ನನ್ನಮ್ಮ ಹೊತ್ತುಕೊಂಡಿದ್ದಾಳೆ ಕನಸುಗಳನ್ನು
ಹಿಡಿಯಲ್ಲಿ ಹಿಡಿಯದಷ್ಟು
ಹತ್ತಬಹುದು ಗಿರಿ ಶಿಖರಗಳನ್ನು
ಈಕೆಯ ಕನಸುಗಳಿವೆ ಹತ್ತಿ ಮುಗಿಯದಷ್ಟು..
ಬಡತನದ ಬೆವರಿನ ಹನಿಯೂ
ಪ್ರತಿ ನರನಾಡಿಗಳಲ್ಲೂ ಅರಗಿಸಲು
ಸಾಧ್ಯವಿಲ್ಲದ ನೋವು – ದುಃಖಗಲ್ಲೂ
ಕೊಟ್ಟಿದ್ದಾಳೆ ಭವಿಷ್ಯದ ಹೊಸ ಕನಸುಗಳನ್ನು..
ನನಸಾಗುವ ಹಾದಿಯಲ್ಲಿತ್ತು
ಆ ಕನಸುಗಳ ಗುಚ್ಛ
ತನ್ನಾಸೆಗಳ ಬದಿಗೊತ್ತಿ
ದುಡಿದಳು ನಿತ್ಯ ನಿರ್ಮಲೆಯಾಗಿ..
ಬತ್ತದಷ್ಟು ಬಯಕೆಗಳಿತ್ತು ಆ
ಕನಸುಗಳಲ್ಲಿ..ತಾನು ಮನಗಳಲ್ಲೂ
ಎಲ್ಲವನ್ನೂ ಅದುಮಿಟ್ಟಳು
ತನ್ನಂತರಂಗದ ಆಂತರ್ಯದಲ್ಲಿ..
ತನಗಾಗಿ ಹಿಗ್ಗಲ್ಲಿಲ್ಲ ಜಗ್ಗಲಿಲ್ಲ
ಹಿಗ್ಗಿದಳು ಕುಗ್ಗಿದಳು..ತನ್ನವರಿಗಾಗಿ
ಉಸಿರುಗಟ್ಟಿ ದುಡಿದಳು , ಶ್ರಮಿಸಿದಳು
ಎಂದೆಂದಿಗೂ ತನ್ನ ಕರುಳ ಬಳ್ಳಿಗಾಗಿ..
ಎಡೆಬಿಡದ ಕರ್ಮ , ಕ್ಲಿಷ್ಟ ಯಾತನೆಗಳ ಉದ್ದಕ್ಕೂ
ಬೀಳಲಿಲ್ಲ ಬದುಕ ಬಂಡಿ
ಕಣ್ಣುಗಳಲ್ಲಿತ್ತು ಕಾತುರಗಳ ಛಾಯೆ
ಕಾಯುತ್ತಿದ್ದಳು ಚೈತ್ರದ ಕ್ಷಣಕ್ಕಾಗಿ
ತುಂಬಿ ಹೋಗಿತ್ತು ಜೀವ , ಬದುಕು , ಉಸಿರು
ಎಲ್ಲವೂ ಒಂದೇ ಆಗಿತ್ತು
ಹೃದಯ – ಕಣ್ಣುಗಳೆರಡೂ ಬಯಸಿತ್ತು
ಕರುಳ ಕುಡಿಯ ಕನಸುಗಳ ಅಸ್ತಿತ್ವವನ್ನು..
# ನಯನ.ಜಿ.ಎಸ್. , ಕೋಟೆ ಮುಂಡುಗಾರು.
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…
ವಿವೇಕಾನಂದ ಎಚ್ ಕೆ ಅವರ ಬರಹ
ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್ ಆಳ್ವ ಅವರು ಬರೆದಿದ್ದಾರೆ.