Advertisement
ಸುದ್ದಿಗಳು

ಅಮೇರಿಕ ನಿರ್ಮಿತ 8 ಅಪಾಚೆ ಯುದ್ಧವಿಮಾನಗಳು ಭಾರತೀಯ ವಾಯುಪಡೆಗೆ ಸೇರ್ಪಡೆ

Share

ನವದೆಹಲಿ: ಅಮೆರಿಕ ನಿರ್ಮಿತ 8 ಅಪಾಚೆ ಎಎಚ್​-64ಇ ಯುದ್ಧಹೆಲಿಕಾಪ್ಟರ್​ಗಳು ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡಿದೆ. ಪಠಾನ್​ಕೋಟ್​ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ವಾಯುಪಡೆ ಮುಖ್ಯಸ್ಥ ಏರ್​ಚೀಫ್​ ಮಾರ್ಷಲ್​ ಬಿ.ಎಸ್​. ಧನೋವಾ ಹೆಲಿಕಾಪ್ಟರ್​ಗಳನ್ನು ಬರಮಾಡಿಕೊಂಡರು.

ಭಾರತದ ವಾಯುಪಡೆಯ ಆಧುನೀಕರಣ ಯೋಜನೆಗಳ ಭಾಗವಾಗಿ ಯುಎಸ್ ನಿರ್ಮಿತ ಅಪಾಚೆ ಎಎಚ್ -64 ಇ ಹೆಲಿಕಾಪ್ಟರ್‌ಗಳನ್ನು ಸೇರ್ಪಡೆ ಮಾಡಲಾಗಿದೆ.
ಒಟ್ಟು 22 ಅಪಾಚೆ ಯುದ್ಧಹೆಲಿಕಾಪ್ಟರ್​ಗಳನ್ನು ಖರೀದಿಸಲಾಗುತ್ತಿದೆ. ಇನ್ನುಳಿದ ಹೆಲಿಕಾಪ್ಟರ್​ಗಳು ಕಂತಿನಲ್ಲಿ ಬರಲಿದ್ದು, ಹಂತಹಂತವಾಗಿ ಅವನ್ನು ಸೇವೆಗೆ ಸೇರ್ಪಡೆಗೊಳಿಸಿಕೊಳ್ಳಲಾಗುವುದು. ವಾಯುಪಡೆ ಹಿಂದೆಯೂ ಯುದ್ಧಹೆಲಿಕಾಪ್ಟರ್​ಗಳನ್ನು ಹೊಂದಿತ್ತು. ಆದರೆ ಅಪಾಚೆ ಯುದ್ಧ ಹೆಲಿಕಾಪ್ಟರ್​ಗಳು ಹೆಚ್ಚಿನ ನಿಖರತೆಯೊಂದಿಗೆ ದಾಳಿ ಮಾಡುವ ಸಾಮರ್ಥ್ಯ ಹೊಂದಿವೆ ಎಂದು ವಾಯಪಡೆಯ ವಕ್ತಾರರು ಹೇಳಿದ್ದಾರೆ. ಎಎಚ್​-64ಇ ಯುದ್ಧಹೆಲಿಕಾಪ್ಟರ್​ಗಳು ವಿಶ್ವದಲ್ಲಿ ಸದ್ಯ ಲಭ್ಯ ಇರುವ ಅತ್ಯಾಧುನಿಕ ಯುದ್ಧ ಹೆಲಿಕಾಪ್ಟರ್​ಗಳಾಗಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

1 minute ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

2 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

3 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

18 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

20 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

1 day ago