Advertisement
MIRROR FOCUS

ಅಯೋಧ್ಯೆ ತೀರ್ಪಿಗೆ ಕ್ಷಣಗಣನೆ : ದೇಶದಲ್ಲಿ ಇಂದಿನಿಂದ ಹೊಸ ಅಧ್ಯಾಯ : ಇನ್ನು ಸಾಮರಸ್ಯದ ಪರೀಕ್ಷೆ….

Share

ಶತಮಾನದ ವಿವಾದಕ್ಕೆ ಇಂದು ತೆರೆ ಬೀಳಲಿದೆ. ಅಯೋಧ್ಯೆ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಸಿಜೆಐ ರಂಜನ್ ಗೊಗಾಯ್ ನೇತೃತ್ವದ ಪಂಚ ಪೀಠ ಇಂದು 10.30ಕ್ಕೆ ಐತಿಹಾಸಿಕ ತೀರ್ಪನ್ನು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ  ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ತೀರ್ಪಿನ ಬಳಿಕ ಸಾಮರಸ್ಯದ ಪರ್ವ ದೇಶದಲ್ಲಿ  ಆರಂಭವಾಗಲಿದೆ ಎಂದು ಧಾರ್ಮಿಕ ಮುಖಂಡರು ಈಗ ಭರವಸೆ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯ ಈ ವಿವಾದಿತ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ 1885 ರಲ್ಲಿ ಮೊದಲ ಬಾರಿಗೆ ಚರ್ಚೆ ಆರಂಭವಾಗಿತ್ತು. ಹೀಗಾಗಿ ಸುಮಾರು 135 ವರ್ಷ ವರ್ಷಗಳಿಂದಲೂ ಈ ವಿವಾದ ನಡೆಯುತ್ತಿದ್ದರೂ,  ಸದ್ಯ ಸುಮಾರು 70 ವರ್ಷಗಳಿಂದ ನ್ಯಾಯಾಲಯದಲ್ಲಿ ವಾದ-ವಿವಾದ ನಡೆಯುತ್ತಿದೆ.

ವಿವಾದದ ಕೇಂದ್ರ ಬಿಂದುವಾಗಿರುವ 2.77 ಎಕರೆ ಪ್ರದೇಶದ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ನ  ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾ.ಎಸ್.ಎ.ಬೋಬ್ಡೆ, ಡಿ. ವೈ.ಚಂದ್ರಚೂಡ್, ನ್ಯಾ.ಅಶೋಕ್ ಭೂಷಣ್ ಮತ್ತು ಎಸ್.ಅಬ್ದುಲ್ ನಜೀರ್ ಅವನ್ನೊಳಗೊಂಡ ಸಾಂವಿಧಾನಿಕ ಪೀಠವು ಪ್ರಕಟಿಸಲಿದೆ.  ಈ ಪ್ರಕರಣದ ಸಂಬಂಧ 40 ದಿನಗಳ ಕಾಲ ಸುಧೀರ್ಘ ವಿಚಾರಣೆ ನಡೆಸಿದ್ದ ಪೀಠವು ಪ್ರಕಟಿಸುವ ತೀರ್ಪು ಮಹತ್ವ ಪಡೆದಿದೆ.

ಈ ಹಿಂದೆ 2010 ರಲ್ಲಿ ಅಲಹಬಾದ್ ಹೈಕೋರ್ಟ್, ಅಯೋಧ್ಯೆಯಲ್ಲಿನ 2.77 ಎಕರೆ ವಿವಾದಿತ ಭೂಮಿಯನ್ನು ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರಾ ಹಾಗೂ ರಾಮ್ ಲಲ್ಲಾ ನಡುವೆ ಸಮಾನವಾಗಿ ಹಂಚಿಕೆ ಮಾಡಲು ಅಲಹಬಾದ್ ಹೈಕೋರ್ಟ್ ಆದೇಶಿಸಿತ್ತು. ಈ  ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆ ನಡೆದಿತ್ತು.

ವಿವಾದದ ಸಂಕ್ಷಿಪ್ತ ವಿವರ :

ಅಯೋಧ್ಯೆಯು ಹಿಂದೂ ಆರಾಧ್ಯ ದೇವರು ರಾಮನ ಜನ್ಮಭೂಮಿ. ಇಲ್ಲಿ  ರಾಮನ ದೇವಸ್ಥಾನವೂ ಇದೆ ಎಂಬುದು ನಂಬಿಕೆ ಹಾಗೂ ಪುರಾಣಗಳ ಉಲ್ಲೇಖ. ಆದರೆ  ಮೊಘಲ್ ದೊರೆ ಬಾಬರ್ 1528 ರಲ್ಲಿ ಈ ದೇವಸ್ಥಾನದ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿ ಅಲ್ಲಿ ಮಸೀದಿ ನಿರ್ಮಾಣ ಮಾಡಿದ್ದು ಇದು ಬಾಬರೀ ಮಸೀದಿ ಎಂದು ಹೇಳಲಾಗುತ್ತದೆ. ಈ ಪ್ರದೇಶವು ಉತ್ತರ ಪ್ರದೇಶ ರಾಜ್ಯದ ಫೈಜಾಬಾದ್ ಜಿಲ್ಲೆಯಲ್ಲಿದೆ. ಈ ಜಾಗದಲ್ಲಿ  ದೇವಸ್ಥಾನ ನಿರ್ಮಾಣ ಹಾಗೂ ಮಸೀದಿ ಮತ್ತು ಜಾಗಕ್ಕೆ ಸಂಬಂಧಿಸಿ ವಿವಾದ ಆರಂಭವಾಗಿತ್ತು. 1992 ರ ಡಿಸೆಂಬರ್ 6 ರಂದು ರಾಮ ಕರಸೇವಕರು ಈ ಮಸೀದಿ  ಕೆಡವಿ ಹಾಕಿದರು. ಆ ಬಳಿಕವೂ  2.77 ಎಕರೆ ಭೂಮಿ ಇಷ್ಟು ವರ್ಷಗಳ ಕಾಲ ವಿವಾದದ ಕೇಂದ್ರಬಿಂದುವಾಗಿತ್ತು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

2 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

15 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago