Advertisement
The Rural Mirror ಕಾಳಜಿ

ಅಮೃತಾಳ ಬಾಳಿಗೆ ನೀವು ಬೆಳಕಾಗುವಿರಾ…!

Share

ಸುಳ್ಯ: ಎಲ್ಲರಂತೆ ಆಟವಾಡಿ ಬೆಳೆಯಬೇಕಾಗಿದ್ದ ಅಮೃತಾಳ ಬಾಳಿಗೆ ಬಲ ಥೋರಾಸಿಕ್ ಸ್ಕೋಲಿಯೋಸಿಸ್ ಭಾದಿಸಿ ಕೆಲ ಸಮಯದಿಂದ ಸಂಕಟ ಪಡುತ್ತಿದ್ದಾಳೆ. ಈಕೆ ಮಾವಿನಕಟ್ಟೆ ಹಿ.ಪ್ರಾ.ಶಾಲೆಯ 5ನೇ ತರಗತಿ ವಿದ್ಯಾರ್ಥಿ.

ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕ ನಿವಾಸಿ ಸತೀಶ್ ನಾಯ್ಕ ಮತ್ತು ಗಾಯತ್ರಿ ಯವರ ಮೂವರು ಪುತ್ರಿಯರಲ್ಲಿ ಎರಡನೆಯವಳು. ಕಳೆದ 6 ತಿಂಗಳಿಂದ ಬೆನ್ನು ನೋವು ಆರಂಭವಾಗಿ ಕ್ರಮೇಣ ಬೆನ್ನು ಸಂಪೂರ್ಣ ಬಾಗಿದೆ. ಎಲ್ಲ ಮಕ್ಕಳಂತೆ ಬೆಳೆಯಬೇಕಾಗಿದ್ದ ಅಮೃತಾಳ ಬಾಳಲ್ಲಿ ಕತ್ತಲು ಆವರಿಸಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿಲ್ಲ. ಇದನ್ನು ಪರೀಕ್ಷಿಸಿದ ಮಂಗಳೂರಿನ ಯೇನಪೋಯ ಆಸ್ಪತ್ರೆಯ ವೈಧ್ಯರು ಸರಿಪಡಿಸುವ ಭರವಸೆ ನೀಡಿದ್ದಾರೆ. ಇದಕ್ಕೆ ಸುಮಾರು 4 ಲಕ್ಷಕ್ಕೂ ಅಧಿಕ ಖರ್ಚು ತಗಲಬಹುದು ಎಂದು ವೈದ್ಯರು ತಿಳಿಸಿರುತ್ತಾರೆ. ಆದರೆ ತೀರ ಬಡತನದಲ್ಲಿರುವ ಇವರ ಪೋಷಕರಿಗೆ ಚಿಕಿತ್ಸೆಗೆ ಬೇಕಾದ ವೆಚ್ಚ ಭರಿಸುವುದು ಅಸಾಧ್ಯವಾಗಿದೆ. ಇದೀಗ ಅಜ್ಜಿ ಜಾನಕಿ ಯವರು ಅಮೃತಾಳ ಬಾಳನ್ನು ಬೆಳಗಲು ತನ್ನಿಂದ ಆದ ಪ್ರಯತ್ನ ಆರಂಭಿಸಿದ್ದಾರೆ. ಇವರ ಜೊತೆ ಸಹೃದಯಿಗಳ ಸಹಾಯ ಹಸ್ತ ಬೇಕಿದೆ. ಹಿಂದಿನಂತೆ ಅಮೃತಾ ನಲಿದಾಡುವಂತಾಗಬೇಕಿದೆ. ಸಹಾಯ ಹಸ್ತ ಚಾಚುವವರು ಜಾನಕಿ ಮೆತ್ತಡ್ಕ  ಮೊ: 7760636927 ಸಂಪರ್ಕ ಮಾಡಬಹುದು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

7 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

8 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

2 days ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

2 days ago