ನನ್ನಮ್ಮ ಹೊತ್ತುಕೊಂಡಿದ್ದಾಳೆ ಕನಸುಗಳನ್ನು
ಹಿಡಿಯಲ್ಲಿ ಹಿಡಿಯದಷ್ಟು
ಹತ್ತಬಹುದು ಗಿರಿ ಶಿಖರಗಳನ್ನು
ಈಕೆಯ ಕನಸುಗಳಿವೆ ಹತ್ತಿ ಮುಗಿಯದಷ್ಟು..
ಬಡತನದ ಬೆವರಿನ ಹನಿಯೂ
ಪ್ರತಿ ನರನಾಡಿಗಳಲ್ಲೂ ಅರಗಿಸಲು
ಸಾಧ್ಯವಿಲ್ಲದ ನೋವು – ದುಃಖಗಲ್ಲೂ
ಕೊಟ್ಟಿದ್ದಾಳೆ ಭವಿಷ್ಯದ ಹೊಸ ಕನಸುಗಳನ್ನು..
ನನಸಾಗುವ ಹಾದಿಯಲ್ಲಿತ್ತು
ಆ ಕನಸುಗಳ ಗುಚ್ಛ
ತನ್ನಾಸೆಗಳ ಬದಿಗೊತ್ತಿ
ದುಡಿದಳು ನಿತ್ಯ ನಿರ್ಮಲೆಯಾಗಿ..
ಬತ್ತದಷ್ಟು ಬಯಕೆಗಳಿತ್ತು ಆ
ಕನಸುಗಳಲ್ಲಿ..ತಾನು ಮನಗಳಲ್ಲೂ
ಎಲ್ಲವನ್ನೂ ಅದುಮಿಟ್ಟಳು
ತನ್ನಂತರಂಗದ ಆಂತರ್ಯದಲ್ಲಿ..
ತನಗಾಗಿ ಹಿಗ್ಗಲ್ಲಿಲ್ಲ ಜಗ್ಗಲಿಲ್ಲ
ಹಿಗ್ಗಿದಳು ಕುಗ್ಗಿದಳು..ತನ್ನವರಿಗಾಗಿ
ಉಸಿರುಗಟ್ಟಿ ದುಡಿದಳು , ಶ್ರಮಿಸಿದಳು
ಎಂದೆಂದಿಗೂ ತನ್ನ ಕರುಳ ಬಳ್ಳಿಗಾಗಿ..
ಎಡೆಬಿಡದ ಕರ್ಮ , ಕ್ಲಿಷ್ಟ ಯಾತನೆಗಳ ಉದ್ದಕ್ಕೂ
ಬೀಳಲಿಲ್ಲ ಬದುಕ ಬಂಡಿ
ಕಣ್ಣುಗಳಲ್ಲಿತ್ತು ಕಾತುರಗಳ ಛಾಯೆ
ಕಾಯುತ್ತಿದ್ದಳು ಚೈತ್ರದ ಕ್ಷಣಕ್ಕಾಗಿ
ತುಂಬಿ ಹೋಗಿತ್ತು ಜೀವ , ಬದುಕು , ಉಸಿರು
ಎಲ್ಲವೂ ಒಂದೇ ಆಗಿತ್ತು
ಹೃದಯ – ಕಣ್ಣುಗಳೆರಡೂ ಬಯಸಿತ್ತು
ಕರುಳ ಕುಡಿಯ ಕನಸುಗಳ ಅಸ್ತಿತ್ವವನ್ನು..
# ನಯನ.ಜಿ.ಎಸ್. , ಕೋಟೆ ಮುಂಡುಗಾರು.
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…