Advertisement
MIRROR FOCUS

ಅಯೋಧ್ಯೆ ತೀರ್ಪಿಗೆ ಕ್ಷಣಗಣನೆ : ದೇಶದಲ್ಲಿ ಇಂದಿನಿಂದ ಹೊಸ ಅಧ್ಯಾಯ : ಇನ್ನು ಸಾಮರಸ್ಯದ ಪರೀಕ್ಷೆ….

Share

ಶತಮಾನದ ವಿವಾದಕ್ಕೆ ಇಂದು ತೆರೆ ಬೀಳಲಿದೆ. ಅಯೋಧ್ಯೆ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಸಿಜೆಐ ರಂಜನ್ ಗೊಗಾಯ್ ನೇತೃತ್ವದ ಪಂಚ ಪೀಠ ಇಂದು 10.30ಕ್ಕೆ ಐತಿಹಾಸಿಕ ತೀರ್ಪನ್ನು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ  ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ತೀರ್ಪಿನ ಬಳಿಕ ಸಾಮರಸ್ಯದ ಪರ್ವ ದೇಶದಲ್ಲಿ  ಆರಂಭವಾಗಲಿದೆ ಎಂದು ಧಾರ್ಮಿಕ ಮುಖಂಡರು ಈಗ ಭರವಸೆ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯ ಈ ವಿವಾದಿತ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ 1885 ರಲ್ಲಿ ಮೊದಲ ಬಾರಿಗೆ ಚರ್ಚೆ ಆರಂಭವಾಗಿತ್ತು. ಹೀಗಾಗಿ ಸುಮಾರು 135 ವರ್ಷ ವರ್ಷಗಳಿಂದಲೂ ಈ ವಿವಾದ ನಡೆಯುತ್ತಿದ್ದರೂ,  ಸದ್ಯ ಸುಮಾರು 70 ವರ್ಷಗಳಿಂದ ನ್ಯಾಯಾಲಯದಲ್ಲಿ ವಾದ-ವಿವಾದ ನಡೆಯುತ್ತಿದೆ.

ವಿವಾದದ ಕೇಂದ್ರ ಬಿಂದುವಾಗಿರುವ 2.77 ಎಕರೆ ಪ್ರದೇಶದ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ನ  ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾ.ಎಸ್.ಎ.ಬೋಬ್ಡೆ, ಡಿ. ವೈ.ಚಂದ್ರಚೂಡ್, ನ್ಯಾ.ಅಶೋಕ್ ಭೂಷಣ್ ಮತ್ತು ಎಸ್.ಅಬ್ದುಲ್ ನಜೀರ್ ಅವನ್ನೊಳಗೊಂಡ ಸಾಂವಿಧಾನಿಕ ಪೀಠವು ಪ್ರಕಟಿಸಲಿದೆ.  ಈ ಪ್ರಕರಣದ ಸಂಬಂಧ 40 ದಿನಗಳ ಕಾಲ ಸುಧೀರ್ಘ ವಿಚಾರಣೆ ನಡೆಸಿದ್ದ ಪೀಠವು ಪ್ರಕಟಿಸುವ ತೀರ್ಪು ಮಹತ್ವ ಪಡೆದಿದೆ.

ಈ ಹಿಂದೆ 2010 ರಲ್ಲಿ ಅಲಹಬಾದ್ ಹೈಕೋರ್ಟ್, ಅಯೋಧ್ಯೆಯಲ್ಲಿನ 2.77 ಎಕರೆ ವಿವಾದಿತ ಭೂಮಿಯನ್ನು ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರಾ ಹಾಗೂ ರಾಮ್ ಲಲ್ಲಾ ನಡುವೆ ಸಮಾನವಾಗಿ ಹಂಚಿಕೆ ಮಾಡಲು ಅಲಹಬಾದ್ ಹೈಕೋರ್ಟ್ ಆದೇಶಿಸಿತ್ತು. ಈ  ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆ ನಡೆದಿತ್ತು.

ವಿವಾದದ ಸಂಕ್ಷಿಪ್ತ ವಿವರ :

ಅಯೋಧ್ಯೆಯು ಹಿಂದೂ ಆರಾಧ್ಯ ದೇವರು ರಾಮನ ಜನ್ಮಭೂಮಿ. ಇಲ್ಲಿ  ರಾಮನ ದೇವಸ್ಥಾನವೂ ಇದೆ ಎಂಬುದು ನಂಬಿಕೆ ಹಾಗೂ ಪುರಾಣಗಳ ಉಲ್ಲೇಖ. ಆದರೆ  ಮೊಘಲ್ ದೊರೆ ಬಾಬರ್ 1528 ರಲ್ಲಿ ಈ ದೇವಸ್ಥಾನದ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿ ಅಲ್ಲಿ ಮಸೀದಿ ನಿರ್ಮಾಣ ಮಾಡಿದ್ದು ಇದು ಬಾಬರೀ ಮಸೀದಿ ಎಂದು ಹೇಳಲಾಗುತ್ತದೆ. ಈ ಪ್ರದೇಶವು ಉತ್ತರ ಪ್ರದೇಶ ರಾಜ್ಯದ ಫೈಜಾಬಾದ್ ಜಿಲ್ಲೆಯಲ್ಲಿದೆ. ಈ ಜಾಗದಲ್ಲಿ  ದೇವಸ್ಥಾನ ನಿರ್ಮಾಣ ಹಾಗೂ ಮಸೀದಿ ಮತ್ತು ಜಾಗಕ್ಕೆ ಸಂಬಂಧಿಸಿ ವಿವಾದ ಆರಂಭವಾಗಿತ್ತು. 1992 ರ ಡಿಸೆಂಬರ್ 6 ರಂದು ರಾಮ ಕರಸೇವಕರು ಈ ಮಸೀದಿ  ಕೆಡವಿ ಹಾಕಿದರು. ಆ ಬಳಿಕವೂ  2.77 ಎಕರೆ ಭೂಮಿ ಇಷ್ಟು ವರ್ಷಗಳ ಕಾಲ ವಿವಾದದ ಕೇಂದ್ರಬಿಂದುವಾಗಿತ್ತು.

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

6 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

15 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

22 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

22 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago