Advertisement
MIRROR FOCUS

ಅಯೋಧ್ಯೆ ತೀರ್ಪಿಗೆ ಕ್ಷಣಗಣನೆ : ದೇಶದಲ್ಲಿ ಇಂದಿನಿಂದ ಹೊಸ ಅಧ್ಯಾಯ : ಇನ್ನು ಸಾಮರಸ್ಯದ ಪರೀಕ್ಷೆ….

Share

ಶತಮಾನದ ವಿವಾದಕ್ಕೆ ಇಂದು ತೆರೆ ಬೀಳಲಿದೆ. ಅಯೋಧ್ಯೆ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಸಿಜೆಐ ರಂಜನ್ ಗೊಗಾಯ್ ನೇತೃತ್ವದ ಪಂಚ ಪೀಠ ಇಂದು 10.30ಕ್ಕೆ ಐತಿಹಾಸಿಕ ತೀರ್ಪನ್ನು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ  ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ತೀರ್ಪಿನ ಬಳಿಕ ಸಾಮರಸ್ಯದ ಪರ್ವ ದೇಶದಲ್ಲಿ  ಆರಂಭವಾಗಲಿದೆ ಎಂದು ಧಾರ್ಮಿಕ ಮುಖಂಡರು ಈಗ ಭರವಸೆ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯ ಈ ವಿವಾದಿತ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ 1885 ರಲ್ಲಿ ಮೊದಲ ಬಾರಿಗೆ ಚರ್ಚೆ ಆರಂಭವಾಗಿತ್ತು. ಹೀಗಾಗಿ ಸುಮಾರು 135 ವರ್ಷ ವರ್ಷಗಳಿಂದಲೂ ಈ ವಿವಾದ ನಡೆಯುತ್ತಿದ್ದರೂ,  ಸದ್ಯ ಸುಮಾರು 70 ವರ್ಷಗಳಿಂದ ನ್ಯಾಯಾಲಯದಲ್ಲಿ ವಾದ-ವಿವಾದ ನಡೆಯುತ್ತಿದೆ.

ವಿವಾದದ ಕೇಂದ್ರ ಬಿಂದುವಾಗಿರುವ 2.77 ಎಕರೆ ಪ್ರದೇಶದ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ನ  ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾ.ಎಸ್.ಎ.ಬೋಬ್ಡೆ, ಡಿ. ವೈ.ಚಂದ್ರಚೂಡ್, ನ್ಯಾ.ಅಶೋಕ್ ಭೂಷಣ್ ಮತ್ತು ಎಸ್.ಅಬ್ದುಲ್ ನಜೀರ್ ಅವನ್ನೊಳಗೊಂಡ ಸಾಂವಿಧಾನಿಕ ಪೀಠವು ಪ್ರಕಟಿಸಲಿದೆ.  ಈ ಪ್ರಕರಣದ ಸಂಬಂಧ 40 ದಿನಗಳ ಕಾಲ ಸುಧೀರ್ಘ ವಿಚಾರಣೆ ನಡೆಸಿದ್ದ ಪೀಠವು ಪ್ರಕಟಿಸುವ ತೀರ್ಪು ಮಹತ್ವ ಪಡೆದಿದೆ.

ಈ ಹಿಂದೆ 2010 ರಲ್ಲಿ ಅಲಹಬಾದ್ ಹೈಕೋರ್ಟ್, ಅಯೋಧ್ಯೆಯಲ್ಲಿನ 2.77 ಎಕರೆ ವಿವಾದಿತ ಭೂಮಿಯನ್ನು ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರಾ ಹಾಗೂ ರಾಮ್ ಲಲ್ಲಾ ನಡುವೆ ಸಮಾನವಾಗಿ ಹಂಚಿಕೆ ಮಾಡಲು ಅಲಹಬಾದ್ ಹೈಕೋರ್ಟ್ ಆದೇಶಿಸಿತ್ತು. ಈ  ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆ ನಡೆದಿತ್ತು.

ವಿವಾದದ ಸಂಕ್ಷಿಪ್ತ ವಿವರ :

ಅಯೋಧ್ಯೆಯು ಹಿಂದೂ ಆರಾಧ್ಯ ದೇವರು ರಾಮನ ಜನ್ಮಭೂಮಿ. ಇಲ್ಲಿ  ರಾಮನ ದೇವಸ್ಥಾನವೂ ಇದೆ ಎಂಬುದು ನಂಬಿಕೆ ಹಾಗೂ ಪುರಾಣಗಳ ಉಲ್ಲೇಖ. ಆದರೆ  ಮೊಘಲ್ ದೊರೆ ಬಾಬರ್ 1528 ರಲ್ಲಿ ಈ ದೇವಸ್ಥಾನದ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿ ಅಲ್ಲಿ ಮಸೀದಿ ನಿರ್ಮಾಣ ಮಾಡಿದ್ದು ಇದು ಬಾಬರೀ ಮಸೀದಿ ಎಂದು ಹೇಳಲಾಗುತ್ತದೆ. ಈ ಪ್ರದೇಶವು ಉತ್ತರ ಪ್ರದೇಶ ರಾಜ್ಯದ ಫೈಜಾಬಾದ್ ಜಿಲ್ಲೆಯಲ್ಲಿದೆ. ಈ ಜಾಗದಲ್ಲಿ  ದೇವಸ್ಥಾನ ನಿರ್ಮಾಣ ಹಾಗೂ ಮಸೀದಿ ಮತ್ತು ಜಾಗಕ್ಕೆ ಸಂಬಂಧಿಸಿ ವಿವಾದ ಆರಂಭವಾಗಿತ್ತು. 1992 ರ ಡಿಸೆಂಬರ್ 6 ರಂದು ರಾಮ ಕರಸೇವಕರು ಈ ಮಸೀದಿ  ಕೆಡವಿ ಹಾಕಿದರು. ಆ ಬಳಿಕವೂ  2.77 ಎಕರೆ ಭೂಮಿ ಇಷ್ಟು ವರ್ಷಗಳ ಕಾಲ ವಿವಾದದ ಕೇಂದ್ರಬಿಂದುವಾಗಿತ್ತು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

4 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

12 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

13 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

14 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago