Advertisement
ಸುದ್ದಿಗಳು

ಅಯೋಧ್ಯಾ ತೀರ್ಪಿಗಾಗಿ ಪಂಜದಲ್ಲಿ ಮುಸ್ಲಿಂ ಬಾಂಧವರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಯುವಕರು

Share

ಪಂಜ:ಸುಪ್ರೀಂಕೋರ್ಟ್ ಆಯೋಧ್ಯಾ ಪ್ರಕರಣಕ್ಕೆ ನೀಡಿರುವಾ ಐತಿಹಾಸಿಕ ತೀರ್ಪನ್ನು ದೇಶದ ಜನರು ನಾನಾ ರೀತಿಯಲ್ಲಿ ಸ್ವಾಗತಿಸುತ್ತಿದ್ದರೆ, ಪಂಜದ ಯುವಕರು ವಿಶೇಷವಾಗಿ ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೊಳೆಂಜ ಪಂಜ ಮಾರ್ಗವಾಗಿ ನೆಲ್ಲಿಕಟ್ಟೆ ತನಕ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಪಂಜದಲ್ಲಿ ಸಿಹಿತಿಂಡಿ ಹಂಚಿ ಭಾವೈಕ್ಯತೆ ಮೆರೆದಿದ್ದಾರೆ.

ಅಯೋಧ್ಯ ವಿಚಾರವೂ ಸೌಹಾರ್ದಯುತವಾಗಿ ಮುಗಿದು ಎರಡು ಧರ್ಮದವರು  ಶಾಂತಿ ಕಾಪಾಡಿಕೊಂಡು ಬಂದಂತಹ ಸಂದರ್ಭದಲ್ಲಿ ಪಂಜದ ಸಹೃದಯಿ ಹಿಂದೂ ಸಹೋದರರು ವಿಶೇಷವಾಗಿ ವಿಶೇಷ ರೀತಿಯಲ್ಲಿ ಸಂಭ್ರಮಾಚರಣೆಗೈದು ಆದರ್ಶಪ್ರಾಯರಾಗಿದ್ದಾರೆ.

ಈ ಸಂದರ್ಭದಲ್ಲಿ ಆಶಿತ್ ಕಲ್ಲಾಜೆ, ನಿಧೀಶ್ ಕಕ್ಯಾನ, ರಮೇಶ್ ಪುತ್ಯ ಪಂಜ ಬದ್ರಿಯಾ ಜುಮ್ಮಾ ಮಸೀದಿಯ ಗುರುಗಳಾದ ಝಿಯಾದ್ ಸಾಕಫಿ ಮತ್ತು ಅಧ್ಯಕ್ಷರಾದ ಉಮರ್ ಸಿಗೆಯಾಡಿ, ಅಬ್ಬಾಸ್ ಮುಸ್ಲಿಯಾರ್, ರಫೀಕ್ ಕಬಕ ಮತ್ತು ಸಿದ್ಧೀಕ್ ಪೊಳೆಂಜ, ಚಂದ್ರಶೇಖರ ಕರಿಮಜಲು ದಯಾನಂದ ಏಣ್ಮೂರು, ರೋಹಿತ್ ಚೀಮುಳ್ಳು, ಉದಯ ಪಲ್ಲೋಡಿ, ಭರತ್ ಪಂಜ, ವಸಂತ ಅಡ್ಕ, ರಂಜಿತ್ ಪಂಜ, ಕೀರ್ತನ್ ಪಲ್ಲೋಡಿ ಹಾಗೂ ನೂರಾರು ಮಂದಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

5 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

5 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

10 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

11 hours ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

1 day ago