Advertisement
MIRROR FOCUS

ಅಯೋಧ್ಯೆ ತೀರ್ಪಿಗೆ ಕ್ಷಣಗಣನೆ : ದೇಶದಲ್ಲಿ ಇಂದಿನಿಂದ ಹೊಸ ಅಧ್ಯಾಯ : ಇನ್ನು ಸಾಮರಸ್ಯದ ಪರೀಕ್ಷೆ….

Share

ಶತಮಾನದ ವಿವಾದಕ್ಕೆ ಇಂದು ತೆರೆ ಬೀಳಲಿದೆ. ಅಯೋಧ್ಯೆ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಸಿಜೆಐ ರಂಜನ್ ಗೊಗಾಯ್ ನೇತೃತ್ವದ ಪಂಚ ಪೀಠ ಇಂದು 10.30ಕ್ಕೆ ಐತಿಹಾಸಿಕ ತೀರ್ಪನ್ನು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ  ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ತೀರ್ಪಿನ ಬಳಿಕ ಸಾಮರಸ್ಯದ ಪರ್ವ ದೇಶದಲ್ಲಿ  ಆರಂಭವಾಗಲಿದೆ ಎಂದು ಧಾರ್ಮಿಕ ಮುಖಂಡರು ಈಗ ಭರವಸೆ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯ ಈ ವಿವಾದಿತ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ 1885 ರಲ್ಲಿ ಮೊದಲ ಬಾರಿಗೆ ಚರ್ಚೆ ಆರಂಭವಾಗಿತ್ತು. ಹೀಗಾಗಿ ಸುಮಾರು 135 ವರ್ಷ ವರ್ಷಗಳಿಂದಲೂ ಈ ವಿವಾದ ನಡೆಯುತ್ತಿದ್ದರೂ,  ಸದ್ಯ ಸುಮಾರು 70 ವರ್ಷಗಳಿಂದ ನ್ಯಾಯಾಲಯದಲ್ಲಿ ವಾದ-ವಿವಾದ ನಡೆಯುತ್ತಿದೆ.

ವಿವಾದದ ಕೇಂದ್ರ ಬಿಂದುವಾಗಿರುವ 2.77 ಎಕರೆ ಪ್ರದೇಶದ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ನ  ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾ.ಎಸ್.ಎ.ಬೋಬ್ಡೆ, ಡಿ. ವೈ.ಚಂದ್ರಚೂಡ್, ನ್ಯಾ.ಅಶೋಕ್ ಭೂಷಣ್ ಮತ್ತು ಎಸ್.ಅಬ್ದುಲ್ ನಜೀರ್ ಅವನ್ನೊಳಗೊಂಡ ಸಾಂವಿಧಾನಿಕ ಪೀಠವು ಪ್ರಕಟಿಸಲಿದೆ.  ಈ ಪ್ರಕರಣದ ಸಂಬಂಧ 40 ದಿನಗಳ ಕಾಲ ಸುಧೀರ್ಘ ವಿಚಾರಣೆ ನಡೆಸಿದ್ದ ಪೀಠವು ಪ್ರಕಟಿಸುವ ತೀರ್ಪು ಮಹತ್ವ ಪಡೆದಿದೆ.

ಈ ಹಿಂದೆ 2010 ರಲ್ಲಿ ಅಲಹಬಾದ್ ಹೈಕೋರ್ಟ್, ಅಯೋಧ್ಯೆಯಲ್ಲಿನ 2.77 ಎಕರೆ ವಿವಾದಿತ ಭೂಮಿಯನ್ನು ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರಾ ಹಾಗೂ ರಾಮ್ ಲಲ್ಲಾ ನಡುವೆ ಸಮಾನವಾಗಿ ಹಂಚಿಕೆ ಮಾಡಲು ಅಲಹಬಾದ್ ಹೈಕೋರ್ಟ್ ಆದೇಶಿಸಿತ್ತು. ಈ  ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆ ನಡೆದಿತ್ತು.

ವಿವಾದದ ಸಂಕ್ಷಿಪ್ತ ವಿವರ :

ಅಯೋಧ್ಯೆಯು ಹಿಂದೂ ಆರಾಧ್ಯ ದೇವರು ರಾಮನ ಜನ್ಮಭೂಮಿ. ಇಲ್ಲಿ  ರಾಮನ ದೇವಸ್ಥಾನವೂ ಇದೆ ಎಂಬುದು ನಂಬಿಕೆ ಹಾಗೂ ಪುರಾಣಗಳ ಉಲ್ಲೇಖ. ಆದರೆ  ಮೊಘಲ್ ದೊರೆ ಬಾಬರ್ 1528 ರಲ್ಲಿ ಈ ದೇವಸ್ಥಾನದ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿ ಅಲ್ಲಿ ಮಸೀದಿ ನಿರ್ಮಾಣ ಮಾಡಿದ್ದು ಇದು ಬಾಬರೀ ಮಸೀದಿ ಎಂದು ಹೇಳಲಾಗುತ್ತದೆ. ಈ ಪ್ರದೇಶವು ಉತ್ತರ ಪ್ರದೇಶ ರಾಜ್ಯದ ಫೈಜಾಬಾದ್ ಜಿಲ್ಲೆಯಲ್ಲಿದೆ. ಈ ಜಾಗದಲ್ಲಿ  ದೇವಸ್ಥಾನ ನಿರ್ಮಾಣ ಹಾಗೂ ಮಸೀದಿ ಮತ್ತು ಜಾಗಕ್ಕೆ ಸಂಬಂಧಿಸಿ ವಿವಾದ ಆರಂಭವಾಗಿತ್ತು. 1992 ರ ಡಿಸೆಂಬರ್ 6 ರಂದು ರಾಮ ಕರಸೇವಕರು ಈ ಮಸೀದಿ  ಕೆಡವಿ ಹಾಕಿದರು. ಆ ಬಳಿಕವೂ  2.77 ಎಕರೆ ಭೂಮಿ ಇಷ್ಟು ವರ್ಷಗಳ ಕಾಲ ವಿವಾದದ ಕೇಂದ್ರಬಿಂದುವಾಗಿತ್ತು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

8 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

24 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago