Advertisement
Share

ನನ್ನಮ್ಮ ಹೊತ್ತುಕೊಂಡಿದ್ದಾಳೆ ಕನಸುಗಳನ್ನು
ಹಿಡಿಯಲ್ಲಿ ಹಿಡಿಯದಷ್ಟು
ಹತ್ತಬಹುದು ಗಿರಿ ಶಿಖರಗಳನ್ನು
ಈಕೆಯ ಕನಸುಗಳಿವೆ ಹತ್ತಿ ಮುಗಿಯದಷ್ಟು..

Advertisement

ಬಡತನದ ಬೆವರಿನ ಹನಿಯೂ
ಪ್ರತಿ ನರನಾಡಿಗಳಲ್ಲೂ ಅರಗಿಸಲು
ಸಾಧ್ಯವಿಲ್ಲದ ನೋವು – ದುಃಖಗಲ್ಲೂ
ಕೊಟ್ಟಿದ್ದಾಳೆ ಭವಿಷ್ಯದ ಹೊಸ ಕನಸುಗಳನ್ನು..

ನನಸಾಗುವ ಹಾದಿಯಲ್ಲಿತ್ತು
ಆ ಕನಸುಗಳ ಗುಚ್ಛ
ತನ್ನಾಸೆಗಳ ಬದಿಗೊತ್ತಿ
ದುಡಿದಳು ನಿತ್ಯ ನಿರ್ಮಲೆಯಾಗಿ..

ಬತ್ತದಷ್ಟು ಬಯಕೆಗಳಿತ್ತು ಆ
ಕನಸುಗಳಲ್ಲಿ..ತಾನು ಮನಗಳಲ್ಲೂ
ಎಲ್ಲವನ್ನೂ ಅದುಮಿಟ್ಟಳು
ತನ್ನಂತರಂಗದ ಆಂತರ್ಯದಲ್ಲಿ..

ತನಗಾಗಿ ಹಿಗ್ಗಲ್ಲಿಲ್ಲ ಜಗ್ಗಲಿಲ್ಲ
ಹಿಗ್ಗಿದಳು ಕುಗ್ಗಿದಳು..ತನ್ನವರಿಗಾಗಿ
ಉಸಿರುಗಟ್ಟಿ ದುಡಿದಳು , ಶ್ರಮಿಸಿದಳು
ಎಂದೆಂದಿಗೂ ತನ್ನ ಕರುಳ ಬಳ್ಳಿಗಾಗಿ..

ಎಡೆಬಿಡದ ಕರ್ಮ , ಕ್ಲಿಷ್ಟ ಯಾತನೆಗಳ ಉದ್ದಕ್ಕೂ
ಬೀಳಲಿಲ್ಲ ಬದುಕ ಬಂಡಿ
ಕಣ್ಣುಗಳಲ್ಲಿತ್ತು ಕಾತುರಗಳ ಛಾಯೆ
ಕಾಯುತ್ತಿದ್ದಳು ಚೈತ್ರದ ಕ್ಷಣಕ್ಕಾಗಿ

ತುಂಬಿ ಹೋಗಿತ್ತು ಜೀವ , ಬದುಕು , ಉಸಿರು
ಎಲ್ಲವೂ ಒಂದೇ ಆಗಿತ್ತು
ಹೃದಯ – ಕಣ್ಣುಗಳೆರಡೂ ಬಯಸಿತ್ತು
ಕರುಳ ಕುಡಿಯ ಕನಸುಗಳ ಅಸ್ತಿತ್ವವನ್ನು..

# ನಯನ.ಜಿ.ಎಸ್. , ಕೋಟೆ ಮುಂಡುಗಾರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

23 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

2 days ago