ಸುಳ್ಯ: ಎಲ್ಲರಂತೆ ಆಟವಾಡಿ ಬೆಳೆಯಬೇಕಾಗಿದ್ದ ಅಮೃತಾಳ ಬಾಳಿಗೆ ಬಲ ಥೋರಾಸಿಕ್ ಸ್ಕೋಲಿಯೋಸಿಸ್ ಭಾದಿಸಿ ಕೆಲ ಸಮಯದಿಂದ ಸಂಕಟ ಪಡುತ್ತಿದ್ದಾಳೆ. ಈಕೆ ಮಾವಿನಕಟ್ಟೆ ಹಿ.ಪ್ರಾ.ಶಾಲೆಯ 5ನೇ ತರಗತಿ ವಿದ್ಯಾರ್ಥಿ.
ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕ ನಿವಾಸಿ ಸತೀಶ್ ನಾಯ್ಕ ಮತ್ತು ಗಾಯತ್ರಿ ಯವರ ಮೂವರು ಪುತ್ರಿಯರಲ್ಲಿ ಎರಡನೆಯವಳು. ಕಳೆದ 6 ತಿಂಗಳಿಂದ ಬೆನ್ನು ನೋವು ಆರಂಭವಾಗಿ ಕ್ರಮೇಣ ಬೆನ್ನು ಸಂಪೂರ್ಣ ಬಾಗಿದೆ. ಎಲ್ಲ ಮಕ್ಕಳಂತೆ ಬೆಳೆಯಬೇಕಾಗಿದ್ದ ಅಮೃತಾಳ ಬಾಳಲ್ಲಿ ಕತ್ತಲು ಆವರಿಸಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿಲ್ಲ. ಇದನ್ನು ಪರೀಕ್ಷಿಸಿದ ಮಂಗಳೂರಿನ ಯೇನಪೋಯ ಆಸ್ಪತ್ರೆಯ ವೈಧ್ಯರು ಸರಿಪಡಿಸುವ ಭರವಸೆ ನೀಡಿದ್ದಾರೆ. ಇದಕ್ಕೆ ಸುಮಾರು 4 ಲಕ್ಷಕ್ಕೂ ಅಧಿಕ ಖರ್ಚು ತಗಲಬಹುದು ಎಂದು ವೈದ್ಯರು ತಿಳಿಸಿರುತ್ತಾರೆ. ಆದರೆ ತೀರ ಬಡತನದಲ್ಲಿರುವ ಇವರ ಪೋಷಕರಿಗೆ ಚಿಕಿತ್ಸೆಗೆ ಬೇಕಾದ ವೆಚ್ಚ ಭರಿಸುವುದು ಅಸಾಧ್ಯವಾಗಿದೆ. ಇದೀಗ ಅಜ್ಜಿ ಜಾನಕಿ ಯವರು ಅಮೃತಾಳ ಬಾಳನ್ನು ಬೆಳಗಲು ತನ್ನಿಂದ ಆದ ಪ್ರಯತ್ನ ಆರಂಭಿಸಿದ್ದಾರೆ. ಇವರ ಜೊತೆ ಸಹೃದಯಿಗಳ ಸಹಾಯ ಹಸ್ತ ಬೇಕಿದೆ. ಹಿಂದಿನಂತೆ ಅಮೃತಾ ನಲಿದಾಡುವಂತಾಗಬೇಕಿದೆ. ಸಹಾಯ ಹಸ್ತ ಚಾಚುವವರು ಜಾನಕಿ ಮೆತ್ತಡ್ಕ ಮೊ: 7760636927 ಸಂಪರ್ಕ ಮಾಡಬಹುದು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…