Advertisement
Share

ನನ್ನಮ್ಮ ಹೊತ್ತುಕೊಂಡಿದ್ದಾಳೆ ಕನಸುಗಳನ್ನು
ಹಿಡಿಯಲ್ಲಿ ಹಿಡಿಯದಷ್ಟು
ಹತ್ತಬಹುದು ಗಿರಿ ಶಿಖರಗಳನ್ನು
ಈಕೆಯ ಕನಸುಗಳಿವೆ ಹತ್ತಿ ಮುಗಿಯದಷ್ಟು..

ಬಡತನದ ಬೆವರಿನ ಹನಿಯೂ
ಪ್ರತಿ ನರನಾಡಿಗಳಲ್ಲೂ ಅರಗಿಸಲು
ಸಾಧ್ಯವಿಲ್ಲದ ನೋವು – ದುಃಖಗಲ್ಲೂ
ಕೊಟ್ಟಿದ್ದಾಳೆ ಭವಿಷ್ಯದ ಹೊಸ ಕನಸುಗಳನ್ನು..

ನನಸಾಗುವ ಹಾದಿಯಲ್ಲಿತ್ತು
ಆ ಕನಸುಗಳ ಗುಚ್ಛ
ತನ್ನಾಸೆಗಳ ಬದಿಗೊತ್ತಿ
ದುಡಿದಳು ನಿತ್ಯ ನಿರ್ಮಲೆಯಾಗಿ..

ಬತ್ತದಷ್ಟು ಬಯಕೆಗಳಿತ್ತು ಆ
ಕನಸುಗಳಲ್ಲಿ..ತಾನು ಮನಗಳಲ್ಲೂ
ಎಲ್ಲವನ್ನೂ ಅದುಮಿಟ್ಟಳು
ತನ್ನಂತರಂಗದ ಆಂತರ್ಯದಲ್ಲಿ..

ತನಗಾಗಿ ಹಿಗ್ಗಲ್ಲಿಲ್ಲ ಜಗ್ಗಲಿಲ್ಲ
ಹಿಗ್ಗಿದಳು ಕುಗ್ಗಿದಳು..ತನ್ನವರಿಗಾಗಿ
ಉಸಿರುಗಟ್ಟಿ ದುಡಿದಳು , ಶ್ರಮಿಸಿದಳು
ಎಂದೆಂದಿಗೂ ತನ್ನ ಕರುಳ ಬಳ್ಳಿಗಾಗಿ..

ಎಡೆಬಿಡದ ಕರ್ಮ , ಕ್ಲಿಷ್ಟ ಯಾತನೆಗಳ ಉದ್ದಕ್ಕೂ
ಬೀಳಲಿಲ್ಲ ಬದುಕ ಬಂಡಿ
ಕಣ್ಣುಗಳಲ್ಲಿತ್ತು ಕಾತುರಗಳ ಛಾಯೆ
ಕಾಯುತ್ತಿದ್ದಳು ಚೈತ್ರದ ಕ್ಷಣಕ್ಕಾಗಿ

ತುಂಬಿ ಹೋಗಿತ್ತು ಜೀವ , ಬದುಕು , ಉಸಿರು
ಎಲ್ಲವೂ ಒಂದೇ ಆಗಿತ್ತು
ಹೃದಯ – ಕಣ್ಣುಗಳೆರಡೂ ಬಯಸಿತ್ತು
ಕರುಳ ಕುಡಿಯ ಕನಸುಗಳ ಅಸ್ತಿತ್ವವನ್ನು..

# ನಯನ.ಜಿ.ಎಸ್. , ಕೋಟೆ ಮುಂಡುಗಾರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

12 minutes ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

20 minutes ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

13 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

14 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

14 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

19 hours ago