ಸುಳ್ಯ: ಎಲ್ಲರಂತೆ ಆಟವಾಡಿ ಬೆಳೆಯಬೇಕಾಗಿದ್ದ ಅಮೃತಾಳ ಬಾಳಿಗೆ ಬಲ ಥೋರಾಸಿಕ್ ಸ್ಕೋಲಿಯೋಸಿಸ್ ಭಾದಿಸಿ ಕೆಲ ಸಮಯದಿಂದ ಸಂಕಟ ಪಡುತ್ತಿದ್ದಾಳೆ. ಈಕೆ ಮಾವಿನಕಟ್ಟೆ ಹಿ.ಪ್ರಾ.ಶಾಲೆಯ 5ನೇ ತರಗತಿ ವಿದ್ಯಾರ್ಥಿ.
ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕ ನಿವಾಸಿ ಸತೀಶ್ ನಾಯ್ಕ ಮತ್ತು ಗಾಯತ್ರಿ ಯವರ ಮೂವರು ಪುತ್ರಿಯರಲ್ಲಿ ಎರಡನೆಯವಳು. ಕಳೆದ 6 ತಿಂಗಳಿಂದ ಬೆನ್ನು ನೋವು ಆರಂಭವಾಗಿ ಕ್ರಮೇಣ ಬೆನ್ನು ಸಂಪೂರ್ಣ ಬಾಗಿದೆ. ಎಲ್ಲ ಮಕ್ಕಳಂತೆ ಬೆಳೆಯಬೇಕಾಗಿದ್ದ ಅಮೃತಾಳ ಬಾಳಲ್ಲಿ ಕತ್ತಲು ಆವರಿಸಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿಲ್ಲ. ಇದನ್ನು ಪರೀಕ್ಷಿಸಿದ ಮಂಗಳೂರಿನ ಯೇನಪೋಯ ಆಸ್ಪತ್ರೆಯ ವೈಧ್ಯರು ಸರಿಪಡಿಸುವ ಭರವಸೆ ನೀಡಿದ್ದಾರೆ. ಇದಕ್ಕೆ ಸುಮಾರು 4 ಲಕ್ಷಕ್ಕೂ ಅಧಿಕ ಖರ್ಚು ತಗಲಬಹುದು ಎಂದು ವೈದ್ಯರು ತಿಳಿಸಿರುತ್ತಾರೆ. ಆದರೆ ತೀರ ಬಡತನದಲ್ಲಿರುವ ಇವರ ಪೋಷಕರಿಗೆ ಚಿಕಿತ್ಸೆಗೆ ಬೇಕಾದ ವೆಚ್ಚ ಭರಿಸುವುದು ಅಸಾಧ್ಯವಾಗಿದೆ. ಇದೀಗ ಅಜ್ಜಿ ಜಾನಕಿ ಯವರು ಅಮೃತಾಳ ಬಾಳನ್ನು ಬೆಳಗಲು ತನ್ನಿಂದ ಆದ ಪ್ರಯತ್ನ ಆರಂಭಿಸಿದ್ದಾರೆ. ಇವರ ಜೊತೆ ಸಹೃದಯಿಗಳ ಸಹಾಯ ಹಸ್ತ ಬೇಕಿದೆ. ಹಿಂದಿನಂತೆ ಅಮೃತಾ ನಲಿದಾಡುವಂತಾಗಬೇಕಿದೆ. ಸಹಾಯ ಹಸ್ತ ಚಾಚುವವರು ಜಾನಕಿ ಮೆತ್ತಡ್ಕ ಮೊ: 7760636927 ಸಂಪರ್ಕ ಮಾಡಬಹುದು.
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…