ಸುಳ್ಯ: ಬಾಬರಿ ಮಸೀದಿ -ರಾಮಮಂದಿರ ವಿವಾದ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಬಂದಿರುವ ಹಿನ್ನಲೆಯಲ್ಲಿ ತೀರ್ಪಿನ್ನು ಗೌರವಿಸಿ ಸಮಾಜದಲ್ಲಿ ಶಾಂತಿ ಕಾಪಾಡುವಂತೆ ಸುಳ್ಯ ತಾಲೂಕಿನ ಎಲ್ಲಾ ಮೊಹಲ್ಲಾಗಳು ಮತ್ತು ಜಮಾಅತ್ ವ್ಯಾಪ್ತಿಗಳಲ್ಲಿ ಜಾಗೃತಿ ಮೂಡಿಸುವಂತೆ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಿಕ್ಷಣ ಕ್ಷೇತ್ರದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿರುವ, ಪ್ರಮುಖ ವಾಣಿಜ್ಯ ಕೇಂದ್ರವೂ ಆಗಿರುವ ಪ್ರಸಿದ್ಧ ಧಾರ್ಮಿಕ ಕೇಂದ್ರಗಳನ್ನು ಹೊಂದಿರುವ ಸುಳ್ಯವು ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಜಾತಿ, ಪಕ್ಷ ಬೇಧವಿಲ್ಲದೆ ಪರಸ್ಪರ ಪ್ರೀತಿ ವಿಶ್ವಾಸದಿಂದ ನಡೆಯುತ್ತಿರುವ ಸುಳ್ಯ ತಾಲೂಕು ಮುಂದೆಯೂ ಅದೇ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯು ತಮ್ಮ ಜಮಾಅತ್ನಲ್ಲಿ ಬಾಬರಿ ಮಸೀದಿ, ರಾಮಮಂದಿರ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಗೌರವಿಸಬೇಕು. ಆ ಮೂಲಕ ಸಮಾಜದಲ್ಲಿ ಶಾಂತಿ, ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು. ಶಾಂತಿ ಸೌಹಾರ್ದತೆ, ಸಾಮರಸ್ಯ ಹಾಗೂ ಭಾವೈಕ್ಯತೆಯ ಸಂದೇಶ ಸಾರಿದ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಾಫರವರ ಜನ್ಮದಿನಾಚರಣೆಯನ್ನು ಆಚರಿಸುವ ರಬೀವುಲ್ ಔವ್ವಲ್ ತಿಂಗಳಲ್ಲಿ ಪ್ರವಾದಿ ಆದರ್ಶದೊಂದಿಗೆ ನಾವು ಇತರರಿಗೆ ಮಾದರಿಯಾಗಬೇಕು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ವಕ್ಫ್ ಬೋರ್ಡ್ ಸಮಿತಿ ಸದಸ್ಯ ಕೆ.ಎಂ.ಮುಸ್ತಫಾ, ಕರ್ನಾಟಕ ಮುಸ್ಲಿಂ ಜಮಾಅತ್ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಕದಿಕಡ್ಕ, ಉಪಾಧ್ಯಕ್ಷರುಗಳಾದ ಪಿ.ಎ.ಮಹ್ಮದ್, ಇಕ್ಬಾಲ್ ಎಲಿಮಲೆ, ಕೋಶಾಧಿಕಾರಿ ಎಸ್.ಎ.ಮೊಯಿದ್ದೀನ್, ಪ್ರಧಾನ ಕಾರ್ಯದರ್ಶಿ ಹಸೈನಾರ್ ಜಯನಗರ ಉಪಸ್ಥಿತರಿದ್ದರು.
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…