Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನನ್ನಮ್ಮ ಹೊತ್ತುಕೊಂಡಿದ್ದಾಳೆ ಕನಸುಗಳನ್ನು
ಹಿಡಿಯಲ್ಲಿ ಹಿಡಿಯದಷ್ಟು
ಹತ್ತಬಹುದು ಗಿರಿ ಶಿಖರಗಳನ್ನು
ಈಕೆಯ ಕನಸುಗಳಿವೆ ಹತ್ತಿ ಮುಗಿಯದಷ್ಟು..

Advertisement
Advertisement

ಬಡತನದ ಬೆವರಿನ ಹನಿಯೂ
ಪ್ರತಿ ನರನಾಡಿಗಳಲ್ಲೂ ಅರಗಿಸಲು
ಸಾಧ್ಯವಿಲ್ಲದ ನೋವು – ದುಃಖಗಲ್ಲೂ
ಕೊಟ್ಟಿದ್ದಾಳೆ ಭವಿಷ್ಯದ ಹೊಸ ಕನಸುಗಳನ್ನು..

ನನಸಾಗುವ ಹಾದಿಯಲ್ಲಿತ್ತು
ಆ ಕನಸುಗಳ ಗುಚ್ಛ
ತನ್ನಾಸೆಗಳ ಬದಿಗೊತ್ತಿ
ದುಡಿದಳು ನಿತ್ಯ ನಿರ್ಮಲೆಯಾಗಿ..

ಬತ್ತದಷ್ಟು ಬಯಕೆಗಳಿತ್ತು ಆ
ಕನಸುಗಳಲ್ಲಿ..ತಾನು ಮನಗಳಲ್ಲೂ
ಎಲ್ಲವನ್ನೂ ಅದುಮಿಟ್ಟಳು
ತನ್ನಂತರಂಗದ ಆಂತರ್ಯದಲ್ಲಿ..

ತನಗಾಗಿ ಹಿಗ್ಗಲ್ಲಿಲ್ಲ ಜಗ್ಗಲಿಲ್ಲ
ಹಿಗ್ಗಿದಳು ಕುಗ್ಗಿದಳು..ತನ್ನವರಿಗಾಗಿ
ಉಸಿರುಗಟ್ಟಿ ದುಡಿದಳು , ಶ್ರಮಿಸಿದಳು
ಎಂದೆಂದಿಗೂ ತನ್ನ ಕರುಳ ಬಳ್ಳಿಗಾಗಿ..

Advertisement

ಎಡೆಬಿಡದ ಕರ್ಮ , ಕ್ಲಿಷ್ಟ ಯಾತನೆಗಳ ಉದ್ದಕ್ಕೂ
ಬೀಳಲಿಲ್ಲ ಬದುಕ ಬಂಡಿ
ಕಣ್ಣುಗಳಲ್ಲಿತ್ತು ಕಾತುರಗಳ ಛಾಯೆ
ಕಾಯುತ್ತಿದ್ದಳು ಚೈತ್ರದ ಕ್ಷಣಕ್ಕಾಗಿ

ತುಂಬಿ ಹೋಗಿತ್ತು ಜೀವ , ಬದುಕು , ಉಸಿರು
ಎಲ್ಲವೂ ಒಂದೇ ಆಗಿತ್ತು
ಹೃದಯ – ಕಣ್ಣುಗಳೆರಡೂ ಬಯಸಿತ್ತು
ಕರುಳ ಕುಡಿಯ ಕನಸುಗಳ ಅಸ್ತಿತ್ವವನ್ನು..

# ನಯನ.ಜಿ.ಎಸ್. , ಕೋಟೆ ಮುಂಡುಗಾರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

1 hour ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

3 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

9 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

18 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

19 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

19 hours ago