೆ ಸಹೃದಯಿಗಳ ಸಹಾಯ ಹಸ್ತ ಬೇಕಿದೆ. ಹಿಂದಿನಂತೆ ಅಮೃತಾ ನಲಿದಾಡುವಂತಾಗಬೇಕಿದೆ. ಸಹಾಯ ಹಸ್ತ ಚಾಚುವವರು ಜಾನಕಿ ಮೆತ್ತಡ್ಕ  ಮೊ: 7760636927 ಸಂಪರ್ಕ ಮಾಡಬಹುದು.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿಕ್ಕಮಗಳೂರು ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ | ಡ್ರೋನ್‌ ಮೊರೆ ಹೋಗುತ್ತಿರುವ ಅರಣ್ಯ ಇಲಾಖೆ |
February 28, 2025
7:34 AM
by: The Rural Mirror ಸುದ್ದಿಜಾಲ
ಹೆಚ್ಚುತ್ತಿರುವ ಅಡಿಕೆ ವಂಚನೆ ಪ್ರಕರಣ | ಅಡಿಕೆ ಬೆಳೆಗಾರರಲ್ಲಿ ಇರಲಿ ಎಚ್ಚರ |
February 26, 2025
9:49 PM
by: The Rural Mirror ಸುದ್ದಿಜಾಲ
ಜಾಗತಿಕ ತಾಪಮಾನ ಏರಿಕೆ | ಪಶ್ಚಿಮ ಘಟ್ಟಗಳು ಹೇಗೆ ಬದಲಾಗಿವೆ..? | ಕೃಷಿ ಉಳಿವಿಗೆ ಏನು ಮಾಡಬೇಕು..? | 2025 ರಲ್ಲಿ ಏನು ಮಾಡಬಹುದು..?
January 2, 2025
7:23 AM
by: ಮಹೇಶ್ ಪುಚ್ಚಪ್ಪಾಡಿ
ಅಡಿಕೆಯ ಮೇಲೆ ಕ್ಯಾನ್ಸರ್‌ ಗುಮ್ಮ | 20 ವರ್ಷಗಳಿಂದ ಏನೇನಾಯ್ತು..? | ಮುಂದೇನು ಮಾಡಬಹುದು..?
November 20, 2024
11:27 AM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror