Advertisement
MIRROR FOCUS

ಅಯೋಧ್ಯೆ ತೀರ್ಪಿಗೆ ಕ್ಷಣಗಣನೆ : ದೇಶದಲ್ಲಿ ಇಂದಿನಿಂದ ಹೊಸ ಅಧ್ಯಾಯ : ಇನ್ನು ಸಾಮರಸ್ಯದ ಪರೀಕ್ಷೆ….

Share

ಶತಮಾನದ ವಿವಾದಕ್ಕೆ ಇಂದು ತೆರೆ ಬೀಳಲಿದೆ. ಅಯೋಧ್ಯೆ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಸಿಜೆಐ ರಂಜನ್ ಗೊಗಾಯ್ ನೇತೃತ್ವದ ಪಂಚ ಪೀಠ ಇಂದು 10.30ಕ್ಕೆ ಐತಿಹಾಸಿಕ ತೀರ್ಪನ್ನು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ  ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ತೀರ್ಪಿನ ಬಳಿಕ ಸಾಮರಸ್ಯದ ಪರ್ವ ದೇಶದಲ್ಲಿ  ಆರಂಭವಾಗಲಿದೆ ಎಂದು ಧಾರ್ಮಿಕ ಮುಖಂಡರು ಈಗ ಭರವಸೆ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯ ಈ ವಿವಾದಿತ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ 1885 ರಲ್ಲಿ ಮೊದಲ ಬಾರಿಗೆ ಚರ್ಚೆ ಆರಂಭವಾಗಿತ್ತು. ಹೀಗಾಗಿ ಸುಮಾರು 135 ವರ್ಷ ವರ್ಷಗಳಿಂದಲೂ ಈ ವಿವಾದ ನಡೆಯುತ್ತಿದ್ದರೂ,  ಸದ್ಯ ಸುಮಾರು 70 ವರ್ಷಗಳಿಂದ ನ್ಯಾಯಾಲಯದಲ್ಲಿ ವಾದ-ವಿವಾದ ನಡೆಯುತ್ತಿದೆ.

ವಿವಾದದ ಕೇಂದ್ರ ಬಿಂದುವಾಗಿರುವ 2.77 ಎಕರೆ ಪ್ರದೇಶದ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ನ  ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾ.ಎಸ್.ಎ.ಬೋಬ್ಡೆ, ಡಿ. ವೈ.ಚಂದ್ರಚೂಡ್, ನ್ಯಾ.ಅಶೋಕ್ ಭೂಷಣ್ ಮತ್ತು ಎಸ್.ಅಬ್ದುಲ್ ನಜೀರ್ ಅವನ್ನೊಳಗೊಂಡ ಸಾಂವಿಧಾನಿಕ ಪೀಠವು ಪ್ರಕಟಿಸಲಿದೆ.  ಈ ಪ್ರಕರಣದ ಸಂಬಂಧ 40 ದಿನಗಳ ಕಾಲ ಸುಧೀರ್ಘ ವಿಚಾರಣೆ ನಡೆಸಿದ್ದ ಪೀಠವು ಪ್ರಕಟಿಸುವ ತೀರ್ಪು ಮಹತ್ವ ಪಡೆದಿದೆ.

ಈ ಹಿಂದೆ 2010 ರಲ್ಲಿ ಅಲಹಬಾದ್ ಹೈಕೋರ್ಟ್, ಅಯೋಧ್ಯೆಯಲ್ಲಿನ 2.77 ಎಕರೆ ವಿವಾದಿತ ಭೂಮಿಯನ್ನು ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರಾ ಹಾಗೂ ರಾಮ್ ಲಲ್ಲಾ ನಡುವೆ ಸಮಾನವಾಗಿ ಹಂಚಿಕೆ ಮಾಡಲು ಅಲಹಬಾದ್ ಹೈಕೋರ್ಟ್ ಆದೇಶಿಸಿತ್ತು. ಈ  ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆ ನಡೆದಿತ್ತು.

ವಿವಾದದ ಸಂಕ್ಷಿಪ್ತ ವಿವರ :

ಅಯೋಧ್ಯೆಯು ಹಿಂದೂ ಆರಾಧ್ಯ ದೇವರು ರಾಮನ ಜನ್ಮಭೂಮಿ. ಇಲ್ಲಿ  ರಾಮನ ದೇವಸ್ಥಾನವೂ ಇದೆ ಎಂಬುದು ನಂಬಿಕೆ ಹಾಗೂ ಪುರಾಣಗಳ ಉಲ್ಲೇಖ. ಆದರೆ  ಮೊಘಲ್ ದೊರೆ ಬಾಬರ್ 1528 ರಲ್ಲಿ ಈ ದೇವಸ್ಥಾನದ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿ ಅಲ್ಲಿ ಮಸೀದಿ ನಿರ್ಮಾಣ ಮಾಡಿದ್ದು ಇದು ಬಾಬರೀ ಮಸೀದಿ ಎಂದು ಹೇಳಲಾಗುತ್ತದೆ. ಈ ಪ್ರದೇಶವು ಉತ್ತರ ಪ್ರದೇಶ ರಾಜ್ಯದ ಫೈಜಾಬಾದ್ ಜಿಲ್ಲೆಯಲ್ಲಿದೆ. ಈ ಜಾಗದಲ್ಲಿ  ದೇವಸ್ಥಾನ ನಿರ್ಮಾಣ ಹಾಗೂ ಮಸೀದಿ ಮತ್ತು ಜಾಗಕ್ಕೆ ಸಂಬಂಧಿಸಿ ವಿವಾದ ಆರಂಭವಾಗಿತ್ತು. 1992 ರ ಡಿಸೆಂಬರ್ 6 ರಂದು ರಾಮ ಕರಸೇವಕರು ಈ ಮಸೀದಿ  ಕೆಡವಿ ಹಾಕಿದರು. ಆ ಬಳಿಕವೂ  2.77 ಎಕರೆ ಭೂಮಿ ಇಷ್ಟು ವರ್ಷಗಳ ಕಾಲ ವಿವಾದದ ಕೇಂದ್ರಬಿಂದುವಾಗಿತ್ತು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

9 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

14 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

18 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

22 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago