ನನ್ನಮ್ಮ ಹೊತ್ತುಕೊಂಡಿದ್ದಾಳೆ ಕನಸುಗಳನ್ನು
ಹಿಡಿಯಲ್ಲಿ ಹಿಡಿಯದಷ್ಟು
ಹತ್ತಬಹುದು ಗಿರಿ ಶಿಖರಗಳನ್ನು
ಈಕೆಯ ಕನಸುಗಳಿವೆ ಹತ್ತಿ ಮುಗಿಯದಷ್ಟು..
ಬಡತನದ ಬೆವರಿನ ಹನಿಯೂ
ಪ್ರತಿ ನರನಾಡಿಗಳಲ್ಲೂ ಅರಗಿಸಲು
ಸಾಧ್ಯವಿಲ್ಲದ ನೋವು – ದುಃಖಗಲ್ಲೂ
ಕೊಟ್ಟಿದ್ದಾಳೆ ಭವಿಷ್ಯದ ಹೊಸ ಕನಸುಗಳನ್ನು..
ನನಸಾಗುವ ಹಾದಿಯಲ್ಲಿತ್ತು
ಆ ಕನಸುಗಳ ಗುಚ್ಛ
ತನ್ನಾಸೆಗಳ ಬದಿಗೊತ್ತಿ
ದುಡಿದಳು ನಿತ್ಯ ನಿರ್ಮಲೆಯಾಗಿ..
ಬತ್ತದಷ್ಟು ಬಯಕೆಗಳಿತ್ತು ಆ
ಕನಸುಗಳಲ್ಲಿ..ತಾನು ಮನಗಳಲ್ಲೂ
ಎಲ್ಲವನ್ನೂ ಅದುಮಿಟ್ಟಳು
ತನ್ನಂತರಂಗದ ಆಂತರ್ಯದಲ್ಲಿ..
ತನಗಾಗಿ ಹಿಗ್ಗಲ್ಲಿಲ್ಲ ಜಗ್ಗಲಿಲ್ಲ
ಹಿಗ್ಗಿದಳು ಕುಗ್ಗಿದಳು..ತನ್ನವರಿಗಾಗಿ
ಉಸಿರುಗಟ್ಟಿ ದುಡಿದಳು , ಶ್ರಮಿಸಿದಳು
ಎಂದೆಂದಿಗೂ ತನ್ನ ಕರುಳ ಬಳ್ಳಿಗಾಗಿ..
ಎಡೆಬಿಡದ ಕರ್ಮ , ಕ್ಲಿಷ್ಟ ಯಾತನೆಗಳ ಉದ್ದಕ್ಕೂ
ಬೀಳಲಿಲ್ಲ ಬದುಕ ಬಂಡಿ
ಕಣ್ಣುಗಳಲ್ಲಿತ್ತು ಕಾತುರಗಳ ಛಾಯೆ
ಕಾಯುತ್ತಿದ್ದಳು ಚೈತ್ರದ ಕ್ಷಣಕ್ಕಾಗಿ
ತುಂಬಿ ಹೋಗಿತ್ತು ಜೀವ , ಬದುಕು , ಉಸಿರು
ಎಲ್ಲವೂ ಒಂದೇ ಆಗಿತ್ತು
ಹೃದಯ – ಕಣ್ಣುಗಳೆರಡೂ ಬಯಸಿತ್ತು
ಕರುಳ ಕುಡಿಯ ಕನಸುಗಳ ಅಸ್ತಿತ್ವವನ್ನು..
# ನಯನ.ಜಿ.ಎಸ್. , ಕೋಟೆ ಮುಂಡುಗಾರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…