ಪಂಜ:ಸುಪ್ರೀಂಕೋರ್ಟ್ ಆಯೋಧ್ಯಾ ಪ್ರಕರಣಕ್ಕೆ ನೀಡಿರುವಾ ಐತಿಹಾಸಿಕ ತೀರ್ಪನ್ನು ದೇಶದ ಜನರು ನಾನಾ ರೀತಿಯಲ್ಲಿ ಸ್ವಾಗತಿಸುತ್ತಿದ್ದರೆ, ಪಂಜದ ಯುವಕರು ವಿಶೇಷವಾಗಿ ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೊಳೆಂಜ ಪಂಜ ಮಾರ್ಗವಾಗಿ ನೆಲ್ಲಿಕಟ್ಟೆ ತನಕ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಪಂಜದಲ್ಲಿ ಸಿಹಿತಿಂಡಿ ಹಂಚಿ ಭಾವೈಕ್ಯತೆ ಮೆರೆದಿದ್ದಾರೆ.
ಅಯೋಧ್ಯ ವಿಚಾರವೂ ಸೌಹಾರ್ದಯುತವಾಗಿ ಮುಗಿದು ಎರಡು ಧರ್ಮದವರು ಶಾಂತಿ ಕಾಪಾಡಿಕೊಂಡು ಬಂದಂತಹ ಸಂದರ್ಭದಲ್ಲಿ ಪಂಜದ ಸಹೃದಯಿ ಹಿಂದೂ ಸಹೋದರರು ವಿಶೇಷವಾಗಿ ವಿಶೇಷ ರೀತಿಯಲ್ಲಿ ಸಂಭ್ರಮಾಚರಣೆಗೈದು ಆದರ್ಶಪ್ರಾಯರಾಗಿದ್ದಾರೆ.
ಈ ಸಂದರ್ಭದಲ್ಲಿ ಆಶಿತ್ ಕಲ್ಲಾಜೆ, ನಿಧೀಶ್ ಕಕ್ಯಾನ, ರಮೇಶ್ ಪುತ್ಯ ಪಂಜ ಬದ್ರಿಯಾ ಜುಮ್ಮಾ ಮಸೀದಿಯ ಗುರುಗಳಾದ ಝಿಯಾದ್ ಸಾಕಫಿ ಮತ್ತು ಅಧ್ಯಕ್ಷರಾದ ಉಮರ್ ಸಿಗೆಯಾಡಿ, ಅಬ್ಬಾಸ್ ಮುಸ್ಲಿಯಾರ್, ರಫೀಕ್ ಕಬಕ ಮತ್ತು ಸಿದ್ಧೀಕ್ ಪೊಳೆಂಜ, ಚಂದ್ರಶೇಖರ ಕರಿಮಜಲು ದಯಾನಂದ ಏಣ್ಮೂರು, ರೋಹಿತ್ ಚೀಮುಳ್ಳು, ಉದಯ ಪಲ್ಲೋಡಿ, ಭರತ್ ಪಂಜ, ವಸಂತ ಅಡ್ಕ, ರಂಜಿತ್ ಪಂಜ, ಕೀರ್ತನ್ ಪಲ್ಲೋಡಿ ಹಾಗೂ ನೂರಾರು ಮಂದಿ ಉಪಸ್ಥಿತರಿದ್ದರು.
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…