ಸುಳ್ಯ: ಎಲ್ಲರಂತೆ ಆಟವಾಡಿ ಬೆಳೆಯಬೇಕಾಗಿದ್ದ ಅಮೃತಾಳ ಬಾಳಿಗೆ ಬಲ ಥೋರಾಸಿಕ್ ಸ್ಕೋಲಿಯೋಸಿಸ್ ಭಾದಿಸಿ ಕೆಲ ಸಮಯದಿಂದ ಸಂಕಟ ಪಡುತ್ತಿದ್ದಾಳೆ. ಈಕೆ ಮಾವಿನಕಟ್ಟೆ ಹಿ.ಪ್ರಾ.ಶಾಲೆಯ 5ನೇ ತರಗತಿ ವಿದ್ಯಾರ್ಥಿ.
ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕ ನಿವಾಸಿ ಸತೀಶ್ ನಾಯ್ಕ ಮತ್ತು ಗಾಯತ್ರಿ ಯವರ ಮೂವರು ಪುತ್ರಿಯರಲ್ಲಿ ಎರಡನೆಯವಳು. ಕಳೆದ 6 ತಿಂಗಳಿಂದ ಬೆನ್ನು ನೋವು ಆರಂಭವಾಗಿ ಕ್ರಮೇಣ ಬೆನ್ನು ಸಂಪೂರ್ಣ ಬಾಗಿದೆ. ಎಲ್ಲ ಮಕ್ಕಳಂತೆ ಬೆಳೆಯಬೇಕಾಗಿದ್ದ ಅಮೃತಾಳ ಬಾಳಲ್ಲಿ ಕತ್ತಲು ಆವರಿಸಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿಲ್ಲ. ಇದನ್ನು ಪರೀಕ್ಷಿಸಿದ ಮಂಗಳೂರಿನ ಯೇನಪೋಯ ಆಸ್ಪತ್ರೆಯ ವೈಧ್ಯರು ಸರಿಪಡಿಸುವ ಭರವಸೆ ನೀಡಿದ್ದಾರೆ. ಇದಕ್ಕೆ ಸುಮಾರು 4 ಲಕ್ಷಕ್ಕೂ ಅಧಿಕ ಖರ್ಚು ತಗಲಬಹುದು ಎಂದು ವೈದ್ಯರು ತಿಳಿಸಿರುತ್ತಾರೆ. ಆದರೆ ತೀರ ಬಡತನದಲ್ಲಿರುವ ಇವರ ಪೋಷಕರಿಗೆ ಚಿಕಿತ್ಸೆಗೆ ಬೇಕಾದ ವೆಚ್ಚ ಭರಿಸುವುದು ಅಸಾಧ್ಯವಾಗಿದೆ. ಇದೀಗ ಅಜ್ಜಿ ಜಾನಕಿ ಯವರು ಅಮೃತಾಳ ಬಾಳನ್ನು ಬೆಳಗಲು ತನ್ನಿಂದ ಆದ ಪ್ರಯತ್ನ ಆರಂಭಿಸಿದ್ದಾರೆ. ಇವರ ಜೊತೆ ಸಹೃದಯಿಗಳ ಸಹಾಯ ಹಸ್ತ ಬೇಕಿದೆ. ಹಿಂದಿನಂತೆ ಅಮೃತಾ ನಲಿದಾಡುವಂತಾಗಬೇಕಿದೆ. ಸಹಾಯ ಹಸ್ತ ಚಾಚುವವರು ಜಾನಕಿ ಮೆತ್ತಡ್ಕ ಮೊ: 7760636927 ಸಂಪರ್ಕ ಮಾಡಬಹುದು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…