Advertisement
Share

ನನ್ನಮ್ಮ ಹೊತ್ತುಕೊಂಡಿದ್ದಾಳೆ ಕನಸುಗಳನ್ನು
ಹಿಡಿಯಲ್ಲಿ ಹಿಡಿಯದಷ್ಟು
ಹತ್ತಬಹುದು ಗಿರಿ ಶಿಖರಗಳನ್ನು
ಈಕೆಯ ಕನಸುಗಳಿವೆ ಹತ್ತಿ ಮುಗಿಯದಷ್ಟು..

Advertisement
Advertisement

ಬಡತನದ ಬೆವರಿನ ಹನಿಯೂ
ಪ್ರತಿ ನರನಾಡಿಗಳಲ್ಲೂ ಅರಗಿಸಲು
ಸಾಧ್ಯವಿಲ್ಲದ ನೋವು – ದುಃಖಗಲ್ಲೂ
ಕೊಟ್ಟಿದ್ದಾಳೆ ಭವಿಷ್ಯದ ಹೊಸ ಕನಸುಗಳನ್ನು..

Advertisement

ನನಸಾಗುವ ಹಾದಿಯಲ್ಲಿತ್ತು
ಆ ಕನಸುಗಳ ಗುಚ್ಛ
ತನ್ನಾಸೆಗಳ ಬದಿಗೊತ್ತಿ
ದುಡಿದಳು ನಿತ್ಯ ನಿರ್ಮಲೆಯಾಗಿ..

ಬತ್ತದಷ್ಟು ಬಯಕೆಗಳಿತ್ತು ಆ
ಕನಸುಗಳಲ್ಲಿ..ತಾನು ಮನಗಳಲ್ಲೂ
ಎಲ್ಲವನ್ನೂ ಅದುಮಿಟ್ಟಳು
ತನ್ನಂತರಂಗದ ಆಂತರ್ಯದಲ್ಲಿ..

Advertisement

ತನಗಾಗಿ ಹಿಗ್ಗಲ್ಲಿಲ್ಲ ಜಗ್ಗಲಿಲ್ಲ
ಹಿಗ್ಗಿದಳು ಕುಗ್ಗಿದಳು..ತನ್ನವರಿಗಾಗಿ
ಉಸಿರುಗಟ್ಟಿ ದುಡಿದಳು , ಶ್ರಮಿಸಿದಳು
ಎಂದೆಂದಿಗೂ ತನ್ನ ಕರುಳ ಬಳ್ಳಿಗಾಗಿ..

ಎಡೆಬಿಡದ ಕರ್ಮ , ಕ್ಲಿಷ್ಟ ಯಾತನೆಗಳ ಉದ್ದಕ್ಕೂ
ಬೀಳಲಿಲ್ಲ ಬದುಕ ಬಂಡಿ
ಕಣ್ಣುಗಳಲ್ಲಿತ್ತು ಕಾತುರಗಳ ಛಾಯೆ
ಕಾಯುತ್ತಿದ್ದಳು ಚೈತ್ರದ ಕ್ಷಣಕ್ಕಾಗಿ

Advertisement

ತುಂಬಿ ಹೋಗಿತ್ತು ಜೀವ , ಬದುಕು , ಉಸಿರು
ಎಲ್ಲವೂ ಒಂದೇ ಆಗಿತ್ತು
ಹೃದಯ – ಕಣ್ಣುಗಳೆರಡೂ ಬಯಸಿತ್ತು
ಕರುಳ ಕುಡಿಯ ಕನಸುಗಳ ಅಸ್ತಿತ್ವವನ್ನು..

# ನಯನ.ಜಿ.ಎಸ್. , ಕೋಟೆ ಮುಂಡುಗಾರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

3 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

4 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

12 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

12 hours ago