Advertisement
ಸುದ್ದಿಗಳು

ಅಮೇರಿಕ ನಿರ್ಮಿತ 8 ಅಪಾಚೆ ಯುದ್ಧವಿಮಾನಗಳು ಭಾರತೀಯ ವಾಯುಪಡೆಗೆ ಸೇರ್ಪಡೆ

Share

ನವದೆಹಲಿ: ಅಮೆರಿಕ ನಿರ್ಮಿತ 8 ಅಪಾಚೆ ಎಎಚ್​-64ಇ ಯುದ್ಧಹೆಲಿಕಾಪ್ಟರ್​ಗಳು ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡಿದೆ. ಪಠಾನ್​ಕೋಟ್​ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ವಾಯುಪಡೆ ಮುಖ್ಯಸ್ಥ ಏರ್​ಚೀಫ್​ ಮಾರ್ಷಲ್​ ಬಿ.ಎಸ್​. ಧನೋವಾ ಹೆಲಿಕಾಪ್ಟರ್​ಗಳನ್ನು ಬರಮಾಡಿಕೊಂಡರು.

ಭಾರತದ ವಾಯುಪಡೆಯ ಆಧುನೀಕರಣ ಯೋಜನೆಗಳ ಭಾಗವಾಗಿ ಯುಎಸ್ ನಿರ್ಮಿತ ಅಪಾಚೆ ಎಎಚ್ -64 ಇ ಹೆಲಿಕಾಪ್ಟರ್‌ಗಳನ್ನು ಸೇರ್ಪಡೆ ಮಾಡಲಾಗಿದೆ.
ಒಟ್ಟು 22 ಅಪಾಚೆ ಯುದ್ಧಹೆಲಿಕಾಪ್ಟರ್​ಗಳನ್ನು ಖರೀದಿಸಲಾಗುತ್ತಿದೆ. ಇನ್ನುಳಿದ ಹೆಲಿಕಾಪ್ಟರ್​ಗಳು ಕಂತಿನಲ್ಲಿ ಬರಲಿದ್ದು, ಹಂತಹಂತವಾಗಿ ಅವನ್ನು ಸೇವೆಗೆ ಸೇರ್ಪಡೆಗೊಳಿಸಿಕೊಳ್ಳಲಾಗುವುದು. ವಾಯುಪಡೆ ಹಿಂದೆಯೂ ಯುದ್ಧಹೆಲಿಕಾಪ್ಟರ್​ಗಳನ್ನು ಹೊಂದಿತ್ತು. ಆದರೆ ಅಪಾಚೆ ಯುದ್ಧ ಹೆಲಿಕಾಪ್ಟರ್​ಗಳು ಹೆಚ್ಚಿನ ನಿಖರತೆಯೊಂದಿಗೆ ದಾಳಿ ಮಾಡುವ ಸಾಮರ್ಥ್ಯ ಹೊಂದಿವೆ ಎಂದು ವಾಯಪಡೆಯ ವಕ್ತಾರರು ಹೇಳಿದ್ದಾರೆ. ಎಎಚ್​-64ಇ ಯುದ್ಧಹೆಲಿಕಾಪ್ಟರ್​ಗಳು ವಿಶ್ವದಲ್ಲಿ ಸದ್ಯ ಲಭ್ಯ ಇರುವ ಅತ್ಯಾಧುನಿಕ ಯುದ್ಧ ಹೆಲಿಕಾಪ್ಟರ್​ಗಳಾಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

3 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

4 hours ago

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

6 hours ago

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

17 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

21 hours ago